ರಾಜ್ಯದ 4 ಹುಲಿ ಸಂರಕ್ಷಿತ ಅರಣ್ಯಗಳಿಗೆ ಅತ್ಯುತ್ತಮ ರ್‍ಯಾಂಕ್‌


Team Udayavani, Aug 5, 2019, 3:07 AM IST

rajyada

ಚಾಮರಾಜನಗರ: ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆ ನಡೆಸಿದ ದೇಶದ ಹುಲಿ ಸಂರಕ್ಷಿತ ಅರಣ್ಯಗಳ ಪರಿಣಾಮಕಾರಿ ನಿರ್ವಹಣಾ ಮೌಲ್ಯಮಾಪನದಲ್ಲಿ ರಾಜ್ಯದ ನಾಲ್ಕು ಹುಲಿ ಸಂರಕ್ಷಿತ ಅರಣ್ಯಗಳು ಅತ್ಯುತ್ತಮ ರ್‍ಯಾಂಕ್‌ ಗಳಿಸಿದರೆ, ಒಂದು ಅರಣ್ಯ ಉತ್ತಮ ರ್‍ಯಾಂಕ್‌ ಪಡೆದಿದೆ.

ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ಹಾಗೂ ಭಾರತೀಯ ವನ್ಯಜೀವಿ ಸಂಸ್ಥೆಯ ಸಹಯೋಗದಲ್ಲಿ ನಾಲ್ಕನೇ ಸಾಲಿನ ಮೌಲ್ಯಮಾಪನ ನಡೆಸಿತ್ತು. ಈ ಮೌಲ್ಯಮಾಪನ 2006 ರಿಂದ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುತ್ತದೆ. ಇದರಲ್ಲಿ ಹುಲಿ ಸಂರಕ್ಷಿತ ಅರಣ್ಯಗಳಲ್ಲಿ ಹುಲಿಗಳ ಸಂರಕ್ಷಣೆಗಾಗಿ ಕೈಗೊಂಡಿರುವ ಕ್ರಮಗಳನ್ನು ಮೌಲ್ಯಮಾಪನ ಮಾಡಲಾಗುತ್ತದೆ. ನಾಲ್ಕನೇ ಸುತ್ತಿನಲ್ಲಿ ನಡೆದ (2018) ದೇಶದ 50 ಹುಲಿ ಸಂರಕ್ಷಿತ ಅರಣ್ಯಗಳನ್ನು ಮೌಲ್ಯಮಾಪನ ಮಾಡಲಾಗಿದೆ.

ಮೌಲ್ಯಮಾಪನದಲ್ಲಿ ಶೇ.40ಕ್ಕಿಂತ ಕಡಿಮೆ ಅಂಕ ಪಡೆದ ಅರಣ್ಯಗಳಿಗೆ ಕಳಪೆ, ಶೇ.41 ರಿಂದ 59 ರವರೆಗೆ ಅಂಕಗಳನ್ನು ಪಡೆದವು ಸಾಧಾರಣ, ಶೇ.60 ರಿಂದ 74 ಅಂಕಗಳನ್ನು ಪಡೆದವು ಉತ್ತಮ, ಶೇ.75ಕ್ಕಿಂತ ಹೆಚ್ಚು ಅಂಕ ಪಡೆದ ಅರಣ್ಯಗಳನ್ನು ಅತ್ಯುತ್ತಮ ಎಂದು ಪರಿಗಣಿಸಿ ಗ್ರೇಡ್‌ ನೀಡಲಾಗಿದೆ. ಗ್ರೇಡ್‌ಗಳಲ್ಲಿ, ಕರ್ನಾಟಕದ ಒಟ್ಟು 5 ಹುಲಿ ರಕ್ಷಿತ ಅರಣ್ಯಗಳಲ್ಲಿ 4 ಅರಣ್ಯಗಳು ಅತ್ಯುತ್ತಮ ಗ್ರೇಡ್‌ ಪಡೆದಿದ್ದರೆ, ಒಂದು ಅರಣ್ಯ ಉತ್ತಮ ಗ್ರೇಡ್‌ ಪಡೆದಿದೆ. ಬಂಡೀಪುರ, ನಾಗರಹೊಳೆ, ಭದ್ರಾ, ಅಣಶಿ (ದಾಂಡೇಲಿ) ಅತ್ಯುನ್ನತ ದರ್ಜೆ ಪಡೆದಿದ್ದರೆ, ಬಿಳಿಗಿರಿ ರಂಗನಾಥ ಅರಣ್ಯ (ಬಿಆರ್‌ಟಿ) ಉತ್ತಮ ದರ್ಜೆ ಪಡೆದಿದೆ.

ಜಿಲ್ಲೆಯ ಬಂಡೀಪುರ ಹುಲಿ ರಕ್ಷಿತ ಅರಣ್ಯ ಶೇ.87.50ರಷ್ಟು ಅಂಕಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಜಿಲ್ಲೆಯ ಇನ್ನೊಂದು ಹುಲಿ ಸಂರಕ್ಷಿತ ಅರಣ್ಯ ಬಿಆರ್‌ಟಿ ಶೇ.74.22ರಷ್ಟು ಅಂಕಗಳನ್ನು ಪಡೆಯುವ ಮೂಲಕ ರಾಜ್ಯದ ಹುಲಿ ಅರಣ್ಯಗಳ ಪೈಕಿ ಕೊನೆಯ ಸ್ಥಾನದಲ್ಲಿದೆ. ಅಣಶಿ (ದಾಂಡೇಲಿ) ಶೇ.84.38 ಅಂಕಗಳನ್ನು ಗಳಿಸಿ ಎರಡನೇ ಸ್ಥಾನ, ನಾಗರಹೊಳೆ ಶೇ.81.25 ಅಂಕ ಗಳಿಸಿ ಮೂರನೇ ಸ್ಥಾನ, ಭದ್ರಾ ಅರಣ್ಯ ಶೇ.75 ಅಂಕಗಳ ಮೂಲಕ ನಾಲ್ಕನೇ ಸ್ಥಾನ ಗಳಿಸಿವೆ.

