ಬೆಳಗಾವಿಯಲ್ಲಿದೆ ಸಿಡಿ ಫ್ಯಾಕ್ಟರಿ: ಲಖನ್‌ ಜಾರಕಿಹೊಳಿ ಕಿಡಿ


Team Udayavani, Jan 31, 2023, 8:31 PM IST

ಬೆಳಗಾವಿಯಲ್ಲಿದೆ ಸಿಡಿ ಫ್ಯಾಕ್ಟರಿ: ಲಖನ್‌ ಜಾರಕಿಹೊಳಿ ಕಿಡಿ

ಗೋಕಾಕ: “ಕಳೆದ ಎರಡು ದಶಕಗಳಿಂದ ಸಿಡಿ ಕಾರ್ಖಾನೆ ಬೆಳಗಾವಿಯಲ್ಲೇ ಇದ್ದು, ಇಲ್ಲಿ ತಯಾರಾದ ಸಿಡಿಗಳು ಕನಕಪುರ ಮತ್ತು ಬೆಂಗಳೂರಿನಲ್ಲಿ ರಿಲೀಸ್‌ ಆಗುತ್ತವೆ. ಸಿಬಿಐ ತನಿಖೆ ನಡೆದರೆ ಎಲ್ಲವೂ ಹೊರಬರಲಿದೆ. ಹಾಗೆ ಯೇ ಕೆಪಿಸಿಸಿ ಅಂದರೆ “ಕರ್ನಾಟಕ ಪ್ರದೇಶ್‌ ಸಿಡಿ ಕಮಿಟಿ’ ಆಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಲಖನ್‌ ಜಾರಕಿಹೊಳಿ ವ್ಯಂಗ್ಯವಾಡಿದರು.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಖರ್ಗೆ, ಪರಮೇಶ್ವರ, ಸಿದ್ದರಾಮಯ್ಯ ಸಾಹೇಬರು ಇದ್ದಾಗ ಕಾಂಗ್ರೆಸ್‌ ಬೇರೆ ಇತ್ತು. ಸಿದ್ದರಾಮಯ್ಯ, ಖರ್ಗೆ ಸಾಹೇಬರು ನಮ್ಮ ಗುರುಗಳು ಅಂತಾ ಒಪ್ಪುತ್ತೇವೆ. ಕಾಂಗ್ರೆಸ್‌ನಲ್ಲಿ ಡಿಕೆಶಿ ಬಗ್ಗೆ ಯಾರೂ ಮಾತನಾಡಲ್ಲ, ಎಲ್ಲರ ಸಿಡಿಗಳು ಅವರ ಬಳಿಯಿವೆ ಎಂದರು.

ಸಿಡಿ ಪ್ರಕರಣ ಬಹಿರಂಗವಾಗಿ ಮಾ.3ಕ್ಕೆ ಎರಡು ವರ್ಷ ಆಯ್ತು, ಎಲ್ಲ ಷಡ್ಯಂತ್ರ ನಡೆದಿದೆ. 2000ನೇ ಇಸ್ವಿಯಿಂದ ಇದು ನಡೆಯುತ್ತಿದೆ. ಇದಕ್ಕೆ ಸಿಬಿಐ ತನಿಖೆ ಒಂದೇ ಪರಿಹಾರ. ಈಗ ಸ್ಯಾಂಟ್ರೋ ರವಿ ಅಂತಾ ಏನು ತೋರಿಸುತ್ತಿದ್ದಾರಲ್ಲ, ಹಾಗೆಯೇ 800 ಸ್ಟಾರ್ಟ್‌ ಆಗಿ ಬಿಎಂಡಬ್ಲೂéವರೆಗೂ ಇದೆ. ಒಂಟಿತೋಳ ಒಂಟಿತೋಳ ಅಂದ್ರು, ಒಂಟಿತೋಳ ಏನ್‌ ಮಾಡಿತು? ಕಾಂಗ್ರೆಸ್‌ ಸರ್ಕಾರ ಬೀಳಲು ಬೆಳಗಾವಿಯವರೇ ಕಾರಣ. ನಾವು ಸಿಂಪಲ್‌ ಆಗಿಯೇ ಇರ್ತೀವಿ, ಜನ ನಮ್ಮ ಜೊತೆ ಇರ್ತಾರೆ ಎಂದರು.

