Muskmelon Fruit: ಕರ್ಬೂಜ ಹಣ್ಣು ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ಉಪಯೋಗವಿದೆ…


Team Udayavani, Apr 11, 2023, 5:40 PM IST

muskmelon

ಕಲ್ಲಂಗಡಿಯಂತೆಯೇ ಹೆಚ್ಚಿನ ನೀರಿನಾಂಶವನ್ನು ಹೊಂದಿರುವ ಹಣ್ಣು ಕರ್ಬೂಜ . ಹೊರಗಿನಿಂದ ಬೂದು, ಹಸಿರು ಮಿಶ್ರಿತ ಸಿಪ್ಪೆ ಹಾಗೂ ಕಿತ್ತಳೆ ಬಣ್ಣದ ತಿರುಳಿನೊಂದಿಗೆ ಕೂಡಿರುತ್ತದೆ.

ಬೇಸಿಗೆಯ ನಿರ್ಜಲೀಕರಣ ದೂರ ಮಾಡುವ ವಿಶೇಷ ಗುಣ ಈ ಹಣ್ಣು ಹೊಂದಿದೆ. ಈ ಹಣ್ಣಿನಲ್ಲಿ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 6, ಪೊಟ್ಯಾಶಿಯಂ, ಬೀಟಾ ಕ್ಯಾರೋಟೀನ್, ಕಬ್ಬಿಣ, ಮ್ಯಾಂಗನೀಸ್, ಫೋಲಿಕ್  ಆಮ್ಲ  ಮತ್ತು ಅಧಿಕ ನಾರಿನಂಶ ಹಾಗೂ ಇತರ ಪ್ರಮುಖ ಪೋಷಕಾಂಶಗಳನ್ನು ಹೊಂದಿದೆ.

ಈ ಹಣ್ಣಿನಲ್ಲಿ ಪೋಷಕಾಂಶಗಳು ಹೆಚ್ಚಿದ್ದರೂ ಕ್ಯಾಲೋರಿಯು ಕಡಿಮೆ ಇರುವ ಕಾರಣದಿಂದಾಗಿ ಕೊಬ್ಬಿನಾಂಶ ಹೆಚ್ಚಿಸದೆ ದೇಹಕ್ಕೆ ಹೆಚ್ಚಿನ ಶಕ್ತಿಯನ್ನು ಒದಗಿಸುತ್ತದೆ. ಇದರ ಸೇವನೆಯಿಂದ ಅನೇಕ ಪ್ರಯೋಜನಗಳಿವೆ.

ಕಿಡ್ನಿ ಸಮಸ್ಯೆ ನಿವಾರಣೆ:

ಮೂತ್ರ ಕೋಶದಲ್ಲಿ ಕಲ್ಲಿರುವವರು ಈ ಹಣ್ಣಿನ ರಸ ಕುಡಿಯಬೇಕು. ಮಲಬದ್ದಿತೆ ಇರುವವರು ಈ ಹಣ್ಣನ್ನು ಸೇವಿಸುವುದು ಒಳ್ಳೆಯದು. ಈ ಹಣ್ಣಿನ ಬೀಜದ ತಿರುಳು ಮೂತ್ರಪಿಂಡ ಮತ್ತು ಯಕೃತ್ತಿನ ತೊಂದರೆಗಳ ನಿವಾರಣೆಗೆ ಉಪಯುಕ್ತ. ದೀರ್ಘಕಾಲದಲ್ಲಿ ಜ್ವರದ ನಿವಾರಣೆಗೂ ಇದು ಉಪಯುಕ್ತ. ಕಿಡ್ನಿ ಸಮಸ್ಯೆ ಇರುವವರಿಗೆ ಈ ಹಣ್ಣು ಅತ್ಯುತ್ತಮ ಮೂತ್ರವರ್ಧಕ ಶಕ್ತಿ ಹೊಂದಿದೆ. ಹಾಗಾಗಿ ಇದು ಮೂತ್ರಕೋಶದ ಸಂಬಂಧಿ ಕಾಯಿಲೆ ಮತ್ತು ಇತರ ಅಪಾಯಕಾರಿ ಕಾಯಿಲೆ ಬರದಂತೆ ತಡೆಯುತ್ತವೆ. ನಿಂಬೆಹಣ್ಣಿನ ಜೊತೆಗೆ ಕರ್ಬೂಜ ಹಣ್ಣನ್ನು ಸೇವಿಸುವುದರಿಂದ ಸಂಧಿವಾತ ಗುಣಪಡಿಸಬಹುದು.

