ವಿದೇಶದಲ್ಲೂ ಐಪಿಎಲ್ ಸಾಧ್ಯತೆ ತೆರೆದಿರಿಸಿದ ಬಿಸಿಸಿಐ
Team Udayavani, Jun 5, 2020, 6:02 AM IST
ಹೊಸದಿಲ್ಲಿ: ಈ ವರ್ಷದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಮತ್ತೂಂದು ಸುದ್ದಿ ಮಾಡಿದೆ. ಒಂದು ವೇಳೆ ಭಾರತದಲ್ಲಿ ಈ ಕೂಟವನ್ನು ನಡೆಸಲು ಸಾಧ್ಯವಾಗದೇ ಇದ್ದರೆ ಇದನ್ನು ವಿದೇಶದಲ್ಲಿ ಆಡಿಸಲು ಪ್ರಯತ್ನಿಸಲಾಗುವುದು ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಹೇಳಿದ್ದಾರೆ. ಇದು ದೇಶದ ಕ್ರಿಕೆಟ್ ವಲಯದಲ್ಲಿ ಭಾರೀ ಸಂಚಲನ ಮೂಡಿಸುವ ಸಾಧ್ಯತೆ ಇದೆ.
“ಆಟಗಾರರ ಸುರಕ್ಷಾ ದೃಷ್ಟಿಯಿಂದ ಐಪಿಎಲ್ ಪಂದ್ಯಾವಳಿಯನ್ನು ಭಾರತದಲ್ಲಿ ಆಡಿಸುವುದು ಸೂಕ್ತ. ಇದು ನಮ್ಮ ಮುಂದಿರುವ ಮೊದಲ ಆಯ್ಕೆ. ಆದರೆ ಪರಿಸ್ಥಿತಿ ಸುಧಾರಿಸದೆ ಹೋದರೆ ನಾವು ಉಳಿದೆಲ್ಲ ಸಾಧ್ಯತೆಗಳನ್ನು ಪರಿಶೀಲಿಸಲಿದ್ದೇವೆ. 2020ರ ಕೂಟವನ್ನು ಭಾರತದಾಚೆ ನಡೆಸಲು ಪ್ರಯತ್ನಿಸಲಿದ್ದೇವೆ’ ಎಂಬುದಾಗಿ ವಿಶೇಷ ಸಂದರ್ಶನವೊಂದರಲ್ಲಿ ಅರುಣ್ ಧುಮಾಲ್ ಹೇಳಿದ್ದಾರೆ.
ವಿದೇಶದಲ್ಲಿ ಯಶಸ್ಸು
“ನಾವು ಈಗಾಗಲೇ ಎರಡು ಸಲ ಐಪಿಎಲ್ ಪಂದ್ಯಾವಳಿಯನ್ನು ವಿದೇಶದಲ್ಲಿ ನಡೆಸಿ ಯಶಸ್ಸು ಕಂಡಿದ್ದೇವೆ. ಮಹಾಚುನಾವಣೆಯ ಕಾರಣ 2009ರ ಇಡೀ ಕೂಟವನ್ನು ದಕ್ಷಿಣ ಆಫ್ರಿಕಾದಲ್ಲಿ ನಡೆಸಲಾಗಿತ್ತು. ಹಾಗೆಯೇ 2014ರಲ್ಲಿ ಒಂದು ಹಂತದ ಪಂದ್ಯಗಳು ಯುಎಇಯಲ್ಲಿ ನಡೆದಿದ್ದವು. ಆದರೆ ಈ ಬಾರಿಯೂ ಐಪಿಎಲ್ ವಿದೇಶದಲ್ಲಿ ನಡೆಸಬೇಕೆಂಬುದು ನಮ್ಮ ಇಚ್ಛೆಯಲ್ಲ, ಇಂಥದೊಂದು ಸಾಧ್ಯತೆ ಇದೆ, ಅಷ್ಟೇ…’ ಎಂಬುದಾಗಿ ಅವರು ಹೇಳಿದರು.
ಆದರೆ ಅಂದಿನ ಮಹಾಚುನಾವಣೆ ಕೇವಲ ಭಾರತದ ಆಂತರಿಕ ವಿಷಯವಾಗಿತ್ತು. ಈ ವೇಳೆ ಕ್ರಿಕೆಟಿಗೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಕೂಟವನ್ನು ವಿದೇಶದಲ್ಲಿ ಆಯೋಜಿಸಲಾಗಿತ್ತು. ಆದರೆ ಈಗ ಕೋವಿಡ್-19 ವೈರಸ್ ಇಡೀ ಜಗತ್ತನ್ನೇ ವ್ಯಾಪಿಸಿರುವಾಗ ಐಪಿಎಲ್ ಪಂದ್ಯಾವಳಿಯನ್ನು ವಿದೇಶದಲ್ಲಿ ನಡೆಸಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಉದ್ಭವಿಸುತ್ತದೆ.
ಶ್ರೀಲಂಕಾ ವಾಸಿ…
ಇದಕ್ಕೂ ಹಿಂದೊಮ್ಮೆ 2020ರ ಐಪಿಎಲ್ ಕೂಟವನ್ನು ನಡೆಸಲು ಶ್ರೀಲಂಕಾ ಮತ್ತು ಯುಎಇ ಮುಂದೆ ಬಂದಿದ್ದಾಗಿ ವರದಿ ಆಗಿತ್ತು. ಆದರೆ ಈಗ ಇಲ್ಲಿಯೂ ಕೋವಿಡ್-19 ಹಾವಳಿಯೇನೂ ಕಡಿಮೆಯಾಗಿಲ್ಲ.
“ಇದ್ದುದರಲ್ಲಿ ಶ್ರೀಲಂಕಾ ವಾಸಿ. ಆದರೆ ಇಲ್ಲಿಯೂ ಕಳೆದೆರಡು ದಿನಗಳಿಂದ ಕೋವಿಡ್-19 ಸೋಂಕು ಹೆಚ್ಚಿದೆ. ಇಲ್ಲಿಯೂ ಸಮಸ್ಯೆ ಇದೆ’ ಎಂಬುದಾಗಿ ಧುಮಾಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು