ಕೋವಿಡ್‌ ನಿರ್ವಹಣೆಯಲ್ಲಿ ಕಾರ್ಯಕರ್ತರ ಸೇವೆ ಅಪಾರ :ಉಡುಪಿಯಲ್ಲಿ ಗೃಹ ಸಚಿವ ಬೊಮ್ಮಾಯಿ ಹೇಳಿಕೆ

ಬಿಜೆಪಿ ಜಿಲ್ಲಾ ಪದಾಧಿಕಾರಿಗಳೊಂದಿಗೆ ಸಂವಾದ

Team Udayavani, Jun 28, 2021, 6:16 PM IST

ಕೋವಿಡ್‌ ನಿರ್ವಹಣೆಯಲ್ಲಿ ಕಾರ್ಯಕರ್ತರ ಸೇವೆ ಅಪಾರ :ಉಡುಪಿಯಲ್ಲಿ ಗೃಹ ಸಚಿವ ಬೊಮ್ಮಾಯಿ ಹೇಳಿಕೆ

ಉಡುಪಿ: ಕೋವಿಡ್‌ ಸಂದರ್ಭದಲ್ಲಿ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಬಹಳ ದೊಡ್ಡ ಪ್ರಮಾಣದಲ್ಲಿ ಅತ್ಯಂತ ಉತ್ತಮ ರೀತಿಯಲ್ಲಿ ಜನಸೇವೆಗೈದಿದ್ದಾರೆ. ಸಾಮಾನ್ಯ ನಾಗರಿಕರು ಕೋವಿಡ್‌ನಿಂದ ಹೆದರಿರುವ ಸಂದರ್ಭದಲ್ಲಿ ಹಾಗೂ ವಿಪಕ್ಷಗಳು ಮನೆಯಲ್ಲೇ ಸೆಲ್ಫ್ ಕ್ವಾರೆಂಟೈನ್‌ ಮಾಡಿರುವ ಸನ್ನಿವೇಶದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಯೊಂದು ಬೂತ್‌ನಲ್ಲಿ ಕೋವಿಡ್‌ ಬಗ್ಗೆ ಜನಜಾಗೃತಿ ಮೂಡಿಸುವ ಜತೆಗೆ ಅಗತ್ಯ ಸಹಾಯದೊಂದಿಗೆ ಲಸಿಕೆ ವಿತರಣಾ ಅಭಿಯಾನದಲ್ಲೂ ಸರಕಾರ ಮತ್ತು ಅಧಿಕಾರಿಗಳ ಜತೆ ಕೈಜೋಡಿಸಿ ಸಾರ್ಥಕ ಸೇವೆ ಸಲ್ಲಿಸಿದ್ದಾರೆ. ಅಂತಹ ಎಲ್ಲ ಕಾರ್ಯಕರ್ತರ ಸೇವಾ ಮನೋಭಾವ ಪ್ರಶಂಸನೀಯ ಎಂದು ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಸೋಮವಾರ ಭೇಟಿ ನೀಡಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ಡಾ| ಶ್ಯಾಮಪ್ರಸಾದ್‌ ಮುಖರ್ಜಿ, ದೀನದಯಾಳ್‌ ಉಪಾಧ್ಯಾಯ ಅವರಂತಹ ಹಿರಿಯರು ತ್ಯಾಗ ಬಲಿದಾನದಿಂದ, ಸಿದ್ಧಾಂತಗಳಡಿಯಲ್ಲಿ ಪಕ್ಷವನ್ನು ಕಟ್ಟಿದ್ದಾರೆ. ಅವರ ದೂರದರ್ಶಿತ್ವದ ಚಿಂತನೆಗಳು ಮತ್ತು ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಪಕ್ಷವನ್ನು ಬೆಳೆಸುವ ಗುರುತರವಾದ ಜವಾಬ್ದಾರಿ ಎಲ್ಲ ಕಾರ್ಯಕರ್ತರ ಮೇಲಿದೆ. ದಕ್ಷಿಣ ಕರ್ನಾಟಕದಲ್ಲೇ ಪ್ರಥಮ ಬಾರಿಗೆ ಜನಸಂಘದ ನೇತೃತ್ವದಲ್ಲಿ ಉಡುಪಿ ನಗರಸಭೆ ಅಧಿಕಾರಕ್ಕೇರಿದೆ. ಬಿಜೆಪಿ ಕಾರ್ಯಕರ್ತರು ಸೇವಾ ಪ್ರವೃತ್ತಿಯಿಂದ ತೊಡಗಿಸಿಕೊಂಡಿರುವವರು. ಜನತೆ ಬಿಜೆಪಿಯೊಂದಿಗೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಈ ಕಾಲಘಟ್ಟದಲ್ಲಿ ದಣಿವರಿಯದೆ ಸೇವೆಯಲ್ಲಿ ತೊಡಗಿಸಿಕೊಂಡು ಜನತೆಯ ಆಶೋತ್ತರಗಳನ್ನು ಈಡೇರಿಸಿದಾಗ ನಿಗದಿತ ಗುರಿ ತಲುಪಲು ಸಾಧ್ಯ ಎಂದರು.

ಇದನ್ನೂ ಓದಿ :ಸಂಸದ ನಳಿನ್ ಕುಮಾರ್ ಕಟೀಲು ಸಹೋದರ ನವೀನ್ ಕುಂಜಾಡಿ ನಿಧನ

ಹಲವು ಅಭಿವೃದ್ಧಿ ಕಾರ್ಯ
ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಪದಾಧಿಕಾರಿಗಳೊಂದಿಗೆ ಸಂವಾದ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಿಯಮಿತವಾಗಿ ಭಾಗವಹಿಸಲಾಗುವುದು. ಉಡುಪಿ ಜಿಲ್ಲೆಯಾದ್ಯಂತ ಕಿಂಡಿ ಅಣೆಕಟ್ಟುಗಳ ನಿರ್ಮಾಣ ಪ್ರಗತಿಯಲ್ಲಿದೆ. ರಸ್ತೆಗಳ ಅಭಿವೃದ್ಧಿ, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮುಖಾಂತರ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು ನೀಡಿ ಕಡಲ ತೀರ ಕೊರತೆ ಸಮಸ್ಯೆಗೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳುವುದರ ಜತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್‌ ಶೆಟ್ಟಿ, ಶಾಸಕರಾದ ಕೆ.ರಘುಪತಿ ಭಟ್‌, ವಿ.ಸುನೀಲ್‌ ಕುಮಾರ್‌, ಲಾಲಾಜಿ ಆರ್‌. ಮೆಂಡನ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಎ. ಸುವರ್ಣ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್‌. ನಾಯಕ್‌, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್‌ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್‌.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್‌ ಶೆಟ್ಟಿ, ಸದಾನಂದ ಉಪ್ಪಿನಕುದ್ರು ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.