ಬೆಳಗಾವಿ: ತೋಟಗಳು ಹೆಚ್ಚಿದರೂ ತಗ್ಗಿದ ಮಾವು ಇಳುವರಿ

ಸುಮಾರು ಶೇ. 30ರಿಂದ 40ರಷ್ಟು ಇಳುವರಿ ಕಡಿಮೆ ಬರುವ ಸಾಧ್ಯತೆ ಇದೆ.

Team Udayavani, Apr 18, 2023, 6:36 PM IST

ಬೆಳಗಾವಿ: ತೋಟಗಳು ಹೆಚ್ಚಿದರೂ ತಗ್ಗಿದ ಮಾವು ಇಳುವರಿ

ಬೆಳಗಾವಿ: ಜಿಲ್ಲೆಯಲ್ಲಿ ಮಾವಿನ ತೋಟಗಳ ವ್ಯಾಪ್ತಿ ಹೆಚ್ಚಾಗುತ್ತಿದ್ದರೂ ಈ ಬಾರಿ ಮಾವು ಇಳುವರಿಯಲ್ಲಿ ಇಳಿಕೆ ಆಗುವ ಸಾಧ್ಯತೆ ಇದ್ದು, ಬೆಳೆಗಾರರು ಚಿಂತೆಗೀಡಾಗಿದ್ದಾರೆ. ಬದಲಾದ ಹವಾಮಾನ ಹಾಗೂ ಇನ್ನೊಂದೆಡೆ ಗಾಳಿ-ಮಳೆಯ
ರಭಸಕ್ಕೆ ಮಾವು ಇಳುವರಿ ಇಳಿಮುಖವಾಗಲಿದೆ. ಅತಿ ಹೆಚ್ಚು ಮಾವು ಬೆಳೆಯುವ ಜಿಲ್ಲೆ ಎಂಬ ಖ್ಯಾತಿ ಗಳಿಸಿರುವ ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ಉತ್ಪಾದನೆ ಕಡಿಮೆ ಆಗಲಿದೆ. ಕಳೆದ ಸಲಕ್ಕಿಂತಲೂ ಈ ಬಾರಿ ಶೇ. 30ರಿಂದ 40ರಷ್ಟು ಉತ್ಪಾದನೆ ಕಡಿಮೆ ಆಗಲಿದ್ದು, ಬಂಡವಾಳ ಹಾಕಿ ಮಾವು ಬೆಳೆದ ಬೆಳೆಗಾರರು ಚಿಂತಾಕ್ರಾಂತರಾಗಿದ್ದಾರೆ. ಹಂಗಾಮು ಶುರುವಾದಾಗಿನಿಂದಲೂ ಹೂವು ಬಿಡದಿರುವುದರಿಂದ ಪ್ರಮಾಣ ಇಳಿಮುಖವಾಗಲಿದೆ.

ಪ್ರತಿ ಹೆಕ್ಟೆರ್‌ಗೆ ಇಳುವರಿ ಕಡಿಮೆ:
ಜಿಲ್ಲೆಯಲ್ಲಿ 4300 ಹೆಕ್ಟೆರ್‌ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದ್ದು, 40ರಿಂದ 50 ಹೆಕ್ಟರ್‌ ಮಾವಿನ ತೋಟ ಹೆಚ್ಚುತ್ತಿದೆ. ಪ್ರತಿ ಹೆಕ್ಟೆರ್‌ನಲ್ಲಿ ಸರಾಸರಿ 7ರಿಂದ 20 ಟನ್‌ವರೆಗೆ ಉತ್ಪಾದನೆ ಸಿಗುತ್ತದೆ. ಆದರೆ ಈ ಬಾರಿ ಮಾವು ಹೂ ಕಚ್ಚುವಾಗಲೇ ಕಳೆದ ವರ್ಷಕ್ಕಿಂತ ಕಡಿಮೆ ಬಂದಿತ್ತು. ಪ್ರತಿ ವರ್ಷ ನವೆಂಬರ್‌ ಇಲ್ಲವೇ ಡಿಸೆಂಬರ್‌ನಲ್ಲಿ ಮಾವಿನ ಮರಗಳು ಹೂ ಬಿಡಲು ಶುರು ಮಾಡುತ್ತವೆ. ಹೂವುಗಳು ಕಾಯಿಗಳಾಗಿ ಪರಿವರ್ತನೆಯ ಪ್ರಮಾಣ ಅಂದುಕೊಂಡಂತೆ ಆಗಿರಲಿಲ್ಲ. ಜತೆಗೆ ಅಕಾಲಿಕ ಮಳೆ-ಗಾಳಿಯ ಹೊಡೆತಕ್ಕೆ ಕೆಲವು ಕಡೆಗೆ ಕಾಯಿಗಳು ನೆಲಕ್ಕುರುಳಿದ್ದರಿಂದ ಹಾನಿ ಉಂಟಾಗಿದೆ. ಸುಮಾರು ಶೇ. 30ರಿಂದ 40ರಷ್ಟು ಇಳುವರಿ ಕಡಿಮೆ ಬರುವ ಸಾಧ್ಯತೆ ಇದೆ.

