ರೈತರ ಹೋರಾಟಕ್ಕೆ ಸಂದ ಜಯ : 1628 ಫಲಾನುಭವಿಗಳಿಗೆ ರೂ. 20 ಕೋಟಿ ಹಣ ವಿತರಣೆ
Team Udayavani, Mar 12, 2022, 6:44 PM IST
ರಬಕವಿ-ಬನಹಟ್ಟಿ: 2018-19 ರಲ್ಲಿ ತೇರದಾಳದ ಸಾವರಿನ್ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ 1628 ಜನ ರೈತ ಫಲಾನುಭವಿಗಳಿಗೆ ಅಂದಾಜು ರೂ. 20 ಕೋಟಿ ಹಣ ಇದೀಗ ರೈತರ ಖಾತೆಗಳಿಗೆ ನೇರವಾಗಿ ಜಮೆಯಾಗಲಿದ್ದು, ಇದು ಮೂರು ವರ್ಷಗಳಿಂದ ಕಬ್ಬು ಪೂರೈಸಿದ ರೈತರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಅವರು ಶನಿವಾರ ರಬಕವಿಯ ಜಿಎಲ್ಬಿಸಿ ನಿರೀಕ್ಷಣಾ ಮಂದಿರದಲ್ಲಿ ಹಮ್ಮಿಕೊಳ್ಳಲಾದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ರೈತರಿಗೆ ತೊಂದರೆಯ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಬಿಜೆಪಿ ಸರ್ಕಾರ ಯಾವಾಗಲೂ ರೈತರ ಪರವಾಗಿರುವ ಸರ್ಕಾರವಾಗಿದೆ. ಮುಂದಿನ ದಿನಗಳಲ್ಲಿ ತೇರದಾಳ ಸಾವರಿನ್ ಸಕ್ಕರೆ ಕಾರ್ಖಾನೆಯನ್ನು ನಡೆಸಲು ಸಮರ್ಥವಾಗಿರುವವರಿಗೆ ನೀಡುವ ನಿಟ್ಟಿನಲ್ಲಿ ಚರ್ಚೆ ಮಾಡಲಾಗುವುದು ಎಂದು ಶಾಸಕ ಸವದಿ ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಚುನ್ನಪ್ಪ ಪೂಜಾರಿ ಮಾತನಾಡಿ, ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತವಾದ ಬೆಲೆ ದೊರೆಯುತ್ತಿಲ್ಲ. ಆದ್ದರಿಂದ ಈ ಕುರಿತು ಎಲ್ಲ ಶಾಸಕರು ವಿಧಾನ ಸಭೆಯಲ್ಲಿ ಈ ಕುರಿತು ಚರ್ಚೆ ಮಾಡಬೇಕು. ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ದೊರೆತರೆ ರೈತರು ಆರ್ಥಿಕವಾಗಿ ಸಬಲರಾಗುತ್ತಾರೆ ಎಂದರು. ಇದೇ ಸಂದರ್ಭದಲ್ಲಿ ರೈತ ಮುಖಂಡರಾದ ಗಂಗಾಧರ ಮೇಟಿ, ಹೊನ್ನಪ್ಪ ಬಿರಡಿ ಮಾತನಾಡಿದರು.
ಇದನ್ನೂ ಓದಿ : ನಾನು ಪಕ್ಷೇತರನಾಗಿ ಆಯ್ಕೆಯಾಗಿದ್ದೇ ಒಂದು ಪವಾಡ: ಗೋವಾ ಶಾಸಕ ಅಲೆಕ್ಸ್
ವೇದಿಕೆಯ ಮೇಲೆ ಜಮಖಂಡಿ ಉಪ ವಿಭಾಗಾಧಿಕಾರಿ ಡಾ.ಸಿದ್ದು ಹುಲ್ಲೊಳ್ಳಿ, ತಹಶೀಲ್ದಾರ್ ಎಸ್.ಬಿ.ಇಂಗಳೆ, ಬಾಗಲಕೋಟೆ ಜಿಲ್ಲೆಯ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸುಭಾಸ ಶಿರಗೂರ, ಶ್ರೀಕಾಂತ ಘೂಳನ್ನವರ, ಕರಿಗೌಡರ, ಲಕ್ಷ್ಮಣ ಬ್ಯಾಳಿ, ಬಾಬಾಗೌಡ ಪಾಟೀಲ, ಅಶೋಕ ದೇಸಾಯಿ ಇದ್ದರು.
ರೈತ ಮುಖಂಡ ಬಂಡು ಪಕಾಲಿ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ರಬಕವಿ ಬನಹಟ್ಟಿ, ಜಮಖಂಡಿ, ಮುಧೋಳ ಹಾಗೂ ನೆರೆಯ ಅಥಣಿ ತಾಲ್ಲೂಕಿನ ಕಬ್ಬು ಪೂರೈಸಿದ ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್