ಕೃಷ್ಣಾ, ಗೋದಾವರಿ, ಕಾವೇರಿ ನದಿ ಜೋಡಣೆಗೆ ಕೇಂದ್ರಕ್ಕೆ ಮನವಿ: ಬೊಮ್ಮಾಯಿ
Team Udayavani, Sep 15, 2019, 7:54 PM IST
ಚಿಕ್ಕಬಳ್ಳಾಪುರ: ರಾಜ್ಯದ ಬರ ಜಿಲ್ಲೆಗಳನ್ನು ಗಮನದಲ್ಲಿ ಇಟ್ಟುಕೊಂಡು ಹಾಗೂ ಕುಡಿಯುವ ನೀರಿಮ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಕೃಷ್ಣಾ, ಗೋದಾವರಿ ಹಾಗೂ ಕಾವೇರಿ ನದಿ ಜೋಡಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದೆಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಜಿಲ್ಲೆಯ ಗೌರಿಬಿದನೂರು ಪಟ್ಟಣದ ಬಸವೇಶ್ವರರ ರಸ್ತೆಯಲ್ಲಿ ಭಾನುವಾರ ಸ್ಥಳೀಯ ವೀರಶೈವ ಸೇವಾ ಸಮಿತಿ ಹಮ್ಮಿಕೊಂಡಿದ್ದ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ಅಭಿನಂಧನಾ ಗ್ರಂಥ ಬಿಡುಗಡೆಗೊಳಿಸಿ ಮಾತನಾಡಿದರು.
ರಾಜ್ಯ ಸರ್ಕಾರ ಬಯಲು ಸೀಮೆ ಜಿಲ್ಲೆಗಳಿಗೆ ರೂಪಿಸಿ ಅನುಷ್ಟಾನಗೊಳಿಸುತ್ತಿರುವ ಎತ್ತಿನ ಹೊಳೆ ಯೋಜನೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸಿಎಂ ಯಡಿಯೂರಪ್ಪಗೆ ಮನವಿ ಮಾಡಲಾಗುವುದೆಂದರು.
ಅವಿಭಜಿತ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಯಲ್ಲಿ ತಲೆದೋರಿರುವ ಅಂತರ್ಜಲ ಕುಸಿತ ಹಾಗೂ ನೀರಿನ ಸಮಸ್ಯೆಯನ್ನು ಪರಿಹರಿಸಲು ಎತ್ತಿನಹೊಳೆ ಯೋಜನೆಯ ಕಾಮಗಾರಿಯು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆಂದ ಅವರು, ಕಾವೇರಿ ಗೋದಾವರಿ ಹಾಗೂ ಕೃಷ್ಣಾ ನದಿಗಳ ಜೋಡಣೆಯ ಮೂಲಕ ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರವು ನದಿಜೋಡಣೆ ಯೋಜನೆಯನ್ನು ಕೈಗೆತ್ತಿಕೊಳ್ಳುತ್ತಿದ್ದು, ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಬೇಕಾದ ಎಲ್ಲಾರೀತಿಯ ಸಹಕಾರವನ್ನು ರಾಜ್ಯ ಸರ್ಕಾರವು ಕೇಂದ್ರಕ್ಕೆ ಕಾಲಕಾಲಕ್ಕೆ ನೀಡುವ ಮೂಲಕ, ಹಾಗೂ ಮುಖ್ಯಮಂತ್ರಿಗಳಿಗೆ ನೀರಿನ ಸಮಸ್ಯೆಯನ್ನು ಮನವರಿಕೆ ಮಾಡಿಕೊಡುವ ಮೂಲಕ ನೀರಾವರಿ ಯೋಜನೆಗೆ ಹೆಚ್ಚಿನ ಆದ್ಯತೆಯನ್ನು ನೀಡಲಿದೆ ಎಂದರು.
ವೀರಶೈವ ಎಂದರೆ ಕಾಯಕ ಮತ್ತು ದಾಸೋಹ ಎಂದು ಅರ್ಥ, ಇಂತಹ ಸೇವೆಯಿಂದಲೇ ನಮ್ಮ ಸಮುದಾಯದವರು ವೀರರಂತಿರಬೇಕಿದೆ ಎಂದ ಅವರು ಯಾರು ಕಾಯಕವನ್ನು ಮಾಡಿ ಅದರ ಮೂಲಕ ದಾಸೋಹ ಮಾಡುತ್ತಾರೋ ಅವರೇ ನಿಜವಾದ ವೀರಶೈವರು ಎಂದು ಪ್ರತಿಪಾದಿಸಿದರು.
