Beltangadi: ರೋಗ ಗುಣಪಡಿಸುವುದಾಗಿ ಹೇಳಿ ವಂಚನೆ
Team Udayavani, Feb 2, 2024, 12:37 AM IST
ಬೆಳ್ತಂಗಡಿ: ಮುಂಡಾಜೆ ಗ್ರಾಮದಲ್ಲಿ ಅನಾರೋಗ್ಯ ಪೀಡಿತ ವ್ಯಕ್ತಿಯ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಮಲಗಿದ್ದಲ್ಲಿಯೇ ಇದ್ದ ವ್ಯಕ್ತಿಯನ್ನು ಗುಣಪಡಿಸುವುದಾಗಿ ಹೇಳಿ 30 ಸಾವಿರ ರೂ. ನಗದು ಹಣ ಪಡೆದುಕೊಂಡು ಪರಾರಿಯಾದ ಘಟನೆ ಸಂಭವಿಸಿದೆ.
ಮುಂಡಾಜೆ ಗ್ರಾಮದ ನಿವಾಸಿ ದಯಾನಂದ ವಂಚನೆಗೆ ಒಳಗಾದ ವ್ಯಕ್ತಿ. ಇವರ ತಂದೆ ಕಟ್ಟಡದಿಂದ ಬಿದ್ದು ಸೊಂಟದ ಬಲ ಕಳೆದುಕೊಂಡು ಮಲಗಿದಲ್ಲಿಯೇ ಇದ್ದರು. ಜ. 27ರಂದು ಅವರ ಮನೆಗೆ ಬೈಕಿನಲ್ಲಿ ಬಂದ ಅಪರಿಚಿತರಿಬ್ಬರು ತಾವು ಆಯುರ್ವೇದ ಪಂಡಿತರು. ಪಂಚ ಕರ್ಮ ಆಯುರ್ವೇದ ಔಷಧಿಯಿಂದ ಅವರನ್ನು ಗುಣಪಡಿಸುವುದಾಗಿ ಹೇಳಿದ್ದರು.
ಬಳಿಕ ಚಿಕಿತ್ಸೆಗೆಂದು ಕೆಲವು ವಸ್ತುಗಳನ್ನು ತರಿಸಿಕೊಂಡಿದ್ದಾರೆ. ಇನ್ನಷ್ಟು ಔಷಧಗಳು ತರಬೇಕೆಂದು 30 ಸಾವಿರ ರೂ. ಹಣ ಪಡೆದುಕೊಂಡು ಮೊಬೈಲ್ ನಂಬರ್ ಒಂದನ್ನು ನೀಡಿ ತೆರಳಿದ್ದಾರೆ.
ಆದರೆ ಬಳಿಕ ಅವರನ್ನು ಸಂಪರ್ಕಿಸಲು ಸಾಧ್ಯವಾಗದಿದ್ದಾಗಿ ತಾವು ಮೋಸಗೊಂಡಿದ್ದೇವೆ ಎಂದು ತಿಳಿದು ದಯಾನಂದ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ತಂಡ ಮುಂಡಾಜೆಯ ಕೆಲವು ಮನೆಗಳಿಗೆ ಭೇಟಿ ನೀಡಿದ್ದು ಹಾಗೂ ಕೆಲವರಿಗೆ ಔಷಧ ನೀಡಿ ಹಣ ಪಡೆದಿದ್ದರು ಎನ್ನಲಾಗಿದೆ. ಇವರು ತಾವು ಶಿವಮೊಗ್ಗದಿಂದ ಬಂದವರು ಎಂದು ಪರಿಚಯಿಸಿಕೊಂಡಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪೊಲೀಸರ ತನಿಖೆಯಿಂದಷ್ಟೆ ಇವರ ಹಿನ್ನೆಲೆ ಬಗ್ಗೆ ಮಾಹಿತಿ ತಿಳಿದು ಬರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