ಬೆಳ್ತಂಗಡಿ: ಬೀದಿ ವ್ಯಾಪಾರಕ್ಕೆ ಪ್ರತ್ಯೇಕ ವಲಯ

ನಗರ ಕೇಂದ್ರಿತ ಮಾದರಿ ; ಆತ್ಮ ನಿರ್ಭರ ಸಾಲ ಯೋಜನೆ

Team Udayavani, Jul 4, 2020, 6:30 AM IST

ಬೆಳ್ತಂಗಡಿ: ಬೀದಿ ವ್ಯಾಪಾರಕ್ಕೆ ಪ್ರತ್ಯೇಕ ವಲಯ

ವಿಶೇಷ ವರದಿ-ಬೆಳ್ತಂಗಡಿ: ಪಟ್ಟಣ ಪಂಚಾಯತ್‌ ವ್ಯಾಪ್ತಿಯಡಿ ಬರುವ ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲ ವಾಗುವಂತೆ ನಗರ ವ್ಯಾಪ್ತಿಯಲ್ಲಿ ಮಾರಾಟ ಕೇಂದ್ರಿತ ಮೂರು ವಲಯಗಳನ್ನು ಗುರುತಿಸಲಾಗಿದೆ. ಆ ಮೂಲಕ ದಶಕಗಳಿಂದ ಕಗ್ಗಂಟಾಗಿ ಉಳಿದಿದ್ದ ಬೀದಿಬದಿ ವ್ಯಾಪಾರಸ್ಥರ ಸಮಸ್ಯೆಗೆ ಪಂ.ಪಂ. ಮುಕ್ತಿ ನೀಡಿದೆ.

ತನ್ನ ವ್ಯಾಪ್ತಿಗೊಳಪಟ್ಟಂತೆ ನೆಲ ಬಾಡಿಗೆ ನೀಡುತ್ತಿರುವ ಹಾಗೂ ಅನಧಿಕೃತವಾಗಿರುವ 51 ಬೀದಿಬದಿ ಗೂಡಂಗಡಿಗಳನ್ನು ಪ.ಪಂ. ಗುರುತಿಸಿತ್ತು. ಕಳೆದ ಎಪ್ರಿಲ್‌- ಮೇ ತಿಂಗಳ ಲಾಕ್‌ಡೌನ್‌ ಅವಧಿಯಲ್ಲಿ ಹಣ್ಣು ಹಂಪಲು, ತರಕಾರಿ ಮಾರಾಟ ಅಂಗಡಿಗಳ ಹೊರತಾಗಿ ಇತರ ಎಲ್ಲ ಗೂಡಂಗಡಿಗಳನ್ನು ತೆರವುಗೊಳಿಸಿರುವ ವಿಚಾರವಾಗಿ ಮಾಜಿ ಶಾಸಕ ವಸಂತ ಬಂಗೇರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತ್ತು.

ಮೂರು ಝೋನ್‌ ಗುರುತು
ಈ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ಬೇಡಿಕೆ ಬಂದ ಸಲುವಾಗಿ ಪ.ಪಂ. ವ್ಯಾಪ್ತಿಗೊಳಪಟ್ಟಂತೆ ವಲಯ ನಿರ್ಮಾಣ ಮಾಡಲಾಗಿದೆ. ಈ ಮಧ್ಯೆ ಚರ್ಚ್‌ ಅಡ್ಡ ರಸ್ತೆಯಿಂದ ಎಸ್‌ಸಿಡಿಸಿಸಿ ಬ್ಯಾಂಕ್‌ವರೆಗಿನ ಮುಖ್ಯರಸ್ತೆ ಅಂಚಿನಲ್ಲಿ ಅಂಗಡಿ ತೆರೆಯಲು ಅವಕಾಶ ಇರುವುದರಿಲ್ಲ. ಪರಿಣಾಮ ಬದಲಿ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಮೂರು ಝೋನ್‌ಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ಅಂಬೇಡ್ಕರ್‌ ಭವನ ರಸ್ತೆ, ಗುರುನಾರಾಯಣ ವಾಣಿಜ್ಯ ಸಂಕೀರ್ಣ ಹಿಂಭಾಗ ಹಾಗೂ ಬಾರತ್‌ ಟಾಕೀಸ್‌ ಸಂತೆಕಟ್ಟೆ ಸಮೀಪ ಪ್ರತಿ ವ್ಯಾಪಾರಸ್ಥರಿಗೆ 6×6 ಅಳತೆಯ ಸ್ಥಳ ನೀಡಲಾಗಿದೆ. ಉಳಿದಂತೆ ಈಗಾಗಲೇ ಸ್ಥಳ ಬಾಡಿಗೆಯಲ್ಲಿರುವ 6 ಗೂಡಂಗಡಿ ಸೇರಿ ಪ್ರಸಕ್ತ ಒಟ್ಟು 33 ಅಂಗಡಿಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ತರಕಾರಿ, ಜ್ಯೂಸ್‌, ತಿಂಡಿ ತಿನಸು, ಫಾಸ್ಟ್‌ಫುಡ್‌, ತಳ್ಳುಗಾಡಿಗಳು ಸೇರಿವೆ.

