Karnataka: ನವೆಂಬರ್ನಲ್ಲಿ ಬೆಳಗಾವಿ ಅಧಿವೇಶನ? – ಸಚಿವ ಸಂಪುಟದಲ್ಲಿ ಇಂದು ಚರ್ಚೆ ಸಾಧ್ಯತೆ
- ವಿದೇಶ ಪ್ರವಾಸದಲ್ಲಿರುವ ಸ್ಪೀಕರ್, ಸಭಾಪತಿ
Team Udayavani, Oct 4, 2023, 10:23 PM IST
ಬೆಂಗಳೂರು: ಒಟ್ಟು 12 ದಿನಗಳ ಕಾಲ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸುವುದಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಗುರುವಾರ ನಡೆಯುವ ಸಚಿವ ಸಂಪುಟ ಸಭೆಯ ಮುಂದೆ ಈ ವಿಚಾರ ಪ್ರಸ್ತಾಪವಾಗುವ ಸಾಧ್ಯತೆಗಳಿವೆ.
ಸದ್ಯಕ್ಕೆ ಸ್ಪೀಕರ್ ಯು.ಟಿ. ಖಾದರ್, ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿದೇಶ ಪ್ರವಾಸದಲ್ಲಿದ್ದು, ಅ.19ರ ನಂತರ ರಾಜ್ಯಕ್ಕೆ ಮರಳಲಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳುವ ಮುನ್ನ ಸರ್ಕಾರದೊಂದಿಗೆ ಅಧಿವೇಶನದ ಬಗ್ಗೆ ಚರ್ಚೆಗಳು ನಡೆದಿದ್ದು, ಎಷ್ಟು ದಿನ, ಎಲ್ಲಿ ಕಲಾಪ ನಡೆಸಬೇಕೆಂಬ ಮೊದಲ ಹಂತದ ಚರ್ಚೆ ನಡೆದಿತ್ತು.
ನವೆಂಬರ್ ಕೊನೇ ವಾರದಲ್ಲಿ ಅಧಿವೇಶನ ಆರಂಭಿಸಿ, ಬೆಂಗಳೂರಿನಲ್ಲಿ 10 ದಿನ ಹಾಗೂ ಬೆಳಗಾವಿಯ ಸುವರ್ಣಸೌಧದಲ್ಲಿ 10 ದಿನ ಕಲಾಪ ನಡೆಸುವ ಬಗ್ಗೆ ಚಿಂತನೆ ನಡೆದಿದ್ದು, ಎರಡು ಕಡೆ ನಡೆಸಬೇಕೇ ಬೇಡವೇ ಎಂಬ ಚರ್ಚೆಗಳಿವೆ. ವರ್ಷದಲ್ಲಿ ಕನಿಷ್ಠ 60 ದಿನ ಕಲಾಪ ನಡೆಸಬೇಕೆನ್ನುವ ಆಶಯದಲ್ಲಿ ಸರ್ಕಾರವಿದೆಯಾದರೂ ಬೆಂಗಳೂರು ಹಾಗೂ ಬೆಳಗಾವಿ ಎರಡೂ ಕಡೆ 20 ದಿನ ನಡೆಸುವುದು ಕಷ್ಟ ಎಂಬುದನ್ನು ಅಧಿಕಾರಿಗಳು ತಿಳಿಸಿದ್ದಾರೆ.
ಎರಡೂ ಕಡೆ ಕಲಾಪ ನಡೆಸುವುದರಿಂದ ಖರ್ಚು ಹೆಚ್ಚಾಗಲಿದೆ. ಇಡೀ ವಿಧಾನಮಂಡಲ ಹಾಗೂ ಸರ್ಕಾರಿ ವ್ಯವಸ್ಥೆಯನ್ನು ಎರಡೂ ಕಡೆ ಬಳಸಿಕೊಳ್ಳುವುದು, ಸ್ಥಳಾಂತರಿಸುವುದು ಸುಲಭವಿಲ್ಲ. ಹೀಗಾಗಿ ಎಲ್ಲಾದರೂ ಒಂದು ಕಡೆ ಮಾಡುವುದು ಸೂಕ್ತ ಮತ್ತು 10-12 ದಿನಗಳಿಗೆ ಇಳಿಸಿದರೆ ಉತ್ತಮ ಎಂಬ ಸಲಹೆಗಳನ್ನು ನೀಡಿದ್ದಾರೆ.
ನವೆಂಬರ್ ಕೊನೆಯ ವಾರದಿಂದ ಡಿಸೆಂಬರ್ ಮೊದಲ ವಾರದವರೆಗೆ ಚಳಿಗಾಲದ ಅಧಿವೇಶನ ನಡೆದರೆ, ಮತ್ತೆ ಜನವರಿ ತಿಂಗಳಲ್ಲಿ ಜಂಟಿ ಅಧಿವೇಶನ, ಫೆಬ್ರವರಿಯಲ್ಲಿ ಬಜೆಟ್ ಅಧಿವೇಶನ ನಡೆಸಬೇಕಾಗುತ್ತದೆ. ಆನಂತರ ಲೋಕಸಭೆ ಚುನಾವಣಾ ತಯಾರಿ ನಡೆಸಬೇಕಿದೆ. ವರ್ಷದ ಕೊನೆಯ ಕಲಾಪವು ನವೆಂಬರ್-ಡಿಸೆಂಬರ್ನಲ್ಲಿ ನಡೆಯುವುದರಿಂದ ಹೆಚ್ಚು ದಿನ ನಡೆಸಬೇಕೆಂಬ ಚಿಂತನೆ ಸರ್ಕಾರದಲ್ಲಿದೆ. ಎರಡೂ ಕಡೆ ಸದನ ನಡೆದರೆ ಅಷ್ಟು ಸುದೀರ್ಘ ದಿನಗಳು ಚರ್ಚಿಸಬಹುದಾದ ವಿಷಯಗಳ ಪಟ್ಟಿಯನ್ನೂ ನೀಡುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.
ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮತ್ತೂಮ್ಮೆ ಚರ್ಚಿಸಿ, ಎಲ್ಲಿ, ಎಷ್ಟು ದಿನ ಕಲಾಪ ನಡೆಸಬೇಕೆಂಬುದು ತೀರ್ಮಾನ ಆಗಬಹುದು. ಇಲ್ಲದಿದ್ದರೆ, ಸ್ಪೀಕರ್, ಸಭಾಪತಿ ವಿದೇಶ ಪ್ರವಾಸದಿಂದ ಮರಳಿದ ನಂತರ ಮತ್ತೂಮ್ಮೆ ಚರ್ಚಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳಬಹುದು ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