ಬಂಟ್ವಾಳ: ಮತ್ತಷ್ಟು ಕ್ಷೇತ್ರಗಳ ಕಡಿತ : ಉಳ್ಳಾಲಕ್ಕೆ ಪ್ರತ್ಯೇಕ ಜಿ. ಪಂ., ತಾ.ಪಂ.ಕ್ಷೇತ್ರ


Team Udayavani, Feb 23, 2021, 5:10 AM IST

ಬಂಟ್ವಾಳ: ಮತ್ತಷ್ಟು ಕ್ಷೇತ್ರಗಳ ಕಡಿತ : ಉಳ್ಳಾಲಕ್ಕೆ ಪ್ರತ್ಯೇಕ ಜಿ. ಪಂ., ತಾ.ಪಂ.ಕ್ಷೇತ್ರ

ಬಂಟ್ವಾಳ: ಕೆಲವು ದಿನಗಳ ಹಿಂದೆ ರಾಜ್ಯ ಚುನಾವಣ ಆಯೋಗವು ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರ ಗಳನ್ನು ಪುನರ್‌ ವಿಂಗಡಣೆ ಮಾಡುವ ದೃಷ್ಟಿಯಿಂದ ಸಂಖ್ಯೆಗಳನ್ನು ನೀಡಿದ್ದು, ಇದೀಗ ಉಳ್ಳಾಲ ತಾಲೂಕಿಗೆ ಪ್ರತ್ಯೇಕ ಚುನಾವಣೆಯ ದೃಷ್ಟಿಯಿಂದ ಬಂಟ್ವಾಳ ತಾಲೂಕಿನ ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರಗಳಲ್ಲಿ ಮತ್ತಷ್ಟು ವ್ಯತ್ಯಯ ಆಗಲಿದೆ.

ಈ ಹಿಂದೆ 34 ಕ್ಷೇತ್ರಗಳನ್ನು ಹೊಂದಿರುವ ಬಂಟ್ವಾಳ ತಾಲೂಕು ಪಂಚಾಯತ್‌ಗೆ ಕಳೆದ ಕೆಲವು ದಿನಗಳ ಹಿಂದೆ ಬಂದ ಆದೇಶದಲ್ಲಿ ಅದು 28ಕ್ಕೆ ಇಳಿಯಲ್ಪಟ್ಟಿತ್ತು. ಆದರೆ ಈ ಬಾರಿ ಉಳ್ಳಾಲ ತಾ.ಪಂ.ಗೆ ಪ್ರತ್ಯೇಕ ಚುನಾವಣೆ ಇಲ್ಲ ಎನ್ನಲಾಗಿತ್ತು. ಆದರೆ ಹೊಸ ಆದೇಶದ ಪ್ರಕಾರ ಈ ಬಾರಿಯೇ ಉಳ್ಳಾಲ ತಾ.ಪಂ.ಗೆ ಪ್ರತ್ಯೇಕ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಹೀಗಾಗಿ ಬಂಟ್ವಾಳ ತಾ.ಪಂ.ನ ಸ್ಥಾನಗಳು ಮತ್ತಷ್ಟು ಇಳಿಕೆಯಾಗಲಿವೆ.

ಈಗಾಗಲೇ ಉಳ್ಳಾಲ ತಾಲೂಕಿಗೆ ತಹಶೀಲ್ದಾರ್‌ ನೇಮಕವಾಗಿದ್ದು, ಅವರ ನೇತೃತ್ವದಲ್ಲೇ ತಾಲೂಕಿನಲ್ಲಿ ಜಿ.ಪಂ., ತಾ.ಪಂ. ಚುನಾವಣೆ ನಡೆಯುವ ಸಾಧ್ಯತೆ ಇದೆ. ವಿರೋಧದ ಮಧ್ಯೆಯೂ ಬಂಟ್ವಾಳದ ಸಜೀಪನಡು ಗ್ರಾ.ಪಂ. ಉಳ್ಳಾಲ ತಾಲೂಕಿಗೆ ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಿದೆ.

ಈ ಹಿಂದಿನ ಆದೇಶದ ಪ್ರಕಾರ 30ರ ಬದಲು ಬಂಟ್ವಾಳ ತಾಲೂಕಿನಲ್ಲಿ 28 ತಾ.ಪಂ. ಕ್ಷೇತ್ರಗಳನ್ನು ನಿಗದಿ ಮಾಡ ಲಾಗಿತ್ತು. ಆದರೆ ಫೆ. 18ರಂದು ಹೊಸ ಆದೇಶ ಬಂದಿದ್ದು, 28ರ ಬದಲು 24 ತಾ.ಪಂ. ಕ್ಷೇತ್ರಗಳು ಬಂಟ್ವಾಳದಲ್ಲಿ ಉಳಿಯಲಿವೆ. ಸದ್ಯಕ್ಕೆ ಬಂಟ್ವಾಳ ತಾ.ಪಂ. ವ್ಯಾಪ್ತಿಯಲ್ಲಿರುವ ನರಿಂಗಾನ, ಸಜೀಪಪಡು, ಕುರ್ನಾಡು, ಬಾಳೆಪುಣಿ ಕ್ಷೇತ್ರ ಪ್ರತ್ಯೇಕಗೊಳ್ಳುವ ಸಾಧ್ಯತೆ ಇದೆ.

