ಬೆಂಗಳೂರು: ಹೊಟ್ಟೆಯಲ್ಲಿ 7 ಕೋಟಿ ರೂ. ಮೌಲ್ಯದ ಹೆರಾಯಿನ್ !
ಶಾರ್ಜಾದಿಂದ ರಾಜಧಾನಿಗೆ ಹೊಟ್ಟೆಯಲ್ಲಿ ಮಾತ್ರೆಗಳ ಮೂಲಕ ಡ್ರಗ್ಸ್ ಪೂರೈಕೆ, ಉಗಾಂಡ ಪ್ರಜೆ ಬಂಧನ
Team Udayavani, Feb 25, 2022, 1:34 PM IST
ಬೆಂಗಳೂರು: ಮಾತ್ರೆಗಳಲ್ಲಿ ಹೆರಾಯಿನ್ ತುಂಬಿ ಹೊಟ್ಟೆಯಲ್ಲಿ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ಉಗಾಂಡ ಪ್ರಜೆಯೊಬ್ಬ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಾನೆ. ಆತನಿಂದ ಏಳು ಕೋಟಿ ರೂ. ಮೌಲ್ಯದ 79 ಹೆರಾಯಿನ್ ಮಾತ್ರೆಗಳು ವಶಕ್ಕೆ ಪಡೆಯಲಾಗಿದೆ.
ಕಳೆದ ವಾರ ಶಾರ್ಜಾದಿಂದ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆರೋಪಿ ಬರು ತ್ತಿರುವ ಮಾಹಿತಿ ಸಿಕ್ಕಿತ್ತು. ಅಲ್ಲದೆ, ಎಲ್ಲ ಪ್ರಯಾಣಿಕರನ್ನು ಲೋಹ ಶೋಧಕ ಯಂತ್ರದ ಮೂಲಕ ತಪಾಸಣೆ ನಡೆಸಲಾಗಿತ್ತು. ಆರೋಪಿ ತಪಾಸಣೆ ವೇಳೆ ಶಬ್ಧ ಬಂದಿದೆ. ಅನುಮಾನದ ಮೇರೆಗೆ ವಿಚಾರಣೆ ಕೊಠಡಿಗೆ ಕರೆ ದೊಯ್ದು ಪರಿಶೀಲಿಸಿದಾಗ ಪ್ರಾಥಮಿಕವಾಗಿ ಹೊಟ್ಟೆ ಯಲ್ಲಿ ಹೆರಾಯಿನ್ ತುಂಬಿದ ಮಾತ್ರೆಗಳು ಇವೆ ಎಂದು ಗೊತ್ತಾಗಿದೆ. ನಂತರ ಆತನಿಗೆ ಸುಮಾರು ಎರಡು ದಿನಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ, ಹೊಟ್ಟೆಯೊಳಗಿದ್ದ ಹೆರಾಯಿನ್ ಮಾತ್ರೆಗಳನ್ನು ಹೊರತೆಗೆಯಲಾಗಿದೆ ಎಂದು ಕಸ್ಟಮ್ಸ್ ಮೂಲಗಳು ತಿಳಿಸಿವೆ.
ಕಳೆದ ವರ್ಷ ಕೂಡ ಇದೇ ಮಾದರಿಯಲ್ಲಿ ವಿದೇಶಿ ಪ್ರಜೆಯೊಬ್ಬ ಡ್ರಗ್ಸ್ ಮಾತ್ರೆ ನುಂಗಿ ಬೆಂಗಳೂರಿಗೆ ಬಂದಿ ದ್ದಾಗ ಆತನನ್ನು ಬಂಧಿಸಲಾಗಿತ್ತು. ಇದೀಗ ಉಗಾಂಡಾ ಪ್ರಜೆಯನ್ನು ಬಂಧಿಸಲಾಗಿದೆ. ಈತನ ವಿಚಾರಣೆ ವೇಳೆ ಉಗಾಂಡಾ ಹಾಗೂ ಸಮೀಪದ ದೇಶಗಳಲ್ಲಿ ಅಂತಾರಾಷ್ಟ್ರೀಯ ಡ್ರಗ್ಸ್ನ ಬೃಹತ್ ಜಾಲವಿದೆ. ಅಲ್ಲದೆ, ಕರ್ನಾಟಕ ಮತ್ತು ತಮಿಳುನಾಡಿನ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುವ ಪೆಡ್ಲರ್ಗಳಿಗೆ ಸರಬರಾಜು ಮಾಡುವ ಉದ್ದೇಶವನ್ನು ಆರೋಪಿ ಹೊಂದಿದ್ದ ಎಂಬ ಮಾಹಿತಿ ಸಿಕ್ಕಿದೆ ಎಂದು ಕಸ್ಟಮ್ಸ್ ಮೂಲಗಳು ತಿಳಿಸಿವೆ.
ಚಿನ್ನದ ಪುಡಿ ಪೇಸ್ಟ್
ಮತ್ತೂಂದು ಪ್ರಕರಣದಲ್ಲಿ ನೋವು ನಿವಾರಕ ಬೆಲ್ಟ್ನಲ್ಲಿ ಚಿನ್ನದ ಪೇಸ್ಟ್ಅನ್ನು ಬಟ್ಟಿಟ್ಟುಕೊಂಡು ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಆತನಿಂದ 7 ಲಕ್ಷ ಮೌಲ್ಯದ 1 ಕೆ.ಜಿ 400 ಗ್ರಾಂ ಚಿನ್ನ ಜಪ್ತಿ ಮಾಡಿದ್ದಾರೆ. ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಆರೋಪಿಯನ್ನು ತಪಾಸಣೆ ನಡೆಸಿದಾಗ ಬೆಲ್ಟ್ ಸಿಕ್ಕಿತ್ತು.
ಆದರೆ, ಸಾಮಾನ್ಯ ಗಾತ್ರಕ್ಕಿಂತ ಬೆಲ್ಟ್ನ ಗಾತ್ರದಲ್ಲಿ ಕೆಲವೊಂದು ವ್ಯತ್ಯಾಸಗಳು ಕಂಡು ಬಂದ ಹಿನ್ನೆಲೆಯಲ್ಲಿ ಅನುಮಾನದ ಮೇರೆಗೆ ವಶಕ್ಕೆ ಪಡೆದು ಪರಿಶೀಲಿಸಿದಾಗ ಚಿನ್ನದ ಪೇಸ್ಟ್ಅನ್ನು ಆರೋಪಿ ಬೆಲ್ಟ್ ಒಳಭಾಗದಲ್ಲಿ ಇಟ್ಟುಕೊಂಡಿದ್ದ. ಆರೋಪಿ ದುಬೈನ ಕೆಲ ವ್ಯಕ್ತಿಗಳ ಸೂಚನೆ ಮೇರೆಗೆ ಬೆಂಗಳೂರಿನ ಚಿನ್ನದ ವ್ಯಾಪಾರಿಗಳಿಗೆ ಸರಬರಾಜು ಮಾಡಲು ಬಂದಿದ್ದ ಎಂಬುದು ಗೊತ್ತಾಗಿದೆ ಎಂದು ಕಸ್ಟಮ್ಸ್ ಅದಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