ಬೆಳ್ತಂಗಡಿ: ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಸಿದ್ಧ


Team Udayavani, Mar 25, 2023, 6:30 PM IST

belthangadi

ಬೆಳ್ತಂಗಡಿ: ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಅರಣ್ಯ ಇಲಾಖೆಯು ರಾಜ್ಯದೆಲ್ಲೆಡೆ ಪ್ರತೀ ತಾಲೂಕಿಗೊಂದರಂತೆ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಪರಿಚಯಿಸಿದಂತೆ ತಾಲೂಕಿನ ಕಲ್ಲಗುಡ್ಡೆಯಲ್ಲಿ ನಿರ್ಮಾಣ
ಗೊಂಡಿರುವ ಟ್ರೀ ಪಾರ್ಕ್‌ ಉದ್ಘಾಟನೆಗೆ ಸಿದ್ಧಗೊಂಡಿದೆ. ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಮೇಲಂತಬೆಟ್ಟು ಹಾಗೂ ಲಾೖಲ ಗ್ರಾಮದ ಗಡಿಯಲ್ಲಿರುವ ಕಲ್ಲಗುಡ್ಡೆ ಪ್ರದೇಶದಲ್ಲಿ ಸುಮಾರು 25 ಎಕ್ರೆ ಸ್ಥಳಾವಕಾಶದಲ್ಲಿ ಉದ್ಯಾನ ಸಿದ್ಧವಾಗಿದೆ.

ರಮಾನಾಥ ರೈ ಅರಣ್ಯ ಸಚಿವರಾಗಿದ್ದ ಅವಧಿಯಲ್ಲಿ ಕಾರ್ಯರೂಪಕ್ಕೆ ಬಂದಿದ್ದ ಈ ಯೋಜನೆಗೆ 2018ರಿಂದ ಕಾಮಗಾರಿ ಆರಂಭಗೊಂಡಿತ್ತು. ಟ್ರೀ ಪಾರ್ಕ್‌ ಎಂದರೆ ಕೇವಲ ವೃಕ್ಷ ರಾಶಿ ಮಾತ್ರವಿರದೆ ಅದು ಮಕ್ಕಳು, ಹಿರಿಯರು ಸಹಿತ ಪ್ರತಿಯೊಬ್ಬರಿಗೂ ಅನುಕೂಲವಾಗಬೇಕೆಂಬ ನೆಲೆಯಲ್ಲಿ ಶಾಸಕ ಹರೀಶ್‌ ಪೂಂಜ ಅವರು ಆಕರ್ಷಕ ಕೇಂದ್ರವಾಗಿ ವಿನ್ಯಾಸ ಗೊಳಿಸಲು ಮುಂದಾಗಿ ಯೋಜನೆ ಸಿದ್ಧವಾಗಿದೆ. 2.65 ಕೋ. ರೂ. ಅನುದಾನ ಅರಣ್ಯ ಇಲಾಖೆಯಿಂದ ಈ ವರೆಗೆ ಸುಮಾರು 1.3 ಕೋ.ರೂ. ಸಹಿತ ಇತರ ಅನುದಾನ ಸೇರಿ 2.65 ಕೋ. ರೂ. ವೆಚ್ಚದಲ್ಲಿ ಮುಖ್ಯ ದ್ವಾರ, ವಾಕಿಂಗ್‌ ಟ್ರಾಕ್‌, ಮಕ್ಕಳ ಆಟದ ಸ್ಥಳ, ಶೌಚಾಲಯ, ಕುಡಿಯುವ ನೀರು, ಆಟದ ಮೈದಾನ, ಬಯಲು ವನರಂಗ ಸಹಿತ 10 ಹೆಕ್ಟೇರ್‌ ಪ್ರದೇಶದಲ್ಲಿ 2,000 ಹಣ್ಣಿನ ಮತ್ತು ಇತರ ಗಿಡಗಳು, ಅರಣ್ಯ ರಕ್ಷಕ ಉಳಿದುಕೊಳ್ಳುವ ಕೊಠಡಿ ಸೇರಿದಂತೆ ಅವಶ್ಯಕತೆಗಳನ್ನು ಪೂರೈಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಸಿಸಿ ಟಿವಿ ಅಳವಡಿಸಲಾಗಿದೆ.

ಇಂದು ಲೋಕಾರ್ಪಣೆ 

ಉದ್ಯಾನವನ್ನು ಮಾ. 25ರಂದು ಸಂಜೆ 5 ಕ್ಕೆ ಶಾಸಕ ಹರೀಶ್‌ ಪೂಂಜ ಉದ್ಘಾಟಿಸಲಿರುವರು. ವಿ.ಪ. ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್‌, ಕೆ.ಹರೀಶ್‌ ಕುಮಾರ್‌, ಪ.ಪಂ. ಅಧ್ಯಕ್ಷೆ ರಜನಿ  ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್‌ ಎಂ.ಆರ್‌., ಜಿ.ಪಂ. ಸಿಇಒ ಡಾ| ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ವಿಕ್ರಂ ಅಮಟೆ, ಮಂಗಳೂರು ಅರಣ್ಯ ಸಂರಕ್ಷಣಾಧಿಕಾರಿ ಡಾ| ವಿ.ಕರಿಕಾಳನ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ.ಕೆ. ದಿನೇಶ್‌ ಕುಮಾರ್‌, ಸಹಾಯಕ ಅ.ಸಂ.ಪಿ.ಶ್ರೀಧರ್‌, ಬೆಳ್ತಂಗಡಿ ವ.ಅ. ತ್ಯಾಗರಾಜ್‌ ಎಚ್‌.ಎಸ್‌. ಸಹಿತ ಪ್ರಮುಖರು ಭಾಗವಹಿಸುವರು.

ಟಾಪ್ ನ್ಯೂಸ್

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

police crime

Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sulya-padavu

Sulliapadavu: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

ಉಪ್ಪುಕಳ: ಸೇತುವೆ ಶೀಘ್ರ ಸಂಚಾರಕ್ಕೆ ಮುಕ್ತ

ಉಪ್ಪುಕಳ: ಸೇತುವೆ ಶೀಘ್ರ ಸಂಚಾರಕ್ಕೆ ಮುಕ್ತ

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