Bantwala: ಬಿರುಸಿನ ಮಳೆ; ಧರೆಗುರುಳಿದ ಮರ, ವಿದ್ಯುತ್ ಕಂಬ
Team Udayavani, Jun 11, 2023, 10:12 AM IST
ಬಂಟ್ವಾಳ: ಬಿರುಸಿನ ಮಳೆಗೆ ಮರವೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ತಾಲೂಕಿನ ನರಿಕೊಂಬು ಗ್ರಾಮದ ದಿಂಡಿಕೆರೆ ಎಂಬಲ್ಲಿ ಜೂನ 11ರ ರವಿವಾರ ಬೆಳಿಗ್ಗೆ ಸುಮಾರು 6 ಗಂಟೆಗೆ ಸಂಭವಿಸಿದೆ.
ಮರದೊಂದಿಗೆ ವಿದ್ಯುತ್ ಕಂಬ ಕೂಡಾ ಬಿದ್ದಿರುವುದರಿಂದ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಕೂಡಲೇ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ, ಮರ ಹಾಗೂ ಕಂಬ ತೆರವು ಮಾಡುವ ಕಾರ್ಯ ಕೈಗೊಳ್ಳಲಾಯಿತು.
ನರಿಕಂಬು ಗ್ರಾಮ ಪಂಚಾಯತ್ ಸದಸ್ಯ ಚೇತನ್ ಏಲಭೆ ಘಟನಾ ಸ್ಥಳದಲ್ಲಿದ್ದು, ತೆರವು ಕಾರ್ಯದಲ್ಲಿ ಸಹಕರಿಸಿದರು.