Bantwal: ಬಾಡಿಗೆ ಕೇಳಿದಾಗ ಹಲ್ಲೆ; ಜೀವಬೆದರಿಕೆ
Team Udayavani, Feb 3, 2024, 11:43 PM IST
ಬಂಟ್ವಾಳ: ಕಳೆದ ಒಂದು ವರ್ಷದಿಂದ ಕೊಡಲು ಬಾಕಿ ಇದ್ದ ಬಾಡಿಗೆ ಕೇಳಲು ಹೋದ ಅಪಾರ್ಟ್ಮೆಂಟ್ ಮಾಲಕರಿಗೆ ಬಾಡಿಗೆ ಮನೆ ಪಡೆದಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿದ ಘಟನೆ ಫೆ. 2ರಂದು ಫರಂಗಿಪೇಟೆ ಸಮೀಪದ ಕುಂಪನಮಜಲುನಲ್ಲಿ ನಡೆದಿದೆ.
ಬಾಡಿಗೆದಾರ ಶಬೀರ್ ಪ್ರಕರಣ ಆರೋಪಿಯಾಗಿದ್ದು, ಆತ ಅಪಾರ್ಟ್ಮೆಂಟ್ ಮಾಲಕ ಸಲೀಂ ಅಪ್ತಾಫ್ ಅವರಿಗೆ ಹಲ್ಲೆ ನಡೆಸಿದ್ದಾನೆ. ಕುಂಪನಮಜಲಿನಲ್ಲಿ ಡೈಮಂಡ್ ಹೋಂ ಅಪಾರ್ಟ್ಮೆಂಟ್ನಲ್ಲಿ ಆರೋಪಿ ಶಬೀರ್ ಬಾಡಿಗೆಗೆ ವಾಸವಾಗಿದ್ದು, ಕಳೆದ ಒಂದು ವರ್ಷದಿಂದ ಬಾಡಿಗೆ ಕೊಟ್ಟಿರಲಿಲ್ಲ.
ಜತೆಗೆ ಆತನ ಬಾಡಿಗೆ ಕರಾರು ಮುಗಿದ ಕಾರಣ ಆತನಿಗೆ ವಿಚಾರ ತಿಳಿಸಲು ಮಾಲಕರು ಅಪಾರ್ಟ್ಮೆಂಟ್ಗೆ ತೆರಳಿದ ವೇಳೆ ಆರೋಪಿ ಅವರನ್ನು ತಡೆದು ಹಲ್ಲೆ ನಡೆಸಿ ಬಾಡಿಗೆ ಕೇಳಲು ಬಂದರೆ ಕೊಲ್ಲದೆ ಬಿಡುವುದಿಲ್ಲವೆಂದು ಬೆದರಿಕೆ ಹಾಕಿ ಕತ್ತಿ ತೆಗೆಯಲು ಹೋಗಿದ್ದಾನೆ. ಈ ವೇಳೆ ಮಾಲಕರು ತಪ್ಪಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