ಸೋಂಕಿತರ ಆರೈಕೆಯಲ್ಲಿದ್ದ ನರ್ಸ್‌ಗೂ ಕೋವಿಡ್ ದೃಢ


Team Udayavani, May 27, 2020, 9:35 AM IST

ಸೋಂಕಿತರ ಆರೈಕೆಯಲ್ಲಿದ್ದ ನರ್ಸ್‌ಗೂ ಕೋವಿಡ್ ದೃಢ

ಬಳ್ಳಾರಿ: ವಲಸೆ ಕಾರ್ಮಿಕರಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದ ಕೋವಿಡ್ ವೈರಸ್‌ ಸೋಂಕು ಜಿಲ್ಲೆಯಲ್ಲಿ ಮೊದಲಬಾರಿಗೆ ನಗರದ ಕೋವಿಡ್‌ ಆಸ್ಪತ್ರೆಯ ಐಸೋಲೇಷನ್‌ ವಾರ್ಡ್‌ನಲ್ಲಿ ಸೋಂಕಿತರನ್ನು ಆರೈಕೆ ಮಾಡುತ್ತಿದ್ದ ಸ್ಟಾಫ್‌ ನರ್ಸ್‌ಗೂ ತಗುಲಿದ್ದು ಆಸ್ಪತ್ರೆ ವೈದ್ಯರು, ನರ್ಸ್‌ಗಳಲ್ಲಿ ಆತಂಕ ಶುರುವಾಗಿದೆ. ನಗರದ ಕೋವಿಡ್‌ (ಜಿಲ್ಲಾ) ಆಸ್ಪತ್ರೆ ಐಸೋಲೇಷನ್‌ ವಾರ್ಡ್‌ನಲ್ಲಿ 14 ದಿನಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಸ್ಟಾಫ್‌ (ಪುರುಷ) ನರ್ಸ್‌ಗೆ ಕೋವಿಡ್‌-19 ಸೋಂಕು ಪತ್ತೆಯಾಗಿದೆ. ಜಿಲ್ಲಾ ಟಾಸ್ಕ್ ಫೋರ್ಸ್‌ ಸಮಿತಿ ನಿರ್ಣಯದ ಪ್ರಕಾರ 14 ದಿನಗಳ ಕಾಲ ಕೆಲಸ ಮುಗಿಸಿದ ಬಳಿಕ ಸ್ಟಾಫ್‌ ನರ್ಸ್‌ ಅವರನ್ನು 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಈ ವೇಳೆ ಸಿಬ್ಬಂದಿಯ ಗಂಟಲು ದ್ರವ, ರಕ್ತದ ಮಾದರಿಯನ್ನು ಪಡೆದು ಕೋವಿಡ್‌ ಟೆಸ್ಟ್‌
ಮಾಡಿದಾಗ ಪಾಸಿಟಿವ್‌ ಬಂದಿದ್ದು, ಸೋಂಕಿತನನ್ನು ಕೂಡಲೇ ಸೋಮವಾರ ರಾತ್ರಿ ಕೋವಿಡ್‌ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಡಿಸಿ ಎಸ್‌.ಎಸ್‌. ನಕುಲ್‌ ಸ್ಪಷ್ಟಪಡಿಸಿದ್ದಾರೆ.

