Bantwal: ಹೊಕ್ಕಾಡಿಗೋಳಿ ಅಕ್ಕಪಕ್ಕ ಎರಡು ಕಂಬಳ!


Team Udayavani, Mar 17, 2024, 7:25 AM IST

Bantwal: ಹೊಕ್ಕಾಡಿಗೋಳಿ ಅಕ್ಕಪಕ್ಕ ಎರಡು ಕಂಬಳ!

ಬಂಟ್ವಾಳ: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಬಂಟ್ವಾಳ ಸಿದ್ಧಕಟ್ಟೆ ಸಮೀಪದ ಹೊಕ್ಕಾಡಿಗೋಳಿಯಲ್ಲಿ ಶನಿವಾರ ಅಕ್ಕಪಕ್ಕದಲ್ಲೇ ಎರಡು ಕಂಬಳಗಳು ನಡೆದವು. ಒಂದೇ ಕಂಬಳ ನಡೆಯಲು ಹಲವು ಸುತ್ತಿನ ಮಾತುಕತೆಗಳು, ಕಾನೂನು ಹೋರಾಟ ನಡೆದರೂ ವಿಫಲವಾಗಿ ಎರಡೂ ಕಂಬಳಗಳು ಯಶಸ್ವಿಯಾಗಿ ನಡೆದಿವೆ.

ಹಿಂದೆ ಒಂದು ಕಂಬಳ ನಡೆಯುತ್ತಿದ್ದ ಹೊಕ್ಕಾಡಿಗೋಳಿಯಲ್ಲೇ ಶ್ರೀ ಮಹಿಷಮರ್ದಿನಿ ಕಂಬಳ ಸಮಿತಿಯ ವತಿಯಿಂದ ರಶ್ಮಿತ್‌ ಶೆಟ್ಟಿ ಕೈತ್ರೋಡಿ ಅಧ್ಯಕ್ಷತೆಯಲ್ಲಿ ಒಂದು ಕಂಬಳ ನಡೆದರೆ,ಮತ್ತೊಂದು ಕಂಬಳ ಅಲ್ಲೇ ಪಕ್ಕದ ಕೊಡಂಗೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಬೆಂಬಲದೊಂದಿಗೆ ಶ್ರೀ ವೀರ-ವಿಕ್ರಮ ಕಂಬಳ ಸಮಿತಿ ವತಿಯಿಂದ ಸಂದೀಪ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿಶೇಷವೆಂದರೆ ಎರಡೂ ಕಂಬಳಗಳ ಜೋಡುಕರೆಗಳಿಗೆ ವೀರ-ವಿಕ್ರಮ ಎಂದೇ ಹೆಸರಿಡಲಾಗಿತ್ತು.

ಹೊಕ್ಕಾಡಿಗೋಳಿ ಕಂಬಳಕ್ಕೆ ಸಂಬಂಧಿಸಿ ಜಾಗದ ಗೊಂದಲದ ಕಾರಣದಿಂದ ಹಿಂದೆ ಜ. 13ರಂದು ನಿಗದಿಯಾಗಿದ್ದ ಕಂಬಳವು ಬಳಿಕ ಮುಂದೂಡಲ್ಪಟ್ಟಿತ್ತು. ಆದರೆ ಮುಂದೆ ಶ್ರೀ ಮಹಿಷಮರ್ದಿನಿ ಕಂಬಳ ಸಮಿತಿಯು ಹಿಂದಿನ ಸ್ಥಳದಲ್ಲೇ ಕಂಬಳ ನಡೆಸಲು ತೀರ್ಮಾನಿಸಿದರೆ, ಶ್ರೀ ವೀರ-ವಿಕ್ರಮ ಕಂಬಳ ಸಮಿತಿಯು ಕೊಡಂಗೆಯಲ್ಲಿ ಹೊಸ ಕರೆಗಳನ್ನು ನಿರ್ಮಿಸಿ ಕಂಬಳ ಆಯೋಜಿಸಿದೆ.

ಜಿಲ್ಲಾ ಕಂಬಳ ಸಮಿತಿಯು ಕೊಡಂಗೆ ಕಂಬಳಕ್ಕೆ ಅವಕಾಶ ನೀಡಿ ಇನ್ನೊಂದು ತಂಡದ ಜತೆ ಮಾತುಕತೆ ನಡೆಸಿದರೂ ವಿಫಲವಾಗಿತ್ತು. ಹೀಗಾಗಿ ಹೊಕ್ಕಾಡಿಗೋಳಿ ಕಂಬಳ ಆಯೋಜನೆಯ ವಿರುದ್ಧ ಕಾನೂನು ಹೋರಾಟ ನಡೆಸಿದರೂ ಹೈಕೋರ್ಟ್‌ ಹಿಂದೆ ನಡೆಯುತ್ತಿದ್ದ ಸ್ಥಳದಲ್ಲಿ ನಡೆಯುವ ಕಂಬಳಕ್ಕೆ ತಡೆ ನೀಡಲು ನಿರಾಕರಿಸಿತ್ತು.

ಶನಿವಾರ ಸ್ಥಳೀಯರು, ಗಣ್ಯರು ಎರಡೂ ಕಂಬಳದಲ್ಲಿ ಪಾಲ್ಗೊಂಡಿದ್ದು, ಕಂಬಳ ಕೋಣದ ಯಜಮಾನರು, ತೀರ್ಪುಗಾರರು ತಮ್ಮ ಇಚ್ಛೆಯ ಕಂಬಳದಲ್ಲಿ ಪಾಲ್ಗೊಂಡಿದ್ದರು. ಕೋಣಗಳು, ಕಂಬಳಾಭಿಮಾನಿಗಳು ಎರಡು ಕಂಬಳದಲ್ಲಿ ಹಂಚಿ ಹೋದ ಪರಿಣಾಮ ಭಾಗವಹಿಸಿದ ಕೋಣಗಳ ಸಂಖ್ಯೆ, ಜನರ ಸಂಖ್ಯೆ ಇತರ ಕಂಬಳ ಗಳಿಗಿಂತ ಕಡಿಮೆಯಾಗಿತ್ತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.