ಉಗ್ರ ಚಟುವಟಿಕೆ ಮಟ್ಟ ಹಾಕಲು ತುರ್ತಾಗಿ ಎನ್ ಕೌಂಟರ್ ಆಗಲಿ: ಯತ್ನಾಳ


Team Udayavani, Nov 21, 2022, 5:42 PM IST

ಯತ್ನಾಳ

ವಿಜಯಪುರ: ದೇಶದ ಭದ್ರತೆ, ಸುರಕ್ಷತೆ ವಿಷಯದಲ್ಲಿ ವಿಳಂಬ ಮಾಡದೇ ಭಯೋತ್ಪಾದನೆ ನಿಗ್ರಹಕ್ಕಾಗಿ ನಾಲ್ಕಾರು ಎನ್ಕೌಂಟರ್ ಮಾಡಲೇಬೇಕಿದೆ. ಆ ಮೂಲಕ ದೇಶ ವಿರೋಧಿ ಉಗ್ರನಡೆ ಅನುಸರಿಸುವವರಿಗೆ ತಕ್ಕಪಾಠ ಕಲಿಸಲೇ ಬೇಕಿದೆ.‌ ಇಲ್ಲವಾದಲ್ಲಿ ಭವಿಷ್ಯದಲ್ಲಿ ದೇಶ ವಿರೋಧಿ ಭಯೋತ್ಪಾದಕರು ರಾಜಾರೋಷವಾಗಿ ಎಲ್ಲೆಂದರಲ್ಲಿ ಓಡಾಡಿಕೊಂಡು ಭಯೋತ್ಪಾದಕ ಕೃತ್ಯಗಳನ್ನು ಮಾಡುತ್ತಲೇ ಹೋಗುತ್ತಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು.

ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಉಗ್ರರ ಚಟುವಟಿಕೆ ಸಕ್ರಿಯವಾಗಿವೆ ಎಂಬುದನ್ನು ಮನವರಿಕೆ ಮಾಡಿಸುತ್ತದೆ. ಭಯೋತ್ಪಾದಕ ಚಟುವಟಿಕೆಗಳನ್ನು ಮಟ್ಟ ಹಾಕುವಲ್ಲಿ ಸರ್ಕಾರ ಪೊಲೀಸರಿಗೆ ಮುಕ್ತ ಅಧಿಕಾರ ನೀಡಬೇಕು. ಗೃಹ ಮಂತ್ರಿ ಆರಗ ಜ್ಞಾನೇಂದ್ರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೊಲೀಸರಿಗೆ ಮುಕ್ತ ಅಧಿಕಾರ ನೀಡಬೇಕು. ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಈ ಕುರಿತು ಆಗ್ರಹವನ್ನೂ ಮಾಡಿದ್ದೇನೆ ಎಂದರು.

ಭಯೋತ್ಪಾದನೆ ವಿಷಯದಲ್ಲಿ ಕೇವಲ ಬಾಯಿ ಮಾತಿನಲ್ಲಿ ಅತ್ಯುಗ್ರ ಕ್ರಮ, ಕಠಿಣ ಕ್ರಮ ಎನ್ನುವ ಬದಲು ಕರ್ನಾಟಕದಲ್ಲಿ ಉತ್ತರ ಪ್ರದೇಶದಲ್ಲಿ ಹೇಗೆ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದರು.

ಭಯೋತ್ಪಾದನೆ ಕೃತ್ಯದಲ್ಲಿ ಪಾಲ್ಗೊಂಡ ನಾಲ್ಕಾರು ಎನ್ಕೌಂಟರ್ ಮಾಡಿ ಬುದ್ದಿ ಕಲಿಸದಿದ್ದರೆ ಈ ರೀತಿ ದೇಶ ವಿರೋಧಿ ಭಯೋತ್ಪಾದಕರು ರಾಜಾರೋಷವಾಗಿ ಕೆಲಸ ಮಾಡ್ತಾರೆ ಎಂದು‌ ಗುಡುಗಿದರು.

ಗೃಹಮಂತ್ರಿ ಆರಗ ಜ್ಞಾನೇಂದ್ರ ಒಳ್ಳೆಯವರಿದ್ದಾರೆ, ರಾಜ್ಯದಲ್ಲಿ ಭಯೋತ್ಪಾದನೆ ವಿಷಯದಲ್ಲಿ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗುತ್ತಿದ್ದಾರೆ. ಕಾನೂನು ಬಾಹಿರ ಕೃತ್ಯಗಳಿಂದಲೇ ಮೆರೆಯುವವರ ವಿರುದ್ಧ ಸೌಮ್ಯ, ಶಾಂತತೆ ಅಂತೆಲ್ಲ ಒಳ್ಳೆತನದ ಮಾತುಗಳಿಗೆ ಯಾರು ಕಿವಿಗೊಡಲ್ಲ. ಹೀಗಾಗಿ ಗೃಹ ಇಲಾಖೆಗೆ ತ್ವರಿತವಾಗಿ ಕಠಿಣ ನಿಲುವು ತೆಗೆದುಕೊಳ್ಳುವ ಬಲಿಷ್ಠ ಸಚಿವ ಬೇಕು ಎಂದು ಸಲಹೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಮಾಡ್ತೀನಿ, ಇದನ್ನ ಮಾಡ್ತೀನಿ ಅಂತಾರೆ ಆದಷ್ಟು ಬೇಗನೆ ಒಂದು ಒಳ್ಳೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿದರು.

