ಬೆಂಗಳೂರು ಗಲಭೆಗೆ ಒಂದು ವರ್ಷ

ಕಾಡುಗೊಂಡನಹಳ್ಳಿ ಮತ್ತು ದೇವರ ಜೀವನಹಳ್ಳಿಯಲ್ಲಿ ನಡೆದಿದ್ದ ದುರ್ಘ‌ಟನೆ

Team Udayavani, Aug 12, 2021, 2:09 PM IST

ಬೆಂಗಳೂರು ಗಲಭೆಗೆ ಒಂದು ವರ್ಷ

ಬೆಂಗಳೂರು: ನಗರದ ಇತಿಹಾಸದಲ್ಲೇ ಕಾಡುಗೊಂಡನ ಹಳ್ಳಿ ಮತ್ತು ದೇವರ ಜೀವನಹಳ್ಳಿ ಗಲಭೆ ಪ್ರಕರಣ ಅಚ್ಚಳಿ‌ಯದೆ ಉಳಿದುಕೊಂಡಿದೆ. ಈ ದುರ್ಘ‌ಟನೆಗೆ ಆ.11ಕ್ಕೆ ಒಂದು ವರ್ಷ.

ಅನ್ಯಧರ್ಮದ ಗುರುಗಳ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ ಆರೋಪದ ಮೇಲೆ ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರ ಅಳಿಯ ನವೀನ್‌ ವಿರುದ್ಧ ಆ.11ರ ರಾತ್ರಿ ದೂರು ದಾಖಲು ನೀಡುವ ನೆಪದಲ್ಲಿಕೆ.ಜಿ.ಹಳ್ಳಿಮತ್ತುಡಿ.ಜೆ.ಹಳ್ಳಿ
ಠಾಣೆಗಳಿಗೆ ಬಂದ ಕೆಲವರು ಒಳಗಡೆ ನುಗ್ಗಿ ದಾಂಧಲೆ ನಡೆಸಿದರು. ಅಲ್ಲದೆ, ಎರಡು ಠಾಣೆಗಳ ಮೇಲೆ ಬೆಂಕಿ ಹಾಕಿದರು. ಅದೇ ವೇಳೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ಸೋದರ ಅಳಿಯ ನವೀನ್‌ ಮನೆ,ಕಚೇರಿಗಳ ಮೇಲು ದಾಳಿ ನಡೆಸಿ ಬೆಂಕಿ ಹಾಕಿದ್ದರು. ಜತೆಗೆ ರಸ್ತೆ ಪಕ್ಕದಲ್ಲಿ ನಿಂತಿದ್ದ ವಾಹನಗಳಿಗೂ ಬೆಂಕಿ ಹಚ್ಚಿದ್ದರು.

