Belapu: ಅಕ್ರಮ ಗೋಸಾಗಾಟ;ಆರೋಪಿಗಳು ಪರಾರಿ
Team Udayavani, Aug 20, 2023, 4:28 PM IST
ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಪು ಇಂಡಸ್ಟ್ರಿಯಲ್ ಏರಿಯಾದ ಬಳಿ ದನ ಕಳವು ಮಾಡಿ ಎಳೆದುಕೊಂಡು ಹೋಗುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರನ್ನು ಕಂಡು 2 ದನಗಳನ್ನು ಬಿಟ್ಟು ಪರಾರಿಯಾದ ಘಟನೆ ಶನಿವಾರ ನಡೆದಿದೆ. ಆರೋಪಿಗಳು ಬೆಳಪು ಗ್ರಾಮದ ಮಹಮ್ಮದ್ ರಫೀಕ್ ಮತ್ತು ಸಂಶುದ್ದೀನ್ ಎಂದು ಪೊಲೀಸರು ಗುರುತಿಸಿದ್ದಾರೆ.
ಶಿರ್ವ ಪೊಲೀಸ್ ಠಾಣಾಧಿಕಾರಿ ಶಕ್ತಿವೇಲು ಅವರು ಶನಿವಾರ ಮಧ್ಯಾಹ್ನ ಬೆಳಪು ಇಂಡಸ್ಟ್ರಿಯಲ್ ಏರಿಯಾದ ಬಳಿ ಕುತ್ತಿಗೆಗೆ ಹಗ್ಗ ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ದನ ಸಾಗಾಟ ಮಾಡುತ್ತಿದ್ದವರನ್ನು ಬೆನ್ನಟ್ಟಿದಾಗ ಅವರಿಬ್ಬರು ದನಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.
ದನಗಳನ್ನು ವಶಕ್ಕೆ ಪಡೆದ ಪೊಲೀಸರು ಅವರಿಬ್ಬರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಮ್ಮದ್ ರಫೀಕ್ ಶಿರ್ವ ಪೊಲೀಸ್ ಠಾಣೆೆಯ ರೌಡಿ ಅಸಾಮಿಯಾಗಿದ್ದು, ಸಂಶುದ್ದೀನ್ 2022ರಲ್ಲಿ ಶಿರ್ವ ಠಾಣೆಯಲ್ಲಿ ದಾಖಲಾದ ಗೋಹತ್ಯಾ ಪ್ರಕರಣದ ಆರೋಪಿಯಾಗಿದ್ದಾನೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?