ಹಾಸಿಗೆ ಸಮಸ್ಯೆ, ಸ್ಮಶಾನದ ಕೊರತೆ


Team Udayavani, Jul 3, 2020, 5:50 AM IST

hasige-samasye

ಬೆಂಗಳೂರು: ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಗುರುವಾರ ದಾಖಲೆಯ 889 ಮಂದಿಗೆ ಸೋಂಕು ದೃಢಪಟ್ಟಿದ್ದು, ಈವರೆಗೆ ಮೃತಪಟ್ಟ ಸೋಂಕಿತರ ಸಂಖ್ಯೆ ಶತಕ ದಾಟಿದೆ. ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಮಸ್ಯೆ ಹಾಗೂ ಸ್ಮಶಾನದ ಕೊರತೆ ತಲೆದೋರಿದ್ದು, ಪಾಲಿಕೆ ನಿದ್ದೆಗೆಡಿಸಿದೆ. ನಗರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 6,179ಕ್ಕೆ ಏರಿಕೆಯಾಗಿದೆ.

ಇದರಲ್ಲಿ ಆಸ್ಪತ್ರೆಗಳು, ಆರೈಕೆ ಕೇಂದ್ರಗಳು ಸೇರಿದಂತೆ ಹಲವು  ಕಡೆ 5505 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿ ಮೇ ತಿಂಗಳಾಂತ್ಯಕ್ಕೆ ಕೇವಲ 12 ಸೋಂಕಿತರ ಸಾವಿನ ಪ್ರಮಾಣ ವರದಿಯಾಗಿತ್ತು. ಅದರೆ, ಜೂನ್‌ ನಂತರ ಸಾವಿನ ಪ್ರಮಾಣ ಹೆಚ್ಚಳವಾಗಿದ್ದು ಜೂನ್‌ ತಿಂಗಳಲ್ಲಿ 83 ಸೋಂಕಿತರು  ಸಾವಿಗೀಡಾಗಿದ್ದಾರೆ. ಈವರೆಗೆ 100 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 524 ಪುರುಷರು, 364 ಮಹಿಳೆಯರು ಹಾಗೂ ತೃತೀಯ ಲಿಂಗ ಒಬ್ಬರಿಗೆ ಸೋಂಕು ದೃಢಪಟ್ಟಿದ್ದು,

ಬೆಂಗ ಳೂರು ದಕ್ಷಿಣ ವಲಯದಲ್ಲಿ  ಶೇ. 37, ಪೂರ್ವ ವಲಯದಲ್ಲಿ ಶೇ. 20, ಪಶ್ಚಿಮ ವಲಯದಲ್ಲಿ ಶೇ. 17 ರಷ್ಟು ಪಾಲಿದೆ. 495 ಕಂಟೈನ್ಮೆಂಟ್‌ ವಲಯ ಗುರುತಿಸಲಾಗಿದೆ. ಇದೇ ಅವಧಿಯಲ್ಲಿ ಶಾಂತಲಾನಗರ 30, ಸಿಂಗಸಂದ್ರ 29, ಜಯನಗರ 22, ಧರ್ಮರಾಯಸ್ವಾಮಿ  ದೇವಸ್ಥಾನ 21, ವಿದ್ಯಾಪೀಠ 20, ಹೊಂಬೇಗೌಡ ನಗರ 18, ಸದ್ದುಗುಂಟೆ ಪಾಳ್ಯ 15, ರಾಜರಾಜೇಶ್ವರಿ ನಗರ 14, ಜಯನಗರ ಪೂರ್ವ 14, ಬಸವನ ಗುಡಿ 13, ಕತ್ರಿಗುಪ್ಪೆ 12, ಸುಧಾಮನಗರ 12, ಅರಿಕೆರೆ 12, ಮಡಿವಾಳ 10 ಸೋಂಕಿತರು  ದೃಢಪಟ್ಟಿದ್ದಾರೆ.

ಗ್ರಾಮಾಂತರ ಡಿಸಿಗೂ ಸೋಂಕು: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ರವೀಂದ್ರ ಅವರಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಇರುವ ದೊಡ್ಡಬಳ್ಳಾಪುರದ ಕಚೇರಿ ಹಾಗೂ  ಬೆಂಗಳೂರಿನ ಕಂದಾಯ ಭವನದಲ್ಲಿರುವ ತಹಶೀಲ್ದಾರ್‌ ಕಚೇರಿಯನ್ನು ಸೀಲ್‌ಡೌನ್‌ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಹಶೀಲ್ದಾರ್‌ ಗೆ ತಗುಲಿರುವುದು ದೃಢಪಟ್ಟಿದ್ದು, ಅವರು  ಜಿಲ್ಲಾಧಿಕಾರಿ ಕರೆದ ಸಭೆಯಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿ ಮನೆ ಬಸವೇಶ್ವರ ನಗರ ದಲ್ಲಿದ್ದು, ಕುಟುಂಬಸ್ಥರನ್ನು ಕ್ವಾರಂಟೈನ್‌ ಮಾಡಲಾಗಿದೆ. ಅಲ್ಲದೆ, ಆರೋಗ್ಯ ಇಲಾಖೆ ಆಯುಕ್ತ ಪಂಕಜ್‌ಕುಮಾರ್‌ ಪಾಂಡೆ ಅವರ ಕಾರು ಚಾಲಕನಿಗೆ ಸೋಂಕು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಆಯುಕ್ತರು ಸ್ವಯಂ ಕ್ವಾರಂಟೈನ್‌ ಆಗಿದ್ದಾರೆ. ಎಲೆಕ್ಟ್ರಾನಿಕ್‌ ಸಿಟಿ ಆರ್‌ಟಿಒ ಕಚೇರಿಯಲ್ಲಿ ಡಿಎಲ್‌ ಕೇಸ್‌ ವಕರ್‌ ಸೋಂಕಿನಿಂದ ಮೃತಪಟ್ಟಿದ್ದಾರೆ.