ಮನೆಗೆ ತೆರಳಬೇಕಿದ್ದವನಿಗೆ ಸೋಂಕು ಪತ್ತೆ:
ನಿಯಮದಂತೆ ಸ್ಟಾಫ್‌ ನರ್ಸ್‌ ಕೋವಿಡ್‌ ರೋಗಿಗಳ ಚಿಕಿತ್ಸಾ ಸೇವೆ ನಂತರದ 14 ದಿನಗಳ ಕ್ವಾರಂಟೈನ್‌ ಮುಗಿಸಿ ಸೋಮವಾರ ಮನೆಗೆ ತೆರಳಬೇಕಿತ್ತು. ಮನೆಗೆ ತೆರಳುವ ಮುನ್ನ ಅವರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಆವರಿಸಿರುವುದು ಪತ್ತೆಯಾಗಿದೆ. ಆತನಲ್ಲಿ ಕೋವಿಡ್ ಸೋಂಕು ತಗುಲಿರುವ ಒಂದೇ ಒಂದು ಲಕ್ಷಣ ಇಲ್ಲ ಎನ್ನಲಾಗುತ್ತಿದೆ. ಸದ್ಯ ಸೇವೆ
ಸಲ್ಲಿಸುತ್ತಿದ್ದ ಆಸ್ಪತ್ರೆಯಲ್ಲಿಯೇ ಕೋವಿಡ್‌ ರೋಗಿ ಆಗಿ ಚಿಕಿತ್ಸೆ ಪಡೆಯುವಂತೆ ಆಗಿದೆ. ಇವರೊಂದಿಗೆ 15 ಜನ ನರ್ಸ್‌ ಸೇವೆಯಲ್ಲಿದ್ದರು. ಎಲ್ಲರೂ ಸೇವೆ ಮುಗಿಸಿಕೊಂಡ ನಂತರ ಹೋಟೆಲ್‌ನಲ್ಲಿ ತಂಗುತ್ತಿದ್ದರು.

ಇದೀಗ ಈ ಎಲ್ಲರಿಗೂ ಸೋಂಕಿನ ಭಯ ಆವರಿಸಿದೆ. ಇದರ ಜೊತೆಗೆ ಕೋವಿಡ್‌ ರೋಗಿಗಳ ತಪಾಸಣೆ ನಡೆಸಿದ ವೈದ್ಯರೂ ಸಹ ಸೋಂಕು ತಗುಲುವ ಆತಂಕ್ಕಕ್ಕೀಡಾಗಿದ್ದರೆ.

ಕೋವಿಡ್‌ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ಎಲ್ಲರಿಗೂ ಪಿಪಿಇ ಕಿಟ್‌, ಗ್ಲೌಸ್‌, ಮಾಸ್ಕ್ ನೀಡಲಾಗಿತ್ತು. ಆದರೂ ಸಹ ಸೋಂಕು ತಗುಲಿರುವುದು ಜಿಲ್ಲಾಡಳಿತ, ಕೋವಿಡ್‌ ಆಸ್ಪತ್ರೆ ಸಿಬ್ಬಂದಿ, ವೈದ್ಯರನ್ನು ಚಿಂತೆಗೀಡುಮಾಡಿದೆ. ಸದ್ಯ ಸೋಂಕಿತ ನರ್ಸ್‌ ಜೊತೆಗೆ ಕಾರ್ಯ ನಿರ್ವಹಿಸಿದ್ದ 14 ಜನ ಶುಶ್ರೂಷಕರನ್ನೂ ಕ್ವಾರಂಟೈನ್‌ ನಲ್ಲಿಡಲಾಗಿದ್ದು, ಎಲ್ಲರ ಗಂಟಲು ದ್ರವವನ್ನು ಮತ್ತೂಮ್ಮೆ ಪರೀಕ್ಷೆಗೆ ರವಾನಿಸಲಾಗಿದೆ. ಐಸೋಲೇಷನ್‌ ವಾರ್ಡ್‌ನಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿಗೆ ಪಿಪಿಇ ಕಿಟ್‌ಗಳನ್ನು ನೀಡಲಾಗಿದೆ. ಆದರೂ ಸಿಬ್ಬಂದಿಗೆ ಸೋಂಕು ಆವರಿಸಿರುವುದು ಹೇಗೆ?ಎಂಬ ಪ್ರಶ್ನೆ ಜಿಲ್ಲಾಡಳಿತವನ್ನು ಕಾಡುತ್ತಿದೆ. ಆದರೆ, ಸಿಬ್ಬಂದಿಗೆ
ನೀಡುತ್ತಿದ್ದ ಪಿಪಿಇ ಕಿಟ್‌ಗಳಲ್ಲಿ ಕೆಲವು ಗುಣಮಟ್ಟದಿಂದ ಇಲ್ಲ ಎಂಬ ಆರೋಪ ಆರೋಗ್ಯ ಇಲಾಖೆಯ ಸಿಬ್ಬಂದಿಗಳಲ್ಲಿ ಕೇಳಿಬರುತ್ತಿದೆ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.