ಕೃಷ್ಣೆಯ ಪ್ರವಾಹಕ್ಕೆ ನಲುಗಿದ ರೈತರೇ ಕಟ್ಟಿದ ಬ್ಯಾರೇಜ್

70 ವರ್ಷಗಳ ಪ್ರಮುಖ ಸೇತುವೆಗೆ ಧಕ್ಕೆ

Team Udayavani, Aug 18, 2019, 9:10 PM IST

barage

ಜಮಖಂಡಿ: ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳಿಗೆ ಪ್ರಮುಖ ಸಂಪರ್ಕ ಸೇತುವೆಯಾಗಿದ್ದ, ಅಂದಾಜು 70 ವರ್ಷಗಳ ಇತಿಹಾಸ ಹೊಂದಿರುವ ಚಿಕ್ಕಪಡಸಲಗಿ ಸೇತುವೆ, ಕೃಷ್ಣಾನದಿ ಭೀಕರ ಪ್ರವಾಹಕ್ಕೆ ರವಿವಾರ ಶಿಥಿಲಗೊಂಡಿದೆ.

ಬ್ರಿಟಿಷರ ಕಾಲದಲ್ಲಿ ನಿರ್ಮಾಣ ಮಾಡಿದ ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ಸಂಪರ್ಕ ಸೇತುವೆ ಇಂದು ಕೃಷ್ಣಾರ್ಪಣೆಯಾಗಿದೆ. ಜನತೆಗೆ ಅನಕೂಲಕ್ಕಾಗಿ ನಿರ್ಮಾಣಗೊಂಡಿದ್ದ ತಾಲೂಕಿನ ಚಿಕ್ಕಪಡಸಲಗಿ ಸೇತುವೆ ಮೇಲೆ ಕಳೆದ 15 ದಿನದಳಿಂದ ನಿರಂತರವಾಗಿ ಉಕ್ಕೇರಿ ಹರಿಯುತ್ತಿರುವ ಕೃಷ್ಣಾನದಿ ಪ್ರವಾಹಕ್ಕೆ ಸಿಲುಕಿ ಸೇತುವೆ ಎರಡು ಬದಿಯಲ್ಲಿ ನಿರ್ಮಿಸಿದ್ದ 22 ಅಪಘಾತ ತಡೆ ಕಂಬಗಳು ಸಂಪೂರ್ಣ ನೀರಿನಲ್ಲಿ ಕೊಚ್ಚಿಹೋಗಿವೆ.

ಆಲಮಟ್ಟಿ ಜಲಾಶಯದಲ್ಲಿ ಮೊದಲನೇ ಹಂತದ 519ಮೀ. ನೀರು ಹಿಡಿದಿಟ್ಟರೂ ತಾಲೂಕಿನ ಚಿಕ್ಕಪಡಸಲಗಿ ಸೇತುವೆ ಮುಳುಗುವುದಿಲ್ಲ. ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ನೀರಿನ ರಭಸಕ್ಕೆ ಸೇತುವೆ ಅಕ್ಕ-ಪಕ್ಕದ ತಡೆಗೋಡೆ ಕೊಚ್ಚಿಹೋಗಿದೆ.

ಈ ಸೇತುವೆಯಲ್ಲಿ 22 ಕಮಾನುಗಳಿದ್ದು, 4ಮೀಟರ್ ಎತ್ತರವಿದೆ. ಕಮಾನುಗಳ ಅಂತರ 18 ಮೀಟರ್ ಇದೆ. 413 ಮೀಟರ್‌ನಷ್ಟು ಉದ್ದವಿರುವ ಇದು, ನೆಲಭಾಗದಿಂದ 11 ಮೀಟರ ಎತ್ತರವಿದೆ. ಮಹಾರಾಷ್ಟ್ರಕ್ಕೆ ಸಂಪರ್ಕಕ್ಕಾಗಿ ಈ ಸೇತುವೆ ಬ್ರಿಟಿಷರು ನಿರ್ಮಾಣ ಮಾಡಿದ್ದರು.

ಚಿಕ್ಕಪಡಸಲಗಿ ಸೇತುವೆಯ ಮಧ್ಯಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ಪ್ರಾಥಮಿಕ ವರದಿಗಳು ತಾಲೂಕಾಡಳಿತಕ್ಕೆ ಬಂದಿದ್ದು, ಮುಂಜಾಗೃತೆ ಕ್ರಮವಾಗಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಹೆಚ್ಚಿಗೆ ಮಾಡಲಾಗಿದೆ. ತಾಲೂಕಿನ ಜನರು ಚಿಕ್ಕಪಡಸಲಗಿ ಸೇತುವೆ ಮುಗುಚಿ ಬಿದ್ದಿದೆ ಎಂದು ಭಯ ಭೀತರಾಗಿದ್ದಾರೆ. ತಾಲೂಕಿನ ಚಿಕ್ಕಪಡಸಲಗಿ ಸೇತುವೆ ವಿಜಯಪುರ-ಧಾರವಾಡ ರಾಜ್ಯ ಹೆದ್ದಾರಿ ಅವಲಂಭಿಸಿದೆ. ಸೇತುವೆ ಮೇಲೆ ಪ್ರತಿನಿತ್ಯ ದಿನದ 24 ಗಂಟೆಯಲ್ಲಿ 8 ಸಾವಿರ ಟ್ರಕ್, 750ಕ್ಕೂ ಹೆಚ್ಚು ಸರಕಾರಿ ಸಾರಿಗೆ ಬಸ್‌ಗಳು, 10 ಸಾವಿರಕ್ಕೂ ಹೆಚ್ಚು ಖಾಸಗಿ ವಾಹನಗಳು, 6 ಸಾವಿರಕ್ಕೂ ಹೆಚ್ಚು ದ್ವಿಚಕ್ರವಾಹನಗಳ ಓಡಾಡುವ ರಸ್ತೆ ಸಂಪೂರ್ಣ ಶಾಶ್ವತವಾಗಿ ಸ್ಥಗಿತಗೊಂಡಂತಾಗಿದೆ. ಕೃಷ್ಣಾನದಿ ತೀರದ ಮಹಾರಾಷ್ಟ್ರ ಮತ್ತು ಕರ್ನಾಟಕ ಜಿಲ್ಲೆಗಳಲ್ಲಿ ಸಂಪೂರ್ಣ ಮಳೆ ಕಡಿಮೆ ಆದರೂ ರವಿವಾರ ಕೂಡ ಕೃಷ್ಣಾನದಿಗೆ 3 ಲಕ್ಷಕ್ಕೂ ಹೆಚ್ಚು ಕ್ಯೂಸೆಸ್ ನೀರು ಹರಿದು ಬರುತ್ತಿದೆ.

ಮಾಜಿ ಸಚಿವ ದಿ.ಸಿದ್ದು ನ್ಯಾಮಗೌಡ ನೇತೃತ್ವದಲ್ಲಿ ರೈತರೇ ಕಟ್ಟಿದ ಬ್ಯಾರೇಜ್ ಕೂಡ ಇದೇ ಸ್ಥಳದಲ್ಲಿದ್ದು, ಕೃಷ್ಣೆಯ ಪ್ರವಾಹಕ್ಕೆ ಸಂಪೂರ್ಣ ಮುಳುಗಿದೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.