ಕಾಯಕಕ್ಕೂ ಕರ್ತವ ಕೆಲಸ ಪೂರ್ಣಗೊಳ್ಳುವವರೆಗೆ ಹಿಂದಕ್ಕೆ ಹೆಜ್ಜೆಯಿಡದೆ ಕಾಯಕವನ್ನು ಪ್ರಮುಖವಾಗಿ ಭಾರತದಲ್ಲಿ ಅನ್ನದಾಸೋಹ ಮತ್ತು ಅಕ್ಷರ ದಾಸೋಹಗಳ ಚಿಂತನೆಯನ್ನು ತಂದವರು ಬಸವಣ್ಣನವರು ಈ ಒಂದು ಚಿಂತನೆಯನ್ನು ಹುಟ್ಟುಹಾಕಿದ ಸಮಾಜವೇ ವೀರಶೈವ ಸಮಾಜ ಎನ್ನಬಹುದು, ಜೈನರು ಅಹಿಂಸಾ ಧರ್ಮವನ್ನು ದೇಶದಲ್ಲಿ ಪ್ರತಿಪಾದಿಸಿತು, ಭಾರತದಲ್ಲಿ ಭಕ್ತಿ ಪಂಥದ ಚಳುವಳಿಯನ್ನು ಹುಟ್ಟು ಹಾಕಿದವರು ವೀರಶೈವರೇ ಎಂದರು.
ನನ್ನ ಅವಧಿಯಲ್ಲಿ ನೀರಾವರಿ ಯೋಜನೆ;
ಈ ಹಿಂದೆ ನಾನು ಬೃಹತ್ ನೀರಾವರಿ ಸಚಿವನಾಗಿದ್ದಾಗ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿನ ನೀರು ಮತ್ತು ಅಂತರ್ಜಲ ಸಮಸ್ಯೆಯನ್ನು ಮನಗೊಂಡು ಎತ್ತಿನಹೊಳೆ ಯೋಜನೆಯನ್ನು ರೂಪಿಸಿ ಸಮಗ್ರ ಯೋಜನಾ ವರದಿಯನ್ನು ತಯಾರಿಸಲಾಯಿತು, ಅಂದಿನ ನಮ್ಮ ಸರ್ಕಾರ ನಮೂದನೆಯನ್ನು ನೀಡಿ ಆರ್ಥಿಕ ಅನುಮೋದನೆಯನ್ನೂ ನೀಡಿತ್ತು ಎಂದು ತಿಳಿಸಿದ ಅವರು ಅವಿಭಜಿತ ಚಿಕ್ಕಬಳ್ಳಾಪುರ ಕೋಲಾರ ಜಿಲ್ಲೆಯಲ್ಲಿ ಹಿಂದೆ ತೋಟಗಾರಿಕೆ ಬೆಳೆಗೆ ಹೆಸರಾಗಿತ್ತು ಹೈನುಗಾರಿಕೆ ಉತ್ತಮವಾಗಿತ್ತು ಇದನ್ನು ನಾನು ಬಲ್ಲೆ ಆದರೆ ಎರಡು ದಶಕಗಳಿಂದ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದೆ ಈ ಸಮಸ್ಯೆಗೆ ಪರಿಸರವನ್ನು ಸಂರಕ್ಷಿಸಲು ಗಿಡಮರಗಳನ್ನು ಬೆಳೆಸಬೇಕು, ಮಳೆ ನೀರನ್ನು ಸಂಗ್ರಹ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಶ್ರೀಶೈಲಪೀಠದ ಶ್ರೀ ಚನ್ನ ಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ತುಮಕೂರು ಸಿದ್ದಗಂಗಾ ಮಠದ ಅಧ್ಯಕ್ಷರಾದ ಸಿದ್ದಲಿಂಗಸ್ವಾಮಿಗಳು, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮನುಬಳಿಗಾರ್, ತಾಲೂಕು ವೀರಶೈವ ಸೇವಾಸಮಿತಿ ಅಧ್ಯಕ್ಷರಾದ ಎಲ್.ಮಹಾದೇವಯ್ಯ ಕಾರ್ಯಾಧ್ಯಕ್ಷರಾದ ಶಶಿಧರ್, ಎಸ್.ಎಸ್.ಪಾಟೀಲ್,ಕೆಪಿಟಿಸಿಎಲ್ ನಿರ್ದೇಶಕರಾದ ಶಿವಕುಮಾರ್, ಉಪಾಧ್ಯಕ್ಷರಾದ ಮಲ್ಲೇಶಣ್ಣ, ಕಾರ್ಯದರ್ಶಿಗಳಾದ ಶಿವಪ್ರಸಾದ್, ಖಜಾಂಚಿ ನಂಜಪ್ಪ ವಿದ್ಯಾರ್ಥಿನಿಲಯದ ಅಧ್ಯಕ್ಷರಾದ ಚಿಕ್ಕಣ್ಣ ನಿರ್ದೇಶಕರಾದ ನವೀನ್ ಕುಮಾರ್ ಉಮಾದೇವಿ ದೇವರಾಜು ಶಂಕ್ರಪ್ಪ ರೇವಣಸಿದ್ದೇಶ್ವರ ನಂಜುಂಡಪ್ಪ ಪರಮೇಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