ಪಂಚಮಸಾಲಿ‌ ಮೀಸಲಾತಿ ಹೋರಾಟ ನಡೆಸಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತ್ವರಿತ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ ಎಸ್ಸಿ-ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಮೂಲಕ ಸರ್ಕಾರ ಮೀಸಲಾತಿ ವಿಷಯದಲ್ಲಿ ಮೊದಲ‌ ಹೆಜ್ಜೆ ಇರಿಸಿದೆ. ಎರಡನೇ ಹೆಜ್ಜೆಯಾಗಿ ಹಿಂದುಳಿದ ವರ್ಗಕ್ಕೆ ಅನೇಕ ಸಮುದಾಯ ಸೇರಿಸಬೇಕಿದೆ ಎಂದರು.

ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರ ನೀಡುವ ಕುರಿತು ವಿಧಾನಸಭೆಯಲ್ಲಿ ಹೋರಾಟ ಮಾಡಿದ್ದೆ, ಇದೀಗ ರಾಜ್ಯ ಸರ್ಕಾರ ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡ ಪ್ರಮಾಣಪತ್ರ ನೀಡುವ ಆದೇಶ ನೀಡಿದ್ದು, ಜಾತಿ ಪ್ರಮಾಣ ಪತ್ರ ವಿತರಣೆಯೂ ಆರಂಭಗೊಂಡಿದೆ. ಹಾಲುಮತ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ನಿರ್ಣಯ ಆಗಬೇಕಿದೆ ಎಂದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮೇಲು ಜಾತಿಯ ಜನರನ್ನು ದ್ವೇಷ ಮಾಡುವುದೇ ಆದ್ಯತೆ ಗುಣವಾಗಿದೆ. ಆರ್ಥಿಕವಾಗಿ ಇತರೆ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿ ನೀಡದರೆ ಸಿದ್ದರಾಮಯ್ಯ ಅವರಿಗೆ ಏನು ನೋವು ಮಾಡುತ್ತದೆ ಎಂದು ಖಾರವಾಗಿ ಪ್ರಶ್ನಿಸಿದದರು.

ಇದನ್ನೂ ಓದಿ:ರೆಡ್ ಸೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಶಾರುಖ್ ಖಾನ್ ರಿಗೆ ಗೌರವ ಪ್ರಶಸ್ತಿ

ಲಿಂಗಾಯತ, ಬ್ರಾಹ್ಮಣ, ಮರಾಠ, ರಜಪೂತರಲ್ಲಿ, ವಿಶ್ವಕರ್ಮ ಸೇರಿದಂತೆ ಹಲವು ಸಮಾಜಗಳಲ್ಲಿ ಬಡತನ ಇಲ್ಲವೇ. ಎಲ್ಲ ಸಮಾಜದಲ್ಲಿ ಬಡತನ ಇದೆ, ಯಾವುದೇ ಒಂದು ಮೇಲ್ಜಾತಿಯಲ್ಲಿ ಜನ್ಮತಾಳಿದ್ದಾರೆ ಎಂದರೆ ಎಲ್ಲರೂ ಟಾಟಾ-ಬಿರ್ಲಾ ಅಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ದೇಶದಲ್ಲಿ ಎಲ್ಲಾ ಸಮುದಾಯ ಅರ್ಥಿಕ ಹಿಂದುಳಿದ‌ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಶೇ.10 ರಷ್ಟು ಮೀಸಲಾತಿ ನೀಡುವ ಮೂಲಕ ಎಲ್ಲ ಸಮುದಾಯದ ಶೋಷಿತರ ಪರ ಕಾರ್ಯಕ್ರಮ ರೂಪಿಸಿದ್ದಾರೆ ಎಂದರು.