ಪ್ರಸ್ತುತ ಆಡಳಿತದಲ್ಲಿರುವ ಕ್ಷೇತ್ರಕ್ಕಿಂತ ಒಟ್ಟು 10 ಕ್ಷೇತ್ರಗಳು ಬಂಟ್ವಾಳದಲ್ಲಿ ಕಡಿಮೆಯಾಗಲಿವೆ. ತಾಲೂಕಿನಲ್ಲಿರುವ ಜಿ.ಪಂ. ಕ್ಷೇತ್ರದಲ್ಲೂ ವ್ಯತ್ಯಾಸವಾಗಿದ್ದು, ಹಿಂದಿನ ಆದೇಶದಲ್ಲಿ 9 ಜಿ.ಪಂ.ಕ್ಷೇತ್ರಗಳ ಬದಲು 10 ಆಗಬೇಕು ಎಂದು ಆದೇಶದಲ್ಲಿ ತಿಳಿಸಲಾಗಿತ್ತು. ಆದರೆ ಹೊಸ ಆದೇಶದಲ್ಲಿ ಮತ್ತೆ ಅದನ್ನು 9ಕ್ಕೆ ಇಳಿಸಲಾಗಿದೆ. ಹೀಗಾಗಿ ಜಿ.ಪಂ. ಕ್ಷೇತ್ರ ಪುನರ್‌ ವಿಂಗಡಣೆಯಾಗಲಿದ್ದರೂ ಸಂಖ್ಯೆ ಮಾತ್ರ ಸದ್ಯಕ್ಕೆ ಇರುವ 9 ಕ್ಷೇತ್ರ ಮುಂದುವರಿಯಲಿದೆ. ಬಂಟ್ವಾಳದ ಕುರ್ನಾಡು ಜಿ.ಪಂ. ಕ್ಷೇತ್ರ ಸಂಪೂರ್ಣ ವಾಗಿ ಉಳ್ಳಾಲ ಭಾಗಕ್ಕೆ ಹೋಗಲಿದೆ.

7 ಗ್ರಾ.ಪಂ.ಗಳು ಕಡಿತ
ಪ್ರಸ್ತುತ ಬಂಟ್ವಾಳ ತಾಲೂಕಿನಲ್ಲಿರುವ ಬಾಳೆಪುಣಿ, ಇರಾ, ಕುರ್ನಾಡು, ನರಿಂಗಾನ, ಫಜೀರು, ಸಜೀಪನಡು, ಸಜೀಪಪಡು ಗ್ರಾ.ಪಂ.ಗಳು ಉಳ್ಳಾಲಕ್ಕೆ ಸೇರ್ಪಡೆಯಾಗಲಿವೆ. ಈ ಹಿಂದೆ ಮಂಗಳೂರು ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾ.ಪಂ.ಗಳು ಉಳ್ಳಾಲಕ್ಕೆ ಸೇರ್ಪಡೆಯ ಮಾತುಗಳು ಕೇಳಿಬಂದರೂ ವಿರೋಧದ ಪರಿಣಾಮ ಪುದು, ತುಂಬೆ ಹಾಗೂ ಮೇರಮಜಲು ಗ್ರಾ.ಪಂ.ಗಳು ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲೇ ಉಳಿಯಲಿವೆ. ಆದರೆ ಅವರ ವಿಧಾನಸಭಾ ಕ್ಷೇತ್ರ ಮಂಗಳೂರು ಆಗಿರುತ್ತದೆ.

ಹೊಸ ಆದೇಶ ಬಂದಿದೆ
ಬಂಟ್ವಾಳ ತಾಲೂಕು ವ್ಯಾಪ್ತಿಗೆ ಬರುವ ಉಳ್ಳಾಲ ಭಾಗದ ಜಿ.ಪಂ.ಹಾಗೂ ತಾ.ಪಂ.ಕ್ಷೇತ್ರಗಳನ್ನು ಪ್ರತ್ಯೇಕ ಮಾಡುವಂತೆ ಆದೇಶ ಬಂದಿದೆ. ಹೀಗಾಗಿ ಕಳೆದ ಆದೇಶದಲ್ಲಿದ್ದ ತಾ.ಪಂ.ನ 28ರ ಬದಲು 24 ಹಾಗೂ ಜಿ.ಪಂ.ನ 10ರ ಬದಲು 9 ಕ್ಷೇತ್ರಗಳು ಬಂಟ್ವಾಳ ತಾಲೂಕಿನಲ್ಲಿ ಉಳಿಯಲಿವೆ.
-ರಶ್ಮಿ ಎಸ್‌.ಆರ್‌., ತಹಶೀಲ್ದಾರ್‌, ಬಂಟ್ವಾಳ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.