ಬಂಟ್ವಾಳ, ಬೆಳ್ತಂಗಡಿ: ಹೆಚ್ಚಿದ ಜನಸಂಚಾರ; ತೆರೆದ ಅಂಗಡಿ


Team Udayavani, May 4, 2020, 11:01 PM IST

ಬಂಟ್ವಾಳ, ಬೆಳ್ತಂಗಡಿ: ಹೆಚ್ಚಿದ ಜನಸಂಚಾರ; ತೆರೆದ ಅಂಗಡಿ

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಹುತೇಕ ಪ್ರದೇಶಗಳಲ್ಲಿ ಹೆಚ್ಚಿನ ಜನಸಂಚಾರ ಕಂಡುಬಂತು. ತಾಲೂಕಿನ ನಗರ ಪ್ರದೇಶಗಳಲ್ಲಿ ಬಟ್ಟೆ ಮಳಿಗೆಗಳು, ಸೆಲೂನ್‌, ಬ್ಯೂಟಿ ಪಾಲರ್‌ಗಳನ್ನು ಹೊರತುಪಡಿಸಿ ಉಳಿದಂತೆ ಬಹುತೇಕ ಎಲ್ಲ ವಾಪಾರ-ವಹಿವಾಟುಗಳು ನಡೆದವು.

ಬಸ್‌ ಓಡಾಟವಿಲ್ಲ
ಆಟೋಗಳು ಹಾಗೂ ಖಾಸಗಿ ವಾಹನಗಳ ಸಂಚಾರ ಕಂಡುಬಂದಿದ್ದು, ಬಸ್‌ಗಳ ಓಡಾಟವಿರಲಿಲ್ಲ. ದ್ವಿಚಕ್ರ ವಾಹನಗಳ ಓಡಾಟವೂ ಕಂಡುಬಂದಿತ್ತು.

ಸರಕಾರಿ ಕಚೇರಿಗಳು ತೆರೆದಿದ್ದರೂ ಸಾರ್ವಜನಿಕರಿಗೆ ಯಾವುದೇ ಸೇವೆಗಳು ಇರಲಿಲ್ಲ. ಉಳಿದಂತೆ ಬಹುತೇಕ ಖಾಸಗಿ ಕಚೇರಿಗಳು ತೆರೆದುಕೊಂಡಿದ್ದವು.

ತಾಲೂಕಿನ ಬಿ.ಸಿ. ರೋಡ್‌, ಕೈಕಂಬ, ಫರಂಗಿಪೇಟೆ, ಮೆಲ್ಕಾರ್‌, ಕಲ್ಲಡ್ಕ, ಮಾಣಿ, ವಿಟ್ಲ, ಸಿದ್ಧಕಟ್ಟೆ, ವಾಮದಪದವು, ಪುಂಜಾಲಕಟ್ಟೆ ಮೊದಲಾದ ಪ್ರದೇಶಗಳಲ್ಲಿ ಜನಸಂಚಾರ ಕಂಡುಬಂದಿತ್ತು.

ಬಂಟ್ವಾಳ ಪೇಟೆಯ ಸೀಲ್‌ಡೌನ್‌ ಪ್ರದೇಶ ಹೊರತುಪಡಿಸಿ ಬೈಪಾಸ್‌, ಬಡ್ಡಕಟ್ಟೆಗಳಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿದ್ದವು.ಗ್ರಾಮೀಣ ಪ್ರದೇಶಗಳಲ್ಲೂ ಅಂಗಡಿಗಳು ತೆರೆದಿದ್ದು, ಜನ ಸಂಚಾರವೂ ಕಂಡುಬಂತು.

ಬೆಳ್ತಂಗಡಿ: ತಾಲೂಕಿನಲ್ಲಿ ಬೇಕರಿ, ಹೋಟೆಲ್‌ ಪಾರ್ಸೆಲ್‌, ವಾಹನ ಶೋರೂಮ್‌, ಫ್ಯಾನ್ಸಿ, ಟೈಲರಿಂಗ್‌, ಕೃಷಿ ಉಪಕರಣ ವಸ್ತುಗಳು, ಗೃಹೋಪಕರಣ ಮಳಿಗೆ, ಎಲೆಕ್ಟ್ರಾನಿಕ್ಸ್‌, ಮೊಬೈಲ್‌ ಅಂಗಡಿ ಮುಂಗಟ್ಟು, ವೈನ್‌ ಶಾಪ್‌ ತೆರೆದಿದ್ದವು. ಜನದಟ್ಟಣೆಯೊಂದಿಗೆ ವಾಹನದಟ್ಟಣೆಯೂ ಕಂಡುಬಂತು.

ಕೆಲವೆಡೆ ಚಿನ್ನಾಭರಣ, ಸ್ಟುಡಿಯೋ, ಪಾದರಕ್ಷೆ ಅಂಗಡಿಗಳನ್ನು ಪೊಲೀಸರು ಬಂದ್‌ ಮಾಡುವಂತೆ ಸೂಚಿಸಿದ್ದರು. ಬಳಿಕ ಜಿಲ್ಲಾಡಳಿತದ ಆದೇಶದಂತೆ ತಹಶೀಲ್ದಾರ್‌ ಸೂಚನೆ ಮೇರೆಗೆ ಅನಂತರ ತೆರೆಯಲಾಯಿತು.ಗ್ರಾಮೀಣ ಭಾಗ ಸಹಿತ ಪ್ರಮುಖ ಪೇಟೆಗಳಲ್ಲಿ ಮಧ್ಯಾಹ್ನ ಬಳಿಕ ಜನರ ಓಡಾಟ ವಿರಳವಾಗುತ್ತು. ಬಹುತೇಕ ಅಂಗಡಿ ಮುಂಗಟ್ಟು ಮಧ್ಯಾಹ್ನದ ಬಳಿಕ ಬಂದ್‌ ಮಾಡಿದ್ದು ಕಂಡುಬಂತು.

ಸಾರ್ವಜನಿಕರಲ್ಲಿ ಮನವಿ
ಅಗತ್ಯ ವಸ್ತುಗಳ ಪೂರೈಕೆಗೆ ಬೇರೆ ಜಿಲ್ಲೆಗಳಿಗೆ ಮತ್ತು ಬೇರೆ ರಾಜ್ಯಗಳಿಗೆ ತೆರಳುತ್ತಿರುವ ಚಾಲಕರು ಮತ್ತು ಸಹಾಯಕರು ರೋಗಾಣು ಹರಡುವ ಸಾಧ್ಯತೆ ಇರುವುದರಿಂದ ಅವರಿಗೆ ಊರಿಗೆ ಬಂದ ಸಮಯದಲ್ಲಿ ಮನೆಯಲ್ಲಿಯೇ ಇರಲು ವಿನಂತಿಸಿದೆ. ಅವರ ಮನೆಯ ಸದಸ್ಯರೂ ಇತರರೊಂದಿಗೆ ಬೆರೆಯಬಾರದು. ಸಾರ್ವಜನಿಕರು ಸಹ ಇಂತಹ ವ್ಯಕ್ತಿಗಳಿಂದ ದೂರವಿರಬೇಕು. ಇದನ್ನು ಪಾಲಿಸದೆ ಇದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.