ಮುಂಜಾನೆಯಿಂದ ರಾತ್ರಿವರೆಗೆ ಅವಕಾಶ
ಮಳೆಗಾಲವಾದ್ದರಿಂದ ಸದ್ಯ ಶೀಟ್‌ ಅಳವಡಿಕೆಗೆ ಅವಕಾಶ ನೀಡಲಾಗಿದ್ದು, ಬೆಳಗ್ಗಿನಿಂದ ರಾತ್ರಿ ನಿಗದಿತ ಸಮಯದವರೆಗಷ್ಟೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ಮೊಬೈಲ್‌ ವಾಹನಗಳು ಹಾಗೂ ತಳ್ಳುಗಾಡಿಗಳನ್ನು ಬಳಸುವಂತೆಯೂ ಪ.ಪಂ. ವತಿಯಿಂದ ವ್ಯಾಪಾರಿಗಳಿಗೆ ಸೂಚನೆ ನೀಡಲಾಗಿದೆ. ಕೆಲ ಸೀಸನ್‌ ಅವಧಿಯಲ್ಲಿ ಮಾರಾಟ ಮಾಡುವ ಅಂಗಡಿಗಳು ಒಳ ರಸ್ತೆಗಳಲ್ಲಷ್ಟೆ ಮಾರಾಟಕ್ಕೆ ಅವಕಾಶವಿರಲಿದೆ.

10 ಸಾವಿರ ರೂ. ಸಾಲ ಸೌಲಭ್ಯ
ಸರಕಾರದ ಆತ್ಮನಿರ್ಭರ ಯೋಜನೆಯಡಿ ಪ.ಪಂ. ವತಿಯಿಂದ ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರ ಆರಂಭಿಸಲು ಬ್ಯಾಂಕ್‌ ಮೂಲಕ 10 ಸಾವಿರ ರೂಪಾಯಿ ಸಾಲ ಒದಗಿಸಲು ಚಿಂತನೆ ನಡೆಸಿದೆ. ಇದನ್ನು 950 ರೂಪಾಯಿಯ ಸಮಾನ ಮಾಸಿಕ ಕಂತುಗಳ ರೂಪದಲ್ಲಿ 12 ತಿಂಗಳಲ್ಲಿ ಬಡ್ಡಿ ಸಹಿತ ಮರುಪಾವತಿಸಬೇಕಾಗಿದೆ. ಒಟ್ಟು ಮೊತ್ತದಲ್ಲಿ 150 ರೂ. ಮನ್ನಾ ಆಗಲಿದೆ. ಜತೆಗೆ ದಿನವಹಿ 50 ಡಿಜಿಟಲ್‌ ವ್ಯವಹಾರ ಮಾಡಿದರೆ ಹೆಚ್ಚುವರಿ ಮಾಸಿಕ ರಿಯಾಯಿತಿಯೂ ಇದೆ. ಪ್ರಸಕ್ತ ಪ.ಪಂ. ಗುರುತಿಸಿದ ವ್ಯಾಪಾರಿಗಳಿಗಷ್ಟೆ ಅನ್ವಯವಾಗಲಿದೆ.

ಸ್ಥಳ ಗುರುತು
ಪಟ್ಟಣ ಪಂಚಾಯತ್‌ ವ್ಯಾಪ್ತಿ ಯಲ್ಲಿ ಅನಧಿಕೃತ ಗೂಡಂಗಡಿಗಳಿಗೆ ಕಡಿವಾಣ ಹಾಕುವ ಸಲುವಾಗಿ ಈ ಕ್ರಮ ವಹಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ನಗರ ಕೇಂದ್ರಿತ ಪ್ರದೇಶಗಳಂತೆ ಝೋನ್‌ ನಿಗದಿಪಡಿಸಿ ಸ್ಥಳ ಗುರುತಿಸಲಾಗಿದೆ.
– ಸುಧಾಕರ್‌ ಎಂ.ಎಚ್‌.
ಮುಖ್ಯಾಧಿಕಾರಿ, ಪಟ್ಟಣ ಪಂಚಾಯತ್‌

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.