
ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
Team Udayavani, May 30, 2023, 11:17 PM IST

ಬಂಟ್ವಾಳ: ನರಿಕೊಂಬು ಗ್ರಾಮದ ಅಂತರದ ಗುಡ್ಡವೊಂದರಲ್ಲಿ ಮಂಗಳವಾರ ಅಪರಿಚಿತ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಳೆದ ಕೆಲವು ದಿನಗಳ ಹಿಂದೆಯೇ ಘಟನೆ ನಡೆದಿರುವುದರಿಂದ ದೇಹ ಕೊಳೆತಿತ್ತು.
ಸುಮಾರು 40ರಿಂದ 50ರ ವಯಸ್ಸಿನ ಪುರುಷನ ಮೃತದೇಹವಾಗಿದ್ದು, ಕೊಳೆತಿರುವುದರಿಂದ ಗುರುತು ಪತ್ತೆ ಕೂಡ ಅಸಾಧ್ಯವಾಗಿದೆ. ಅಂತರ ಗುಡ್ಡದ ಪಕ್ಕದ ಜಮೀನಿನವರು ತೋಟಕ್ಕೆ ನೀರು ಬಿಡುವುದಕ್ಕೆ ತೆರಳಿದ ಸಂದರ್ಭ ದುರ್ನಾತ ಬೀರುವುದನ್ನು ಕಂಡು ಪರಿಶೀಲಿಸಿದಾಗ ಮೃತದೇಹ ಮರದಲ್ಲಿ ನೇತಾಡುತ್ತಿರುವುದು ಗಮನಕ್ಕೆ ಬಂದಿದೆ.
ಘಟನ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ತೆರಳಿ ಪರಿಶೀಲಿಸಿದ್ದು, ವ್ಯಕ್ತಿ ಮೃತಪಟ್ಟು 10 ದಿನಗಳಾಗಿರುವ ಕುರಿತು ಅಂದಾಜಿಸಲಾಗಿದೆ. ಮೃತ ವ್ಯಕ್ತಿಯು ಪ್ಯಾಂಟ್ ಹಾಗೂ ಟೀ ಶರ್ಟ್ ಧರಿಸಿದ್ದು, ಈ ವ್ಯಕ್ತಿಯು ಎಲ್ಲಿಂದ ಆಗಮಿಸಿ ಯಾಕೆ ಈ ಗುಡ್ಡದಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂಬುದರ ಕುರಿತು ಹಲವು ಅನುಮಾನಗಳು ಸೃಷ್ಟಿಯಾಗಿದೆ.
ಜತೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಯಾರದರೂ ತಂದು ನೇತಾಡಿಸಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ನಾಪತ್ತೆ ಪ್ರಕರಣಗಳ ಕುರಿತು ಬಂಟ್ವಾಳ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