ಮುಂದಿನ 2 ವರ್ಷದಲ್ಲಿ 16 ಸಾವಿರ ಪೊಲೀಸರ ನೇಮಕ: ಬೊಮ್ಮಾಯಿ
Team Udayavani, Feb 13, 2020, 9:18 PM IST
ಕೊಪ್ಪಳ: ಮುಂದಿನ ಎರಡು ವರ್ಷಗಳಲ್ಲಿ 16 ಸಾವಿರ ಪೊಲೀಸರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪತ್ರಕರ್ತರ ಜತೆ ಮಾತನಾಡಿದ ಅವರು, ಈ ವರ್ಷ 6,000 ಸಿಬಂದಿ ನೇಮಕ ಮಾಡಿಕೊಳ್ಳಲಿದ್ದು, ಮುಂದಿನ ವರ್ಷ ಉಳಿದ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು.
ಠಾಣೆಗೆ ಬರುವವರೊಂದಿಗೆ ಬೆರೆತು ಸಮಸ್ಯೆ ಬಗೆಹರಿಸಲು “ಜನಸ್ನೇಹಿ ಪೊಲೀಸ್’ ಕಾರ್ಯಕ್ರಮ ಈ ಬಾರಿಯ ಬಜೆಟ್ನಲ್ಲಿ ಪ್ರಸ್ತಾವಕ್ಕೆ ಬರಲಿದೆ. ಪೊಲೀಸರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಕುರಿತು ಸಿಎಂ ಯಡಿಯೂರಪ್ಪ ಅವರು ಈಗಾಗಲೇ ಹಲವು ಸಭೆ ನಡೆಸಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಹೆಚ್ಚು ಒತ್ತು ನೀಡುವಂತೆ ಅಧಿ ಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದರು.
ಸರೋಜಿನಿ ಮಹಿಷಿ ವರದಿ ತುಂಬಾ ವರ್ಷಗಳಿಂದ ಚರ್ಚಿತ ವಿಚಾರ.
ಅದಕ್ಕೊಂದು ಕಾಯಕಲ್ಪ ಕೊಡಬೇಕೆಂಬುದು ನಮ್ಮ ಸರಕಾರದ ಮುಖ್ಯ ಉದ್ದೇಶ. ಈ ಬಗ್ಗೆ ಸಚಿವ ಸುರೇಶ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು, ವರದಿಯನುಸಾರ ಕನ್ನಡಿಗರಿಗೆ ಉದ್ಯೋಗ ಕೊಡಬೇಕು. ಖಾಸಗಿ ವಲಯದಲ್ಲೂ ಉದ್ಯೋಗ ನೀಡುವುದು ಸಹಿತ ಕೆಲ ನೂನ್ಯತೆ ತೆಗೆದು ಹಾಕಿ ಕೆಲವೇ ದಿನಗಳಲ್ಲಿ ಸರಕಾರ ವರದಿಗೆ ಸ್ಪಷ್ಟತೆ ಕೊಡಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