ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದರಿಂದ ವೀರ ಸಾವರ್ಕರ್ ಗೂ ಅಪಮಾನ: ಸಿ.ಟಿ.ರವಿ


Team Udayavani, Oct 21, 2019, 7:50 PM IST

e-1

ವಿಜಯಪುರ: ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನ ಮಾಡಿದವರು, ವೀರ ಸಾವರ್ಕರ್ ಅವರಂಥ ಸ್ವಾತಂತ್ರ್ಯ ಪ್ರೇಮಿಯನ್ನೂ ಅವಮಾನ ಮಾಡಿದ್ದಾರೆ.
ಭವಿಷ್ಯದಲ್ಲಿ ನೇತಾಜಿ ಶುಭಾಶ್ಚಂದ್ರ ಬೋಸ್, ಚಂದ್ರಶೇಖರ ಆಝಾದ್ ಅವರನ್ನು ಸ್ವಾತಂತ್ರ್ಯ ಹೋರಾಟಗಾರರೇ ಅಲ್ಲ ಎಂದು ಹೇಳುವ ಮಟ್ಟಕ್ಕೆ ಹೋಗುತ್ತಾರೆ ಎಂದು ಸಚಿವ ಸಿ.ಟಿ.ರವಿ ವಾಗ್ದಾಳಿ ನಡೆಸಿದರು.

ಸೋಮವಾರ ಜಿಲ್ಲೆಗೆ ಆಗಮಿಸಿದ್ದ ಅವರು, ಕಾಂಗ್ರೆಸ್ಸಿಗರು ಮಾತ್ರ ಭಾರತ ಸ್ವಾತಂತ್ರ್ಯ ಹೋರಾಟಗಾರರು ಎಂದು ಬಿಂಬಿಸುವ ಹುನ್ನಾರದ ವರ್ತನೆ ಇದು ಎಂದು ಕುಟುಕಿದರು.
ಮಹಾತ್ಮಾ ಗಾಂಧೀಜಿ ಸೇರಿದಂತೆ ಎಲ್ಲ ಸ್ವಾತಂತ್ರ್ಯ ಸೇನಾನಿಗಳ ಕುರಿತೂ ಗೌರವ ಇರಿಸಿಕೊಳ್ಳಬೇಕು ಎಂದರು.

ಕಾಂಗ್ರೆಸಿಗರು ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಮಾನ ಮಾಡುವುದನ್ನೇ ಕೆಲಸ ಮಾಡಿಕೊಂಡಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದ ಒಂದು ಮುಖವನ್ನು ಮಾತ್ರ ಹೇಳುವುದು ಸರಿಯಲ್ಲ. ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸ ತಿಳಿಸುವಲ್ಲಿ ಕಾಂಗ್ರೆಸ್ ನಾಯಕರ ವರ್ತನೆ ಅಪಾಯಕಾರಿ ಬೆಳವಣಿಗೆ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ವೀರ್ ಸಾವರಕರ್, ಸಿದ್ದಗಂಗಾ ಶ್ರೀ ವ್ಯಕ್ತಿತ್ವ ತುಲನೆ ಮಾಡುವುದು ಸರಿಯಲ್ಲ. ಇಬ್ಬರಿಗೂ ಭಾರತ ರತ್ನ ನೀಡುವದರಿಂದ ಪ್ರಶಸ್ತಿಯ ಬೆಲೆ ಹೆಚ್ಚಲಿದೆಯೇ ಹೊರತು ಸಿದ್ದರಾಮಯ್ಯ ತಿಹಾರ್ ಜೈಲಿಗೆ ಹೋಗಲಿ, ಕರಿ ನೀರಿನ ಶಿಕ್ಷೆಯನ್ನ ಹೇಗೆ ಕೊಟ್ಟಿದ್ದರು ಅನ್ನೋದನ್ನ ನೋಡಿದರೆ ಸತ್ಯ ಗೊತ್ತಾಗುತ್ತೆ. ಟಿಪ್ಪು ಸುಲ್ತಾನನ್ನು ವೈಭವಿಕರಿಸಿದ ಮನಸ್ಸುಗಳಿಗೆ ಸಾವರ್ಕರ್ ಹಿಂದೂ ಎನ್ತಿರೋದು ಅಚ್ಚರಿ ಮೂಡಿಸಿದೆ. ಟಿಪ್ಪುಸುಲ್ತಾನನ ವೈಭವಿಕರಿಸುವಾಗ ಸಿದ್ದರಾಮಯ್ಯ ಅವರಿಗೆ ತತ್ವ ಸಿದ್ದಾಂತ ಅಡ್ಡಿ ಆಗಲ್ಲ. ಸಿದ್ದರಾಮಯ್ಯ ತನ್ನ ಹೆಸರಲ್ಲಿ ಸಿದ್ಧರಾಮ ಇಬ್ಬರು ಇದ್ದಾರೆ ಅಂತ ಡೈಲಾಗ್ ಹೊಡಿತಾರೆ. ಈಗ ಹೀಗೆ ಮಾತಾಡುತ್ತಾರೆ. ಸಿದ್ದರಾಮಯ್ಯ ಮಾತಿನ ಹಿಂದೆ ತಂತ್ರಗಾರಿಕೆ ಇದೆ ಎಂದರು.