4ನೇ ಕ್ಲಸ್ಟರ್‌ನಲ್ಲಿತ್ತು ಕರ್ನಾಟಕ: ಮೌಲ್ಯಮಾಪನದ ಅನುಕೂಲಕ್ಕಾಗಿ ದೇಶದಲ್ಲಿ 5 ವಿಭಾಗಗಳನ್ನು ಮಾಡಲಾಗಿತ್ತು. 4ನೇ ವಿಭಾಗ (ಕ್ಲಸ್ಟರ್‌)ದಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳ ಒಟ್ಟು 11 ಹುಲಿ ರಕ್ಷಿತ ಅರಣ್ಯಗಳಿದ್ದವು. ಈ ಎಲ್ಲ 11 ಹುಲಿ ರಕ್ಷಿತ ಅರಣ್ಯಗಳಲ್ಲಿ 10 ಅರಣ್ಯಗಳು ಅತ್ಯುತ್ತಮ ದರ್ಜೆಯ ಅಂಕ ಗಳಿಸಿವೆ. ಉತ್ತಮ ದರ್ಜೆಯಲ್ಲಿರುವುದು ಕರ್ನಾಟಕದ ಬಿಳಿಗಿರಿ ರಂಗನಾಥಸ್ವಾಮಿ ಅರಣ್ಯ ಮಾತ್ರ. (ಶೇ.74.22). ಇಂದು ವೇಳೆ, ಶೇ.75 ಅಂಕಗಳನ್ನು ಗಳಿಸಿದ್ದರೆ ಈ ಅರಣ್ಯವೂ ಅತ್ಯುತ್ತಮ ದರ್ಜೆಗೆ ಪಾತ್ರವಾಗುತ್ತಿತ್ತು. ಕೇವಲ 0.88 ಅಂಕದ ಮೂಲಕ ಅತ್ಯುನ್ನತ ದರ್ಜೆ ತಪ್ಪಿಸಿಕೊಂಡಿದೆ.

ಕೇರಳದ ಪೆರಿಯಾರ್‌ ಅರಣ್ಯ ಶೇ.93.75 ಅಂಕಗಳನ್ನು ಗಳಿಸುವ ಮೂಲಕ 4ನೇ ವಿಭಾಗದಲ್ಲಿ ಮೊದಲ ಸ್ಥಾನದಲ್ಲಿದೆ. ತಮಿಳುನಾಡಿನ ಅಣ್ಣಾಮಲೈ ಅರಣ್ಯ ಶೇ.89.06 ಅಂಕಗಳ ಮೂಲಕ 4ನೇ ವಿಭಾಗದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕದ ಬಂಡೀಪುರ ಅರಣ್ಯ ಶೇ.87.50 ಅಂಕಗಳ ಮೂಲಕ ಮೂರನೇ ಸ್ಥಾನದಲ್ಲಿದೆ. ವಿಪರ್ಯಾಸವೆಂದರೆ, ಬಂಡೀಪುರಕ್ಕೆ ಹೊಂದಿಕೊಂಡಂತೆಯೇ ಇರುವ ತಮಿಳುನಾಡಿನ ಮುದುಮಲೈ ಅರಣ್ಯ ಶೇ.75.78 ಅಂಕಗಳ ಮೂಲಕ 4ನೇ ವಿಭಾಗದಲ್ಲಿ 9ನೇ ಸ್ಥಾನದಲ್ಲಿದೆ.

ಮೌಲ್ಯಮಾಪನಕ್ಕಾಗಿ ದೇಶದ ಒಟ್ಟು ಹುಲಿ ಅರಣ್ಯಗಳನ್ನು ಐದು ಕ್ಲಸ್ಟರ್‌ (ವಿಭಾಗ)ಗಳಾಗಿ ವಿಂಗಡಿಸಲಾಗಿತ್ತು. ಪ್ರತಿ ಕ್ಲಸ್ಟರ್‌ಗಳಿಗೂ ಒಂದು ತಂಡ ಮೌಲ್ಯಮಾಪನ ನಡೆಸಿತ್ತು. ಕರ್ನಾಟಕ, ಕೇರಳ, ತಮಿಳುನಾಡು ಹುಲಿ ಅರಣ್ಯಗಳನ್ನು ನಾಲ್ಕನೇ ಕ್ಲಸ್ಟರ್‌ನಲ್ಲಿ ಸೇರಿಸಲಾಗಿತ್ತು. ಈ ಕ್ಲಸ್ಟರ್‌ನ ತಂಡದ ಮುಖ್ಯಸ್ಥರಾಗಿ ಒರಿಸ್ಸಾ ರಾಜ್ಯದ ನಿವೃತ್ತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಕೆ. ಪಟ್ನಾಯಕ್‌ ಇದ್ದರು. ಸದಸ್ಯರಾಗಿ ಭಾರತೀಯ ವನ್ಯಜೀವಿ
ಟ್ರಸ್ಟ್‌ನ ಉಪ ನಿರ್ದೇಶಕ ಡಾ.ರತೀನ್‌ ಬರ್ಮನ್‌, ಭಾರತೀಯ ವನ್ಯಜೀವಿ ಸಂಸ್ಥೆಯ ವಿಜ್ಞಾನಿಗಳಾದ ಡಾ.ಸೋನಾಲಿ, ಸಾಲ್ವಡೋರ್‌ ಲಿಂಗ್ಡೋ ಇದ್ದರು.

* ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.