ಮೂರನೇ ಅಲೆ ಬಗ್ಗೆ ಈಗಿನಿಂದಲೇ ಎಚ್ಚರಿಕೆ ವಹಿಸಿ


Team Udayavani, Jun 19, 2021, 6:20 AM IST

ಮೂರನೇ ಅಲೆ ಬಗ್ಗೆ ಈಗಿನಿಂದಲೇ ಎಚ್ಚರಿಕೆ ವಹಿಸಿ

ಮಹಾರಾಷ್ಟ್ರದ ಕೊರೊನಾ ಟಾಸ್ಕ್ ಫೋರ್ಸ್‌ ಇನ್ನು 2ರಿಂದ 4 ವಾರಗಳಲ್ಲಿ ಕೊರೊನಾ ಮೂರನೇ ಅಲೆ ಬಾಧಿಸಬಹುದು ಎಂದು ಎಚ್ಚರಿಕೆ ನೀಡಿದೆ. ಈಗಿನಿಂದಲೇ ಮೂರನೇ ಅಲೆ ಎದುರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆಯೂ ಅಲ್ಲಿನ ರಾಜ್ಯ ಸರಕಾರಕ್ಕೆ ಸೂಚಿಸಿದೆ. ಇತ್ತ ರಾಜ್ಯದಲ್ಲೂ ನವೆಂಬರ್‌ ವೇಳೆಗೆ ಮೂರನೇ ಅಲೆ ಬರಬಹುದು ಎಂದು ತಜ್ಞರು ಹೇಳುತ್ತಿದ್ದಾರೆ.

ಮಹಾರಾಷ್ಟ್ರದ ಟಾಸ್ಕ್ ಫೋರ್ಸ್‌ ವರದಿ ವಿಚಾರದಲ್ಲಿ ಸ್ವಲ್ಪ ಮಟ್ಟಿನ ಗೊಂದಲಗಳಿದ್ದರೂ ಮೂರನೇ ಅಲೆ ಬರುವ ಸಾಧ್ಯತೆಗಳನ್ನಂತೂ ತಳ್ಳಿಹಾಕುವಂತಿಲ್ಲ. ಇದು ಅವಲಂಬಿಸಿರುವುದು ಜನರ ವರ್ತನೆಯನ್ನು. ಕೊರೊನಾ ನಿಯಂತ್ರಣದಲ್ಲಿ ಜನರ ಸ್ಪಂದನೆ ಹೇಗಿರುತ್ತದೆಯೋ ಅದಕ್ಕೆ ತಕ್ಕನಾಗಿ ಮೂರನೇ ಅಲೆ ಬಗ್ಗೆ ನಿರೀಕ್ಷೆ ಮಾಡಬಹುದು ಎಂದು ಹೇಳುತ್ತಾರೆ ತಜ್ಞರು. ಸದ್ಯ ಮಹಾರಾಷ್ಟ್ರದ ಟಾಸ್ಕ್ ಫೋರ್ಸ್‌ನ ಸದಸ್ಯರೊಬ್ಬರು ಇನ್ನು 2ರಿಂದ 4 ವಾರದಲ್ಲಿ ಮೂರನೇ ಅಲೆ ಬರಬಹುದು ಎಂಬ ವರದಿಯನ್ನೇ ತಳ್ಳಿಹಾಕಿದ್ದಾರೆ. ಈ ರೀತಿ ಮೂರನೇ ಅಲೆ ಇಂತಿಷ್ಟೇ ಸಮಯದಲ್ಲಿ ಬರುತ್ತದೆ ಎಂದು ನಿಖರವಾಗಿ ಹೇಳಲು ಸಾಧ್ಯವೇ ಇಲ್ಲ ಎಂಬುದು ಅವರ ಮಾತು. ಅಂದರೆ ಅಮೆರಿಕದಲ್ಲಿ ಮೊದಲ ಅಲೆಯಿಂದ ಎರಡನೇ ಅಲೆಗೆ 14ರಿಂದ 15 ವಾರಗಳ ಅಂತರವಿತ್ತು. ಆದರೆ ಇಂಗ್ಲೆಂಡ್‌ ನಲ್ಲಿ ಎಂಟು ವಾರಗಳಲ್ಲೇ ಮತ್ತೂಂದು ಅಲೆ ಬಂದಿತು. ನಾವು ಲೆಕ್ಕಾಚಾರ ಹಾಕುವಾಗ ಇಂತಿಷ್ಟು ಸಮಯದಲ್ಲಿ ಬರಬಹುದು ಎಂದು ಅಂದಾಜು ಮಾಡಲು ಮಾತ್ರ ಸಾಧ್ಯವಾಗುತ್ತದೆ. ಆದರೆ ಇಷ್ಟೇ ದಿನದಲ್ಲಿ ಬರಲಿದೆ ಎಂದು ಹೇಳಲಾಗುವುದಿಲ್ಲ ಎಂದು ಮಹಾರಾಷ್ಟ್ರ ಟಾಸ್ಕ್ ಫೋರ್ಸ್‌ನ ಸದಸ್ಯ ಡಾ| ರಾಹುಲ್‌ ಪಂಡಿತ್‌ ಹೇಳಿದ್ದಾರೆ.