ರಮೇಶ ಜಾರಕಿಹೊಳಿ ಅವರು, ಲಕ್ಷ್ಮೀ ಹೆಬ್ಟಾಳಕರ ಅವರನ್ನು “ವಿಷಕನ್ಯೆ ’ ಎಂದು ಕರೆದ ಕುರಿತು ಪ್ರತಿಕ್ರಿಯಿಸಿದ ಲಖನ್‌, “ವಿಷಕನ್ಯೆ ’ ಅಷ್ಟೇ ಅಲ್ಲ “ಮಟ್ಯಾಷ್‌ ಲೆಗ್‌ ಮತ್ತು ರಕ್ತ ಕಣ್ಣೀರು’ ಎಂದು ಬೆಳಗಾವಿ ಜನ ಮಾತನಾಡುತ್ತಾರೆ. ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ಮೊದಲಿನಿಂದಲೂ ಇದೆ. ಚುನಾವಣೆಗೆ ಆರು ತಿಂಗಳು ಇರುತ್ತಲೇ ಜೋರಾಗಿರುತ್ತದೆ. ಆ ಮಟ್ಯಾಷ್‌ಲೆಗ್‌ನಿಂದ ಸಿದ್ದರಾಮಯ್ಯ ಮಾಜಿ ಆದರು, ಕುಮಾರಸ್ವಾಮಿ ಸರ್ಕಾರ ಹೋಯಿತು. ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ನಾನು ಕಾಂಗ್ರೆಸ್‌ನಿಂದ ದೂರವಾದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಅಂದರೆ ಕರ್ನಾಟಕ ಪ್ರದೇಶ ಸಿಡಿ ಕಂಪನಿ ಅಧ್ಯಕ್ಷ. ರಮೇಶ ಜಾರಕಿಹೊಳಿಗೆ ಶಕ್ತಿ ಇದೆ, ಬಹಿರಂಗವಾಗಿ ಮಾತನಾಡಿದ್ದಾರೆ. ಧೈರ್ಯ ಇಲ್ಲದೇ ಇರೋರು ಮನೆಯಲ್ಲಿ ಕುಳಿತುಕೊಳ್ಳುತ್ತಾರೆ. ಒಂದು ವರ್ಷದಿಂದ ಪ್ರಕ ರಣ ಸಿಬಿಐಗೆ ವಹಿಸಬೇಕು ಅಂತ ನಮ್ಮ ಬೇಡಿಕೆ ಇದೆ. ಅನೇಕರು ನೊಂದು, ಬೆಂದು ಹೋಗಿದ್ದಾರೆ. ಬೆಂಗಳೂರು, ಮುಂಬೈ, ಕೇರಳವರೆಗೆ ಅವರ ಲಿಂಕ್‌ ಇದೆ. ರಮೇಶ ಜಾರಕಿಹೊಳಿ ಅವರಿಗೆ ದಾಖಲೆ ಬಿಡುಗಡೆ ಮಾಡಬೇಡಿ, ಸಿಬಿಐಗೆ ಕೊಡಿ ಎಂದು ಹೇಳಿದ್ದೇನೆ. ಕಾಂಗ್ರೆಸ್‌ ಸರ್ಕಾರ ಬೀಳಿಸಲು ಬೆಳಗಾವಿ ಶಾಸಕರು ಕಾರಣ. ಆ ಕ್ಷೇತ್ರದಲ್ಲಿ ನಮ್ಮ ಕುಟುಂಬದ ಅಭಿಮಾನಿಗಳು 20 ಸಾವಿರ ಜನರಿದ್ದಾರೆ ಎಂದರು.

ಸಂತ್ರಸ್ತರೋ-ಸಂತೃಪ್ತರೋ ಮುಂದೆ ಗೊತ್ತಾಗಲಿದೆ. ಬೇರೆಯವರಾದರೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಕುಟುಂಬಸ್ಥರು, ಕ್ಷೇತ್ರದ ಜನ ಬೆನ್ನಿಗೆ ನಿಂತಿದ್ದಾರೆ. ಸಿಬಿಐ ತನಿಖೆ ಆದರೆ ಲಂಚ-ಮಂಚ ಎಲ್ಲ ಹೊರಗೆ ಬರಲಿದೆ. ಯಾರು ಎಲ್ಲಿ ಪ್ಯಾಂಟ್‌ ಬಿಚ್ಚುತ್ತಾರೆ, ಲುಂಗಿ ಬಿಚ್ಚುತ್ತಾರೆ ಗೊತ್ತಾಗಲಿದೆ ಎಂದ ಅವರು, ರಮೇಶ ಜಾರಕಿಹೊಳಿ ನಿವೃತ್ತಿಗೆ ಜನ ಅವಕಾಶ ಕೊಡಲ್ಲ ಎಂದರು.

ಟಾಪ್ ನ್ಯೂಸ್

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ

Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ

ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?

ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?

Chikkodi ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಘೋಷಣೆ: ಸತೀಶ ಜಾರಕಿಹೊಳಿ 

Chikkodi ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿ ಫೈನಲ್‌: ಸಚಿವ ಸತೀಶ ಜಾರಕಿಹೊಳಿ 

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.