ಗೋ ಹತ್ಯೆ ನಿಷೇಧಕ್ಕೆ ಸರ್ಕಾರ ಬದ್ಧ , ಮತಾಂತರಿಗಳ ವಿರುದ್ಧ ಕಠಿಣ ಕ್ರಮ: ಬೊಮ್ಮಾಯಿ
Team Udayavani, Dec 5, 2020, 2:31 PM IST
ಕಾರವಾರ: ಗೋಹತ್ಯೆ ನಿಷೇಧ ಕಾಯಿದೆಯನ್ನು ಶೀಘ್ರದಲ್ಲಿ ರೂಪಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಈ ಕುರಿತು ಶಾಸಕಿ ರೂಪಾಲಿ ನಾಯ್ಕ ಅವರಿಗೆ ಮನವಿ ನೀಡಿದಾಗ, ಸರ್ಕಾರ ಗೋ ಹತ್ಯೆ ನಿಷೇಧಕ್ಕೆ ಬದ್ಧವಾಗಿದ್ದು, ಗೋಹತ್ಯೆ ನಿಷೇಧಿಸಿ ಸದ್ಯದಲ್ಲೇ ಕಠಿಣ ಕಾನೂನು ರೂಪಿಸಲಾಗುವುದು ಎಂದು ತಿಳಿಸಿದರು. ಗೋಹತ್ಯೆ ನಿಷೇಧದ ಬಗ್ಗೆ ಸಚಿವರ ಗಮನ ಸೆಳೆದ ಶಾಸಕರು, ಗೋವುಗಳ ಹತ್ಯೆ, ಹಿಂಸಾತ್ಮಕ ಸಾಗಾಟ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಕೂಡಲೇ ಬಲಿಷ್ಠ ಕಾನೂನಿನ ಮೂಲಕ ಇವುಗಳನ್ನು ತಡೆಗಟ್ಟುವ ಅನಿವಾರ್ಯತೆ ಎದುರಾಗಿದೆ ಎಂದು ವಿನಂತಿಸಿದರು.
ಗೋ ಹತ್ಯೆ ನಿಷೇಧ ಕಾಯಿದೆ ಜಾರಿಗೊಳಿಸುವ ಮೂಲಕ ಗೋ ಸಂರಕ್ಷಣೆಗೆ ಆದ್ಯತೆ ನೀಡಬೇಕಾಗಿದೆ. ಹಿಂದುಗಳಿಗೆ ಗೋವು ಪೂಜನೀಯ. ಗೋವಿಗೆ ದೇವರ ಸ್ಥಾನಮಾನ ನೀಡಲಾಗಿದೆ. ಗೋ ಹತ್ಯೆ, ಹಿಂಸೆಯಿಂದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗುತ್ತಿದೆ.
ಇದನ್ನೂ ಓದಿ:ಕೌರವನ ವಿರುದ್ಧ ಕೆರಳಿದ ಅನ್ನದಾತ : ರೈತ ಸಂಘಟನೆಯಿಂದ ಪ್ರತಿಕೃತಿ ದಹಿಸಿ ಪ್ರತಿಭಟನೆ
ಕಳೆದ ಚುನಾವಣೆಯಲ್ಲಿ ಗೋಹತ್ಯೆ ನಿಷೇಧ ಬಿಜೆಪಿಯ ಪ್ರಮುಖ ಚುನಾವಣಾ ಪ್ರಣಾಳಿಕೆಯಾಗಿತ್ತು. ಬಿಜೆಪಿ ಚುನಾವಣೆ ಗೆಲ್ಲಲು ಪ್ರಣಾಳಿಕೆಯಲ್ಲಿನ ಈ ಅಂಶವೂ ಒಂದು. ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಾಡುವುದಾದರೆ ಅದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬ ನಂಬಿಕೆ ಜನತೆಯದ್ದಾಗಿದೆ. ಅದು ವಾಸ್ತವವೂ ಹೌದು. ಸಾಮಾಜಿಕ ಜಾಲ ತಾಣಗಳಲ್ಲಿ ಈ ಬಗ್ಗೆ ವ್ಯಾಪಕವಾಗಿ ಚರ್ಚೆಯೂ ನಡೆಯುತ್ತಿದೆ. ಸಾರ್ವಜನಿಕವಾಗಿಯೂ ಕೂಡ ಗೋ ಹತ್ಯೆ ನಿಷೇಧದ ಬಗ್ಗೆ ಬಲವಾದ ಕೂಗು ಕೇಳಿಬರುತ್ತಿದೆ. ಈ ಬಗ್ಗೆ ಸರ್ಕಾರದ ಮೇಲೆ ಭಾರಿ ನಿರೀಕ್ಷೆಯನ್ನು ಸಹ ಜನತೆ ಹೊಂದಿದ್ದಾರೆ ಎಂದರು.
ಗೋವುಗಳ ಹಿಂಸಾತ್ಮಕ ಸಾಗಾಟ ತಡೆಯಬೇಕು: ಈ ಹಿಂದೆ ಅಂದರೆ 1964ರಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಾಗಿ ಅಲ್ಪಸ್ವಲ್ಪ ಬದಲಾವಣೆಗಳಾದರೂ ಗೋ ಹತ್ಯೆ ನಿಷೇಧ ಪರಿಣಾಮಕಾರಿಯಾಗಿ ಆಗಿಲ್ಲ. 2008 ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಜಾರಿಗೆ ಮುಂದಾಗಲಾಯಿತಾದರೂ ಕಾರಣಾಂತರಗಳಿಂದ ಕಾಯಿದೆ ಜಾರಿಗೆ ಬರಲಿಲ್ಲ. ಆದರೆ ಆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿ ಗೋ ಹತ್ಯೆ ನಿಷೇಧದ ಕಟ್ಟುನಿಟ್ಟಿನ ಕಾಯಿದೆ ಆದಷ್ಟು ಶೀಘ್ರದಲ್ಲಿ ಜಾರಿಗೆ ಬರುವಂತೆ ಕ್ರಮ
ಕೈಗೊಳ್ಳಬೇಕಾಗಿ ಮನವಿ ಮಾಡಿದ್ದರು.
ಜನತೆಯ ಧಾರ್ಮಿಕ ಭಾವನೆಯನ್ನು ಗಮನದಲ್ಲಿಟ್ಟುಕೊಂಡು ಪ್ರಾಣಿಗಳಿಗೆ ಹಿಂಸೆ ನೀಡುವುದನ್ನು ತಪ್ಪಿಸಲು ಹಾಗೂ
ಗೋ ಸಂರಕ್ಷಣೆಯನ್ನು ಮಾಡುವ ಉದ್ದೇಶದಿಂದ ಗೋ ಹತ್ಯೆ ನಿಷೇಧ ಕಾಯಿದೆಯನ್ನು ಆದಷ್ಟು ಶೀಘ್ರದಲ್ಲಿ ಜಾರಿಗೊಳಿಸುವಂತೆ ಶಾಸಕಿ ರೂಪಾಲಿ ನಾಯ್ಕ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