ಕ್ಯಾನ್ಸರ್ ರೋಗ ತಡೆಗಟ್ಟಲು:

ಕ್ಯಾನ್ಸರ್ ಬರುವುದರಿಂದ ರಕ್ಷಣೆ ಒದಗಿಸುತ್ತದೆ. ಇದರಲ್ಲಿರುವ ವಿಟಮಿನ್ ಸಿ ಹಾಗೂ ಬೀಟಾ ಕ್ಯಾರೋಟೀನ್ ಎಂಬ ಆಂಟಿ ಆಕ್ಸಿಡೆಂಟ್ ಹೊಂದಿದೆ. ಇದು ದೇಹದಲ್ಲಿ ಕ್ಯಾನ್ಸರ್ ಉಂಟುಮಾಡಬಹುದಾದ ಫ್ರೀ ರ್‍ಯಾಡಿಕಲ್ ಎಂಬ ಕಣಗಳನ್ನು ಹಿಮ್ಮೆಟ್ಟಿಸುವ ಕ್ಷಮತೆ ಹೊಂದಿದ್ದು, ಈ ಮೂಲಕ ದೇಹದ ಜೀವಕೋಶಗಳಿಗೆ ಈ ಕಣಗಳು ಹಾನಿ ಮಾಡುವುದರಿಂದ ರಕ್ಷಿಸುತ್ತದೆ. ಈ ಹಾನಿ ಮುಂದುವರೆದರೆ ಕ್ಯಾನ್ಸರ್ ಗೂ ತಿರುಗಬಹುದು. ಈ ಮೂಲಕ ಕರ್ಬೂಜದ ಹಣ್ಣು ಕ್ಯಾನ್ಸರ್ ಬರುವುದರಿಂದಲೂ ರಕ್ಷಣೆ ಒದಗಿಸುತ್ತದೆ.

ಮಧುಮೇಹ ಸಮಸ್ಯೆ:

ಮಧುಮೇಹ ರೋಗಿಗಳಿಗೆ ಕರ್ಬೂಜ ಹಣ್ಣಿನ ಜ್ಯೂಸ್ ಪೂರಕ ಆಹಾರ.‌ ವೈದ್ಯರು  ಮಧುಮೇಹಿಗಳಿಗೆ ಸ್ವಲ್ಪ ಕಹಿಯಾದ ಕರ್ಬೂಜ ಹಣ್ಣಿನ ರಸವನ್ನು ತೆಗೆದುಕೊಳ್ಳಲು ಸೂಚಿಸುತ್ತಾರೆ. ಏಕೆಂದರೆ ಇದು ಮಧುಮೇಹಿಗಳ ದೇಹದಲ್ಲಿರುವ ಸಕ್ಕರೆಯಂಶವನ್ನು ಕಡಿಮೆ ಮಾಡಲು ಸಹಕರಿಸುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಳ:

ಈ ಹಣ್ಣು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆ ಹೊಂದಿದ್ದು ಇದಕ್ಕೆ ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಪ್ರಮುಖ ಕಾರಣ. ಈ ಹಣ್ಣಿನ ಸೇವನೆಯಿಂದ ದೇಹದಲ್ಲಿ ಹೆಚ್ಚಿನ ಪ್ರಮಾಣದ ಬಿಳಿರಕ್ತಕಣಗಳನ್ನು ಉತ್ಪತ್ತಿಸಲು ಸಾಧ್ಯವಾಗುತ್ತದೆ.

ಜೀರ್ಣಶಕ್ತಿಗೆ ಸಹಕಾರಿ:

ಕರ್ಬೂಜ ಜಠರದಲ್ಲಿ ಪಚನ ಕ್ರಿಯೆಯನ್ನು ಉದ್ದೀಪಿಸುತ್ತದೆ. ಜೀರ್ಣಕ್ರಿಯೆಯಲ್ಲಿ ಏನಾದರು ತೊಂದರೆ ಇದ್ದಲ್ಲಿ ಕರ್ಬೂಜ ಹಣ್ಣು ಸೇವಿಸಬೇಕು . ಆಗ ಜೀರ್ಣಕ್ರಿಯೆ ಸರಾಗವಾಗುತ್ತದೆ. ಕರ್ಬೂಜದಲ್ಲಿರುವ ನೀರಿನಂಶ ಜೀರ್ಣಕ್ರಿಯೆಗೆ ನೆರವು ನೀಡುತ್ತದೆ. ಇದರಲ್ಲಿರುವ ಖನಿಜಾಂಶವು ದೇಹದಲ್ಲಿನ, ಅದರಲ್ಲೂ ಮುಖ್ಯವಾಗಿ ಜಠರದಲ್ಲಿ ಜೀರ್ಣಕ್ರಿಯೆಗೆ ತಡೆಯೊಡ್ಡುವ ಆಮ್ಲೀಯತೆ (ಅಸಿಡಿಟಿ) ಯನ್ನು ನಿವಾರಿಸುತ್ತದೆ. ಊಟದ ನಂತರ ಈ ಹಣ್ಣನ್ನು ಸೇವಿಸುವುದರಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.