ಆದರೆ ಮೂರನೇ ಅಲೆ ಯಾವಾಗ ಬರಲಿದೆ ಎಂಬ ಲೆಕ್ಕಾಚಾರ ಹಾಕುವ ಬದಲು ಜನರು ಕೊರೊನಾ ವಿಚಾರದಲ್ಲಿ ಹುಷಾರಾಗಿ ಇರಬೇಕು ಎಂದು ವೈದ್ಯರು ಹೇಳುತ್ತಾರೆ. ಮಹಾರಾಷ್ಟ್ರದಲ್ಲಿ 5 ಹಂತಗಳ ಅನ್‌ ಲಾಕ್‌ ಘೋಷಿಸಲಾಗಿದೆ. ಈಗಾಗಲೇ ಜನ ಯಥೇಚ್ಚವಾಗಿ ರಸ್ತೆಗಿಳಿಯಲು ಆರಂಭಿಸಿದ್ದಾರೆ. ವೈದ್ಯರು ಹೇಳುವ ಪ್ರಕಾರ, ಇದು ತಪ್ಪು. ಅನ್‌ ಲಾಕ್‌ ಎಂದಾಕ್ಷಣ ರಸ್ತೆಗಿಳಿಯುವುದಲ್ಲ. ಸರಕಾರದ ನಿಯಮಗಳನ್ನು ಪಾಲನೆ ಮಾಡಿಕೊಂಡು, ಅಗತ್ಯವಿದ್ದರಷ್ಟೇ ರಸ್ತೆಗೆ ಇಳಿಯಬೇಕು. ಇಲ್ಲದಿದ್ದರೆ, ಮತ್ತೆ ಗುಂಪು ಗುಂಪಾಗಿ ಸೇರುವುದು, ಮಾಸ್ಕ್ ಧರಿಸದೇ ಓಡಾಡುವುದು ಸೇರಿದಂತೆ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದರೆ ತತ್‌ಕ್ಷ ಣವೇ ಪ್ರಕರಣಗಳು ಹೆಚ್ಚಾಗಬಹುದು. ಪ್ರಕರಣಗಳು ಹೆಚ್ಚಾದ ತತ್‌ಕ್ಷಣ ಅದನ್ನು ಮತ್ತೂಂದು ಅಲೆ ಎಂದು ಕರೆಯುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಹೇಳುತ್ತಾರೆ ತಜ್ಞರು.

ಕರ್ನಾಟಕದಲ್ಲಿ ಈಗಾಗಲೇ ಲಾಕ್‌ ಡೌನ್‌ ನಿಂದ ಕೊಂಚ ಆರಾಮ ನೀಡಲಾಗಿದೆ. ಸೋಮವಾರದಿಂದ ಇನ್ನಷ್ಟು ವಿನಾಯಿತಿ ನೀಡುವ ಸಾಧ್ಯತೆ ಇದೆ. ಇನ್ನಷ್ಟು ವಿರಾಮ ಕೊಟ್ಟಿದ್ದಾರೆ ಎಂದ ಕೂಡಲೇ ಕೊರೊನಾ ಸಂಪೂರ್ಣವಾಗಿ ಹೋಗಿದೆ ಎಂದಲ್ಲ. ಈಗಲೂ ರಾಜ್ಯದಲ್ಲಿ 5 ರಿಂದ 7 ಸಾವಿರದ ಒಳಗೆ ಹೊಸ ಪ್ರಕರಣಗಳು ಬರುತ್ತಿವೆ. ಲೆಕ್ಕಾಚಾರದಲ್ಲಿ ಪಾಸಿಟಿವಿಟಿ ರೇಟ್‌ ಕಡಿಮೆ ಇರಬಹುದು ಆದರೆ ಪ್ರಕರಣಗಳ ಸಂಖ್ಯೆಯಂತೂ ಹೆಚ್ಚಾಗಿಯೇ ಇದೆ. ಹೀಗಾಗಿ ಜನ ಯಾವುದೇ ಕಾರಣಕ್ಕೂ ಮೈಮರೆಯದೇ ಕೊರೊನಾ ನಿಯಮಗಳನ್ನು ಪಾಲಿಸಿಕೊಂಡೇ ಹೋಗುವ ಮೂಲಕ ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಹರಡದಂತೆ ಎಚ್ಚರಿಕೆ ವಹಿಸಬೇಕು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.