ರಾಜ್ಯದಲ್ಲಿ‌‌ ಮತ್ತೆ ಪ್ರವಾಹ ಬಂದಿದ್ದರೂ‌ ಜನರಲ್ಲಿ‌ ಜಾಗೃತೆ ಬಂದಿದೆ. ಅನಾಹುತ ಆಗುವ ಮುನ್ನ ಸುರಕ್ಷಿತ ಸ್ಥಳಗಳಿಗೆ ತೆರಳಿ ಸಾವು‌ ನೋವಾಗದಂತೆ ಜನರು ಮುನ್ನೆಚ್ವರಿಕೆ ವಹಿಸುತ್ತಿದ್ದಾರೆ. ಸರ್ಕಾರ ಪ್ರವಾಹ ಸಂತ್ರಸ್ಥರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ. ನೈಸರ್ಗಿಕ ಅನಾಹುತ ತಡೆಯಲು ಸರ್ಕಾರದ ಬಳಿ ಏನು ನಿಯಂತ್ರಣ ಯಂತ್ರವಿಲ್ಲ ಎಂದರು.

ಮಹಾರಾಷ್ಟ್ರ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ. ಎನ್. ಸಿ.ಪಿ. ಪಕ್ಷಕ್ಕಿಂತ ಕಡಿಮೆ ಸ್ಥಾನ ಪಡೆಯುವ ಮೂಲಕ ಕಾಂಗ್ರೆಸ್ ಪಡೆಯಲಿದೆ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಬಿಜೆಪಿ ಶಿವಸೇನೆ ಮೈತ್ರಿ ಮಹಾರಾಷ್ಟ್ರ ರಾಜ್ಯದಲ್ಲಿ ಮತ್ತೊಮ್ಮೆ ಭರ್ಜರಿ ಜಯ‌ ಪಡೆದು ಅಧಿಕಾರದಲ್ಲಿ ಮುಂದುವರೆಯಲಿದೆ ಎಂದರು.

ರಾಜ್ಯದಿಂದ ಮಹಾರಾಷ್ಟ್ರಕ್ಕೆ ನೀರು ಬಿಡುವ ವಿಚಾರ ಕೊಡು ಕೊಳ್ಳುವಿಕೆ ಮೂಲಕ ನಡೆಯಬೇಕು. ನೆರೆ ರಾಜ್ಯಗಳು ಸಹೋದರತ್ವದಿಂದ ಪರಸ್ಪರ ಹೊಂದಾಣಿಕೆಯಿಂದ ನಡೆಯಬೇಕು ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.