ಸಿಟಿಯಲ್ಲಿ “ಮರಳಿಗೂಡಿಗೆ …’ ಜಪ: ನಗರದಲ್ಲಿ ಕೋವಿಡ್‌ 19 ತಾರಕಕ್ಕೇರುತ್ತಿದ್ದು, ನಗರಕ್ಕೆ ಮರಳಿದ್ದ ವಲಸಿಗರು ಮತ್ತೆ ತವರಿನತ್ತ ಮುಖ ಮಾಡುತ್ತಿದ್ದು, ಲಾಕ್‌ ತೆರವಿನ ಬಳಿಕ ಕೆಲಸಕ್ಕೆ ಕರೆಸಿಕೊಂಡಿದ್ದ ಐಟಿ ಕಂಪನಿಗಳು ಮತ್ತೆ ವರ್ಕ್‌ಫ್ರಂ ಹೋಂ ಗೆ ಚಿಂತನೆ ನಡೆಸಿವೆ. ಕೆಲ ಕಂಪನಿಗಳಲ್ಲಿ ಸಿಬ್ಬಂದಿಗೆ, ಅವರ ಸಂಬಂಧಿಗಳಿಗಳಿ ಸೋಂಕು ದೃಢಪಡುತ್ತಿದೆ. ಅಲ್ಲದೆ ಸಿಬ್ಬಂದಿಗಳಿರುವ ಪ್ರದೇಶಗಳು ಸೀಲ್‌ಡೌನ್‌ ಆಗುತ್ತಿವೆ. ಇದರಿಂದ ಕಾರ್ಯಕ್ಷೇತ್ರದಲ್ಲಿ ಆತಂಕ ಸೃಷ್ಟಿಯಾಗುತ್ತಿದೆ. ಹೀಗಾಗಿ, ವರ್ಕ್‌ ಫ್ರಂ ಹೋಂಗೆ ಕಂಪನಿಗಳು ನಿರ್ಧರಿಸಿವೆ.

ಇನ್ನು ಕೆಲ ಕಂಪನಿಗಳು ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿದ್ದಾರೆ. ಈ ಹಿಂದೆ ಲಾಕ್‌ಡೌನ್‌ ಸಂದರ್ಭದಲ್ಲಿ ಊರಿಗೆ ತೆರಳುವಾಗ ಉಂಟಾದ ಗೊಂದಲ  ಮತ್ತೆಯಾಗದಿರಲಿ ಎಂದು ಎಚ್ಚೆತ್ತ ಹಲವರು ಶುಕ್ರವಾರ ರಾತ್ರಿಯೇ ಊರು ಬಿಡಲು ಸಿದ್ಧಗೊಂಡಿದ್ದಾರೆ. ಪರಿಣಾಮ ಶನಿವಾರ ಹಾಗೂ ಭಾನುವಾರ ಬೆಂಗಳೂರಿನಿಂದ ದೂರದ ಜಿಲ್ಲೆಗಳಿಗೆ ತೆರಳುವ ಬಸ್‌ಗಳ ಸೀಟ್‌ ಗಳು ಈಗಾಗಲೇ  ಭರ್ತಿಯಾಗಿವೆ. ಅಲ್ಲದೆ ಖಾಸಗಿ ಕಾರುಗಳನ್ನು ಅನೇಕರು ಬುಕಿಂಗ್‌ ಮಾಡಿ ಕಾಯ್ದಿರಿಸಿದ್ದಾರೆ.

ಅಂತ್ಯಸಂಸ್ಕಾರ ಕಾಣದ ಶವಗಳು: ಕೋವಿಡ್‌ 19 ಸೋಂಕಿನಿಂದ ಮೃತಪಟ್ಟು ಎರಡು ದಿನವಾದರೂ, ನಾಲ್ವರಿಗೆ ಪಾಲಿಕೆ ಅಧಿಕಾರಿಗಳು ಅಂತ್ಯಸಂಸ್ಕಾರ ನಡೆಸಿಲ್ಲ. ರಾಜೀವ್‌ಗಾಂಧಿ ಆಸ್ಪತ್ರೆಯ ಶವಾಗಾರದಲ್ಲಿಯೇ ಸೋಂಕಿತರ  ಶವಗಳನ್ನು ಇಡಲಾಗಿದೆ. ಶವಗಳನ್ನು ಪಾಲಿಕೆ ಸಿಬ್ಬಂದಿಗೆ ಹಸ್ತಾಂತರಿಸಲು ಅಗತ್ಯ ಪ್ರಕ್ರಿಯೆ ಮುಕ್ತಾಯವಾಗಿವೆ. ಮೂರು ಶವ ಆಸ್ಪತ್ರೆಯಲ್ಲಿವೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ನಾಗರಾಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.