ಗರ್ಭಿಣಿಯರಿಗೆ ಉತ್ತಮ:

ಗರ್ಭಾವಸ್ಥೆಯಲ್ಲಿ ಗರ್ಭಿಣಿಯ ದೇಹಕ್ಕೆ ಹೆಚ್ಚಿನ ಪ್ರಮಾಣದ ಫೋಲಿಕ್ ಆಮ್ಲದ ಅಗತ್ಯವಿರುತ್ತದೆ. ಈ ಹಣ್ಣಿನಲ್ಲಿ ಫೋಲಿಕ್ ಆಮ್ಲ ಉತ್ತಮ ಪ್ರಮಾಣದಲ್ಲಿದ್ದು ಗರ್ಭಿಣಿಯ ದೇಹಕ್ಕೆ ಅಗತ್ಯ ಪೋಷಣೆ ಒದಗಿಸಲು ಸಹಾಯ ಮಾಡುತ್ತದೆ. ಗರ್ಭಿಣಿಯಾಗಬಯಸುವ ಮಹಿಳೆಯರಲ್ಲಿ ಒಂದು ವೇಳೆ ಗರ್ಭನಾಳದ ತೊಂದರೆ ಇದ್ದು ಗರ್ಭ ನಿಲ್ಲದೇ ಇದ್ದರೆ ಈ ಹಣ್ಣಿನ ಸೇವನೆಯಿಂದ ಗರ್ಭ ನಿಲ್ಲುವ ಸಾಧ್ಯತೆ ಹೆಚ್ಚುತ್ತದೆ. ಬಾಣಂತಿಯರು ಈ ಹಣ್ಣನ್ನು ಸೇವಿಸಿದರೆ. ಎದೆಹಾಲಿನ ಉತ್ಪತ್ತಿ ಕೂಡಾ ಹೆಚ್ಚಿಸಲು ಉತ್ತಮ ಆಹಾರ.

ಸೌಂದರ್ಯಕ್ಕೆ ಸಹಕಾರಿ:

ಒಂದು ಮಧ್ಯಮ ಗಾತ್ರದ ಖರ್ಬೂಜದ ಹಣ್ಣಿನ ಕಾಲುಭಾಗದ ತಿರುಳು, ಮೂರು ಸ್ಟ್ರಾಬೆರಿ ಹಣ್ಣು, ಒಂದು ದೊಡ್ಡ ಚಮಚ ಓಟ್ಸ್, ಸ್ವಲ್ಪ  ಜೇನುತುಪ್ಪ ಸೇರಿಸಿ ಚೆನ್ನಾಗಿ ಬೆರೆಸಿ ಲೇಪನ ತಯಾರಿಸಿಕೊಳ್ಳಿ. ಈ ಲೇಪನವನ್ನು ಮುಖ, ಕುತ್ತಿಗೆ, ಕೈ ಕಾಲುಗಳಿಗೆ ಹಚ್ಚಿ ಸುಮಾರು ಹದಿನೈದು ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆದುಕೊಳ್ಳಿ. ಈ ಲೇಪನದ ಮೂಲಕ ಚರ್ಮ ಪೋಷಕಾಂಶಗಳನ್ನು ಪಡೆದು ಕೋಮಲತೆ ಮತ್ತು ಕಾಂತಿ ಪಡೆಯುತ್ತದೆ.

ಕಣ್ಣಿನ ಆರೋಗ್ಯಕ್ಕೆ :

ಉತ್ತಮ ದೃಷ್ಟಿ ಕಾಪಾಡಿಕೊಳ್ಳಲು  ಬೀಟಾ ಕೆರೋಟಿನ್ ಎಂಬ ಅಂಶ ಈ ಹನ್ಣಿನಲ್ಲಿದೆ. ಈ ಬೀಟಾ ಕೆರೊಟಿನ್ ಗಳು ವಿಟಮಿನ್ ಎ ಆಗಿ ಮಾರ್ಪಾಡಾಗಿ ಕಣ್ಣಿನ ಪೊರೆ ಮತ್ತು ದೃಷ್ಟಿ ಸುಧಾರಿಸುವಲ್ಲಿ  ಸಹಾಯ ಮಾಡುತ್ತದೆ. ಉತ್ತಮ ವಿಟಮಿನ್ ಹೊಂದಿರುವ ಆಹಾರಗಳನ್ನು ಸೇವಿಸುವುದರಿಂದ ಶೇಕಡಾ 40 ರಷ್ಟು ಕಣ್ಣಿನ ಪೊರೆಯ ಅಪಾಯ ತಡೆಗಟ್ಟಬಹುದು ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಈ ಹಣ್ಣಿನಲ್ಲಿ ವಿಟಮಿನ್ ‘ಎ’ ಅಧಿಕವಿರುವುದರಿಂದ ಮಕ್ಕಳಲ್ಲಿ ರಾತ್ರಿ ಕುರುಡಿನ ಪ್ರಾರಂಭಿಕ ಲಕ್ಷಣಗಳು ಕಂಡಕೂಡಲೇ ಈ ಹಣ್ಣನ್ನು ಅಧಿಕವಾಗಿ ಸೇವಿಸಲು ಕೂಡಬೇಕು.

*ಕಾವ್ಯಶ್ರೀ

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.