ನಮ್ಮ‌ ಜಾತಿಯಲ್ಲಿ ನಾನೊಬ್ಬ ಶ್ರೀಮಂತ ಇರಬಹುದು, ಪಂಚಮಸಾಲಿ ಸಮಾಜದಲ್ಲೂ ಕೂಲಿ ಮಾಡಿ ಜೀವಿಸುವವರ ಸಂಖ್ಯೆ ಹೆಚ್ಚಿದೆ. ಬ್ರಾಹ್ಮಣರಲ್ಲಿ ಕೇವಲ 3 ಸಾವಿರ ರೂ.ಗೆ ತಿಂಗಳ ಜೀವನ ಮಾಡುವಷ್ಟು ಬಡವರು ಇದ್ದಾರೆ. ಆರ್ಥಿಕವಾಗಿ ಶೋಷಿತ ಇಂತಹ ಸಮುದಾಯದ ಬಡವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೀಸಲು ಕಲ್ಪಿಸಿ ಬಹುದೊಡ್ಡ ಉಪಕಾರ ಮಾಡಿದ್ದಾರೆ ಬಹಳ‌ದೊಡ್ಡ ಉಪಕಾರ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಕೂಡ ಇದನ್ನು ಎತ್ತಿ ಹಿಡಿದಿದೆ ಎಂದರು.

ಆದರೂ ಸಿದ್ದರಾಮಯ್ಯ ಅವರು ಆರ್ಥಿಕ ಶೋಷಿತ ಸಮಾಜಕ್ಕೆ ಮೀಸಲು ಕೊಟ್ಟಿರುವ ಬಗ್ಗೆ ವಿರೋಧ ಮಾಡುತ್ತಾರೆ. ಇವರ ಬಣ್ಣ ಬಯಲಾಗಿದೆ, ಬರೀ ಮುಸ್ಲೀಮರಿಗೆ ಎಲ್ಲ ಕೊಡಿ ಎಂದು ಹೇಳ್ತಿರಿ ಎಂದು ಸಿದ್ದರಾಮಯ್ಯ ವಿರುದ್ದ ಅಸಮಾಧಾನ ಹೊರಹಾಕಿದರು.

ಸಿದ್ದರಾಮಯ್ಯ ಅವರಿಗೆ ಲಿಂಗಾಯತರು, ಬ್ರಾಹ್ಮಣರು ಮತ ಹಾಕಿಲ್ಲವೇ ಎಂದು ಪ್ರಶ್ನಿಸಿದ ಯತ್ನಾಳ, ಕೂಡಲೇ ಸಿದ್ದರಾಮಯ್ಯ ರಾಜ್ಯದಲ್ಲಿ ಒಬಿಸಿ ಸೇರ್ಪಡೆಯಾಗುವ ಎಲ್ಲ ಸಮುದಾಯಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಮತದಾರರ ಹೆಸರು ಸಕಾರಣವಿಲ್ಲದೇ ರದ್ದಾಗಿವೆ. ಮಹಾನಗರ ಪಾಲಿಕೆ ಮತದಾರರ ಪಟ್ಟಿ ತಯಾರು ಮಾಡುವಲ್ಲಿ ಅನುಭವದ ಕೊರತೆ ಇದಕ್ಕೆ ಪ್ರಮುಖ ಕಾರಣ. ಹಾಗಾಗಿ ಬದುಕಿದ್ದವರು ಸತ್ತಿದ್ದಾರೆ, ಸತ್ತವರು ಬದುಕಿದ್ದಾರೆ ಎಂದೆಲ್ಲ ಅವಾಂತರ ಸೃಷ್ಟಿಯಾಗಿತ್ತು ಎಂದರು.

ವಿಧಾನಸಭೆ ಚುನಾವಣೆಗೆ ಕಂದಾಯ ಇಲಾಖೆ ಮತದಾರರ ಪಟ್ಟಿ ಸಿದ್ಧಪಡಿಸುವ ಕಾರಣ ಲೋಪ ಇಲ್ಲದಂತೆ ವ್ಯವಸ್ಥಿತವಾಗಿ ಮತದಾರರ ಪಟ್ಟಿ ಮಾಡುತ್ತಾರೆ ಎಂದರು.

ಈಗ ತಂತ್ರಾಶ ಸಹ ಬಂದಿದೆ, ದೇಶದಲ್ಲಿ ಯಾವುದೋ‌ ಮೂಲೆಯಲ್ಲಿ ಸೇರಿ ಎರಡೆರಡು ಓಟರ್ ಐಡಿ ಇದ್ರೂ ಡಿಲೀಟ್ ಆಗುತ್ತವೆ, ಇನ್ನು ಹದಿನೈದು ದಿನದಲ್ಲಿ ರಾಷ್ಟ್ರೀಯ ಆಪ್ ಬರಲಿದೆ. ಅದು ಬಂದರೆ ಒಬ್ಬ ಮತದಾರ ಕಾಶ್ಮೀರದಲ್ಲೂ ಹಾಗೂ ವಿಜಯಪುರದಲ್ಲೂ ಓಟರ್ ಐಡಿ ಮಾಡಿಸಿದ್ರೆ ಅದು ಗೊತ್ತಾಗುತ್ತದೆ ಎಂದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.