ಈ ಸಂಬಂಧ ಸ್ಥಳೀಯರ ಪೊಲೀಸರು ‌ 400ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದರು. ಅನಂತರ ಎನ್‌ಐಎ ತನಿಖೆಕೈಗೊಂಡು 250ಕ್ಕೂ ಅಧಿಕ ಮಂದಿ ಯನ್ನು ಬಂಧಿಸಿತ್ತು. ಜತೆಗೆ ಎಸ್‌ಡಿಪಿಐ ಸಂಘಟನೆ ಕಚೇರಿಗಳ ಮೇಲೆ ದಾಳಿ ನಡೆಸಿ,ಕೆಲ ಸದಸ್ಯರನ್ನು ಬಂಧಿಸಿತ್ತು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ನಮ್ಮ ಮನೆಗೆ ಹಾಗೂ‌ ಪೊಲೀಸ್‌ ಠಾಣೆಗಳಿಗೆ ಬೆಂಕಿ ಇಟ್ಟು ಒಂದು ವರ್ಷ ಅಗಿದೆ. ನಡೆಯಬಾರದ ಘಟನೆ ಅಂದು ನಡೆದು ಹೋಗಿತ್ತು. ಈ ವಿಚಾರದಲ್ಲಿ ತೀವ್ರ ನೋವು ಅನುಭವಿಸಿದ್ದೇನೆ ಘಟನೆಯಲ್ಲಿ ಭಾಗಿಯಾದ ಆರೋಪಿಗಳ ಬಂಧನಕ್ಕೆ ಸಂಬಂಧಿಸುವ ಮೂಲಕ ನ್ಯಾಯ ಸಿಕ್ಕಿದೆ . ಇನ್ನು
ಸಂಪೂರ್ಣ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇನೆ. ಆದರೆ ನಮ್ಮ ಪಕ್ಷದಿಂದ ಇದುವರೆಗೂ ನ್ಯಾಯ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ:ಸಾಕು ನಾಯಿ ಪ್ರವೇಶಕ್ಕೆ ಬಿಬಿಎಂಪಿ ಷರತ್ತು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರಿಗೆ ಮನವಿ ಮಾಡಲಾಗಿದೆ. ಆರೋಪಿ ಸ್ಥಾನಲ್ಲಿರುವ ಮಾಜಿ ಮೇಯರ್‌ ಸಂಪತ್‌ ರಾಜ್‌ ಅವರನ್ನು ಪಕ್ಷದಿಂ‌ದ ಉಚ್ಚಾಟಿಸುವಂತೆ ಮನವಿ ಮಾಡಿದ್ದೇನೆ ಎಂದರು.ಗಲಭೆ ಪ್ರಕರಣದಲ್ಲಿ ಭಾಗಿಯಾಗಿರುವ ಸಂಪತ್‌ ರಾಜ್‌,ಮಾಜಿ ಕಾರ್ಪೋರೇಟರ್‌ ಜಾಕಿರ್‌ ಹುಸೇನ್‌, ಸಂಪತ್‌ ರಾಜ್‌ ಆಪ್ತ ಅರುಣ್‌ ರಾಜ್‌ಗೆ ಹೈಕೋರ್ಟ್‌
ನೀಡಿರುವ ‌ ಜಾಮೀನು ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕಲಾಗಿದೆ. ಅದೇ ತಿಂಗಳು 23ಕ್ಕೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಇನ್ನು ನನಗೆ ಸಂಪೂರ್ಣ ನ್ಯಾಯ ಸಿಕ್ಕಿಲ್ಲ. ಪಕ್ಷದಿಂದ ನ್ಯಾಯಾ ಸಿಗಬೇಕಿದೆ ಎಂದರು.

ಠಾಣೆ ನವೀಕರಣ ಕೆಲಸ ಆಗಿಲ್ಲ
ಕಿಡಿಗೇಡಿಗಳಿಂದ ಹಾಳಾಗಿದ್ದ ಡಿ.ಜೆ.ಹಳ್ಳಿ ಪೊಲೀಸ್‌ ಠಾಣೆಯನ್ನು ನವೀಕರಿಸುವುದಾಗಿ ಸರ್ಕಾರ ಭರವಸೆ ನೀಡಿ ವರ್ಷ ಕಳೆದರೂ ಠಾಣೆಯಲ್ಲಿ
ಯಾವುದೇ ರೀತಿಯಲ್ಲಿ ನವೀಕರಣ ಕೆಲಸ ಆಗಿಲ್ಲ. ಅದಕ್ಕೆ ಅನುದಾನ ಸರ್ಕಾರ ಅನುದಾನ ಬಿಡುಗಡೆಯಾಗಿಲ್ಲ ಎಂದು ಹೇಳಲಾಗುತ್ತಿದೆ. ಘಟನೆಗೆ ಸಾಕ್ಷಿ ಎಂಬಂತೆ ಪಾರ್ಕಿಂಗ್‌ ಕಾರಿಡಾರ್‌ ಗೋಡೆ ಹಾಗೂ ಠಾಣೆಯ ಮೊದಲ ಮಹಡಿಯ ಗೋಡೆಗಳೆಲ್ಲ ಇನ್ನೂಕಪ್ಪಾಗಿಯೆ ಇವೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.