ಬೆಳ್ತಂಗಡಿ: ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಸಿದ್ಧ


Team Udayavani, Mar 25, 2023, 6:30 PM IST

belthangadi

ಬೆಳ್ತಂಗಡಿ: ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಅರಣ್ಯ ಇಲಾಖೆಯು ರಾಜ್ಯದೆಲ್ಲೆಡೆ ಪ್ರತೀ ತಾಲೂಕಿಗೊಂದರಂತೆ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಪರಿಚಯಿಸಿದಂತೆ ತಾಲೂಕಿನ ಕಲ್ಲಗುಡ್ಡೆಯಲ್ಲಿ ನಿರ್ಮಾಣ
ಗೊಂಡಿರುವ ಟ್ರೀ ಪಾರ್ಕ್‌ ಉದ್ಘಾಟನೆಗೆ ಸಿದ್ಧಗೊಂಡಿದೆ. ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಮೇಲಂತಬೆಟ್ಟು ಹಾಗೂ ಲಾೖಲ ಗ್ರಾಮದ ಗಡಿಯಲ್ಲಿರುವ ಕಲ್ಲಗುಡ್ಡೆ ಪ್ರದೇಶದಲ್ಲಿ ಸುಮಾರು 25 ಎಕ್ರೆ ಸ್ಥಳಾವಕಾಶದಲ್ಲಿ ಉದ್ಯಾನ ಸಿದ್ಧವಾಗಿದೆ.

ರಮಾನಾಥ ರೈ ಅರಣ್ಯ ಸಚಿವರಾಗಿದ್ದ ಅವಧಿಯಲ್ಲಿ ಕಾರ್ಯರೂಪಕ್ಕೆ ಬಂದಿದ್ದ ಈ ಯೋಜನೆಗೆ 2018ರಿಂದ ಕಾಮಗಾರಿ ಆರಂಭಗೊಂಡಿತ್ತು. ಟ್ರೀ ಪಾರ್ಕ್‌ ಎಂದರೆ ಕೇವಲ ವೃಕ್ಷ ರಾಶಿ ಮಾತ್ರವಿರದೆ ಅದು ಮಕ್ಕಳು, ಹಿರಿಯರು ಸಹಿತ ಪ್ರತಿಯೊಬ್ಬರಿಗೂ ಅನುಕೂಲವಾಗಬೇಕೆಂಬ ನೆಲೆಯಲ್ಲಿ ಶಾಸಕ ಹರೀಶ್‌ ಪೂಂಜ ಅವರು ಆಕರ್ಷಕ ಕೇಂದ್ರವಾಗಿ ವಿನ್ಯಾಸ ಗೊಳಿಸಲು ಮುಂದಾಗಿ ಯೋಜನೆ ಸಿದ್ಧವಾಗಿದೆ. 2.65 ಕೋ. ರೂ. ಅನುದಾನ ಅರಣ್ಯ ಇಲಾಖೆಯಿಂದ ಈ ವರೆಗೆ ಸುಮಾರು 1.3 ಕೋ.ರೂ. ಸಹಿತ ಇತರ ಅನುದಾನ ಸೇರಿ 2.65 ಕೋ. ರೂ. ವೆಚ್ಚದಲ್ಲಿ ಮುಖ್ಯ ದ್ವಾರ, ವಾಕಿಂಗ್‌ ಟ್ರಾಕ್‌, ಮಕ್ಕಳ ಆಟದ ಸ್ಥಳ, ಶೌಚಾಲಯ, ಕುಡಿಯುವ ನೀರು, ಆಟದ ಮೈದಾನ, ಬಯಲು ವನರಂಗ ಸಹಿತ 10 ಹೆಕ್ಟೇರ್‌ ಪ್ರದೇಶದಲ್ಲಿ 2,000 ಹಣ್ಣಿನ ಮತ್ತು ಇತರ ಗಿಡಗಳು, ಅರಣ್ಯ ರಕ್ಷಕ ಉಳಿದುಕೊಳ್ಳುವ ಕೊಠಡಿ ಸೇರಿದಂತೆ ಅವಶ್ಯಕತೆಗಳನ್ನು ಪೂರೈಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಸಿಸಿ ಟಿವಿ ಅಳವಡಿಸಲಾಗಿದೆ.

ಇಂದು ಲೋಕಾರ್ಪಣೆ 

ಉದ್ಯಾನವನ್ನು ಮಾ. 25ರಂದು ಸಂಜೆ 5 ಕ್ಕೆ ಶಾಸಕ ಹರೀಶ್‌ ಪೂಂಜ ಉದ್ಘಾಟಿಸಲಿರುವರು. ವಿ.ಪ. ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್‌, ಕೆ.ಹರೀಶ್‌ ಕುಮಾರ್‌, ಪ.ಪಂ. ಅಧ್ಯಕ್ಷೆ ರಜನಿ  ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್‌ ಎಂ.ಆರ್‌., ಜಿ.ಪಂ. ಸಿಇಒ ಡಾ| ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ವಿಕ್ರಂ ಅಮಟೆ, ಮಂಗಳೂರು ಅರಣ್ಯ ಸಂರಕ್ಷಣಾಧಿಕಾರಿ ಡಾ| ವಿ.ಕರಿಕಾಳನ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ.ಕೆ. ದಿನೇಶ್‌ ಕುಮಾರ್‌, ಸಹಾಯಕ ಅ.ಸಂ.ಪಿ.ಶ್ರೀಧರ್‌, ಬೆಳ್ತಂಗಡಿ ವ.ಅ. ತ್ಯಾಗರಾಜ್‌ ಎಚ್‌.ಎಸ್‌. ಸಹಿತ ಪ್ರಮುಖರು ಭಾಗವಹಿಸುವರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.