ಖಾನಾಪುರ ಅತಿ ತಾಲೂಕಿನಲ್ಲಿ ಅತಿ ಹೆಚ್ಚು 2855 ಹೆಕ್ಟೆರ್‌ ಮಾವು ಬೆಳೆಯಲಾಗುತ್ತದೆ. ಕಿತ್ತೂರಿನಲ್ಲಿ 870 ಹೆಕ್ಟೆರ್‌, ಬೆಳಗಾವಿ
402 ಹೆಕ್ಟರ್‌, ಸವದತ್ತಿ 72, ಬೆ„ಲಹೊಂಗಲ 67 ಹೆಕ್ಟೆರ್‌, ಅಥಣಿ 63 ಹೆಕ್ಟೆರ್‌ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ಈ ಭಾಗದ ಹವಾಮಾನಕ್ಕೆ ಅಲ್ಪಾನ್ಸೋ ಮತ್ತು ಕೇಸರ್‌ ತಳಿಯ ಮಾವು ಉತ್ತಮವಾಗಿ ಬೆಳೆಯುತ್ತವೆ. ಅಲ್ಪಾನ್ಸೋ ತಳಿಯ ಮಾವು ಬಹುತೇಕ ಕಡೆ ಎರಡು ವರ್ಷಕ್ಕೊಮ್ಮೆ ಉತ್ತಮ ಫಸಲು ನೀಡುತ್ತದೆ. ಈ ವರ್ಷ ಉತ್ತಮ ಇಳುವರಿ ಬಂದರೆ ಮುಂದಿನ ವರ್ಷದ ಹಂಗಾಮಿನಲ್ಲಿ ಇಳುವರಿ ಪ್ರಮಾಣ ಕಡಿಮೆ ಆಗುವುದೇ ಈ ತಳಿಯ ಲಕ್ಷಣ ಎನ್ನುತ್ತಾರೆ ತೋಟಗಾರಿಕೆ ಇಲಾಖೆ ಅ ಧಿಕಾರಿಗಳು.

ಮಾವು ಬೆಳೆಯತ್ತ ವಾಲಿದ ರೈತ
ಮಾವಿನ ಹಣ್ಣಿನೊಂದಿಗೆ ಹಸಿ ಮಾವಿನ ಮಾರಾಟವೂ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತದೆ. ಕೆಲ ವರ್ಷಗಳಿಂದ ಮಾಹಾರಾಷ್ಟ್ರ
ಹಾಗೂ ಗೋವಾದಿಂದಲೂ ಮಾವಿನ ಹಣ್ಣುಗಳು ರಫ್ತಾಗುತ್ತಿವೆ. ವಿಶೇಷವಾಗಿ ಖಾನಾಪುರ ತಾಲೂಕಿನಲ್ಲಿ ವನ್ಯಜೀವಿಗಳ ಕಾಟ
ಹೆಚ್ಚಾಗಿದೆ. ಭತ್ತ, ಕಬ್ಬು , ತರಕಾರಿ ಸೇರಿದಂತೆ ಇತರೆ ಬೆಳೆ ನಷ್ಟವಾಗುತ್ತಿವೆ. ಜತೆಗೆ ಬೆಳೆಗೆ ನೀರಿನ ಅಭಾವವೂ ಉಂಟಾಗುತ್ತಿದೆ.

ಹೀಗಾಗಿ ರೈತರು ಮಾವಿನ ತೋಟಗಳತ್ತ ಒಲವು ತೋರುತ್ತಿದ್ದಾರೆ. ಸ್ಥಳೀಯ ಹವಾಮಾನದಲ್ಲಿ ಕೇಸರ್‌ ಮತ್ತು ಅಲಾನ್ಸೊ
ಮಾವಿನ ಇಳುವರಿ ಅಧಿಕವಾಗುತ್ತಿದೆ. ಜತೆಗೆ ಪಾಯರಿ, ಮಲ್ಲಿಕಾ, ತೋತಾಪುರಿ, ಐಶ್ವರ್ಯ, ಮಾಲಗೋವಾ ಸೇರಿದಂತೆ
ಇತರೆ ತಳಿಗಳ ಮಾವು ಇಳುವರಿ ಹೆಚ್ಚಾಗುತ್ತಿದೆ.

ಜಿಲ್ಲೆಯಲ್ಲಿ ಅಲಾ #ನ್ಸೊ ಮಾವಿನ ತಳಿ ಎರಡು ವರ್ಷಕ್ಕೊಮ್ಮೆ ಅಧಿಕ ಇಳುವರಿ ಕೊಡುತ್ತದೆ. ನಂತರದ ವರ್ಷದಲ್ಲಿ ಇಳುವರಿ ಇಳಿಮುಖ ಆಗುವುದು ಈ ತಳಿಯ ಗುಣಲಕ್ಷಣ. ಈ ವರ್ಷ ಶೇ. 30ರಿಂದ 40ರಷ್ಟು ಮಾವು ಇಳುವರಿ ಇಳಿಕೆ ಆಗಲಿದೆ.
ಮಹಾಂತೇಶ ಮುರಗೋಡ,
ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ

ಈ ವಾರದಲ್ಲಿ ಸುರಿದ ಅಕಾಲಿಕ ಗಾಳಿ-ಮಳೆಯಿಂದ ಮಾವು ಬೆಳೆಗೆ ಭಾರೀ ಹಾನಿ ಉಂಟಾಗಿದೆ. ಕಿತ್ತೂರು ಭಾಗದ ಬಹುತೇಕ
ಮಾವಿನ ಕಾಯಿಗಳು ನೆಲಕ್ಕುರುಳಿವೆ. ಇನ್ನೂ ಕೆಲವು ಕಡೆಗೆ ಆಲಿಕಲ್ಲು ಮಳೆಯೂ ಆಗಿದೆ. ಈ ಸಲ ಇಳುವರಿ ಕುಂಠಿತಗೊಂಡು ಆರ್ಥಿಕ ನಷ್ಟ ಆಗಲಿದೆ. ಸರ್ಕಾರ ಈ ಬಗ್ಗೆ ಗಮನಹರಿಸಿ, ಪರಿಹಾರ ನೀಡಬೇಕು.
ಅಲ್ತಾಫ ಜಮಾದಾರ, ಮಾವು ಬೆಳೆಗಾರ

*ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.