ಇಂದು ಮತ್ತು ನಾಳೆ ಬೆಂಗಳೂರು ಮೆಟ್ರೋ ನೇರಳೆ ಮಾರ್ಗದ ಸೇವೆ ವ್ಯತ್ಯಯ
Team Udayavani, Dec 4, 2021, 11:26 AM IST
ಬೆಂಗಳೂರು: “ನಮ್ಮ ಮೆಟ್ರೋ’ ನೇರಳೆ ಮಾರ್ಗದಲ್ಲಿದುರಸ್ತಿ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಆ ಮಾರ್ಗದಲ್ಲಿ ಶನಿವಾರ ಮತ್ತು ಭಾನುವಾರ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಟ್ರಿನಿಟಿ- ಹಲಸೂರು ನಿಲ್ದಾಣಗಳ ನಡುವೆ ನಿರ್ವಹಣೆಗೆ ಸಂಬಂಧಿಸಿದ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆ 5ರಿಂದ ಭಾನುವಾರ ಬೆಳಿಗ್ಗೆ 7ರವರೆಗೆ ಬೈಯಪ್ಪನಹಳ್ಳಿ ನಿಲ್ದಾಣದಿಂದ ಎಂ.ಜಿ. ರಸ್ತೆ ನಿಲ್ದಾಣದವರೆಗೆ ಮೆಟ್ರೋ ಸೇವೆ ಇರುವುದಿಲ್ಲ. ಉಳಿದಂತೆ ಎಂ.ಜಿ. ರಸ್ತೆಯಿಂದ ಕೆಂಗೇರಿ ಹಾಗೂ ಹಸಿರು ಮಾರ್ಗದ ನಾಗಸಂದ್ರ- ರೇಷ್ಮೆ ಸಂಸ್ಥೆ ನಡುವೆ ಎಂದಿನಂತೆ ಮೆಟ್ರೋ ಕಾರ್ಯಾಚರಣೆ ಮಾಡಲಿದೆ ಎಂದು ಬಿಎಂಆರ್ ಸಿಎಲ್ ಸ್ಪಷ್ಟಪಡಿಸಿದೆ.
ಭಾನುವಾರ (ಡಿ. 5) ಬೆಳಗ್ಗೆ 7ರಿಂದ ಪ್ರಸ್ತುತ ವೇಳಾಪಟ್ಟಿಯಂತೆ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ಲಭ್ಯ ಇರಲಿದೆ ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ. ಈ ಹಿಂದೆ ಅ. 9ರಂದು ಇದೇ ಮಾರ್ಗದ ಟ್ರಿನಿಟಿ- ಹಲಸೂರು ನಡುವೆ ಅದೇ ನಿರ್ವಹಣಾ ಕಾರ್ಯಕ್ಕಾಗಿ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