ಚುನಾವಣೆಯಲ್ಲಿ ಜಯಪ್ರಕಾಶ್ ನಾಯ್ಡುಗೆ ತಕ್ಕಪಾಠ ಕಲಿಸಿದ್ದೇವೆ : ಅಮರೇಶ್


Team Udayavani, Apr 4, 2022, 12:28 PM IST

ಚುನಾವಣೆಯಲ್ಲಿ ಜಯಪ್ರಕಾಶ್ ನಾಯ್ಡುಗೆ ತಕ್ಕಪಾಠ ಕಲಿಸಿದ್ದೇವೆ : ಅಮರೇಶ್

ಬೇತಮಂಗಲ : ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡದೆ ಗುಂಪುಗಾರಿಕೆಯನ್ನು ತಡೆಯದೆ, ಪ್ರತಿ ಚುನಾವಣೆಯಲ್ಲೂ ಒಳ ಒಪ್ಪಂದಗಳನ್ನು ಮಾಡಿಕೊಂಡು ಪಕ್ಷದ್ರೋಹ ಮಾಡುತ್ತಿರುವ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಜಯಪ್ರಕಾಶ್ ನಾಯ್ಡುಗೆ ಈ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಾಗಿದೆ ಎಂದು ಮುಖಂಡ ಭಟ್ರಕುಪ್ಪ ಅಮರೇಶ್ ಟಾಂಗ್ ನೀಡಿದರು.

ಪಟ್ಟಣದ ಬಸ್ ನಿಲ್ಧಾಣದಲ್ಲಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಆಯ್ಕೆಯಾದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿ ಮಾತನಾಡಿದರು.

ತಾಲೂಕಿನಲ್ಲಿ ಗುಂಪುಗಾರಿಕೆ ಇರೋದು ಪಕ್ಷದ ಹೈಕಮಾಂಡ್ ವರೆಗೂ ಗೊತ್ತಿದೆ. ಜಯಪ್ರಕಾಶ್ ಅಧ್ಯಕ್ಷರಾದ ಮೇಲೆ ಇವೆಲ್ಲವನ್ನು ಸರಿ ಮಾಡದೆ, ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆಂದು ಗಂಭೀರ ಆರೋಪ ಮಾಡಿದರು.

ಮಾಜಿ ಶಾಸಕ ವೈ.ಸಂಪಂಗಿ ನೇತೃತ್ವದಲ್ಲಿ 10 ಸ್ಥಾನಗಳಿಗೆ ಪಕ್ಷದ ಕಾರ್ಯಕರ್ತರ ಗೆಲುವಿಗೆ ಬುನಾದಿ ಹಾಕಿದ್ದರು. ಆದರೆ ಜಯಪ್ರಕಾಶ್ ನಾಯ್ಡು ಕಾಂಗ್ರೆಸ್ ಜತೆ ಒಪ್ಪಂದ ಮಾಡಿಕೊಂಡು ಹಿನಾಯವಾಗಿ ಸೋಲು ಕಂಡಿದ್ದಾರೆ. ಇದಕ್ಕೆಲ್ಲ ಕಾರಣ ನಿಷ್ಠಾವಂತ, ಮೂಲ ಬಿಜೆಪಿಗರನ್ನು ಕಡೆಗಣಿಸಿ ಏಕಪಕ್ಷಿಯ ನಿರ್ಧಾರಗಳನ್ನು ಕೈಗೊಂಡು ಒಳ ಒಪ್ಪಂದಗಳನ್ನು ಮಾಡಿಕೊಂಡಿರುವುದು ಎಂದು ದೂರಿದರು.

ಇದನ್ನೂ ಓದಿ : ಕುಣಿಗಲ್ : ಪರೀಕ್ಷೆಗೆ ತೆರಳಲು ತ್ರಿಬಲ್ ರೈಡ್: ಬೈಕ್ ಅಪಘಾತವಾಗಿ SSLC ವಿದ್ಯಾರ್ಥಿ ಸಾವು

ಪ್ರಪ್ರಥಮವಾಗಿ ಕೆಜಿಎಫ್ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆಯಲ್ಲಿ 13 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲವು ಸಾಧಿಸಿದ್ದು, ಇತಿಹಾಸ ಸೃಷ್ಠಿಯಾಗಿದೆ ಎಂದರು. ಎಲ್ಲಾ ನೂತನ ನಿರ್ದೇಶಕರಿಗೆ ಶುಭ ಹಾರೈಸಿದರು. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಹೈಕಮಾಂಡ್ ಭಿ.ಪಾರಂ ನೀಡುವ ಅಭ್ಯರ್ಥಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದರು.

ನೂತನ ನಿರ್ದೇಶಕ ಪ್ರವೀಣ್ ಕುಮಾರ್ ಮಾತನಾಡಿ, ಕೆಜಿಎಫ್ ಕ್ಷೇತ್ರದಲ್ಲಿ ಬಿಜೆಪಿ ಬಲಿಷ್ಠವಾಗಿದೆ. ಇದನ್ನು ಚದುರಿಸಲು ಯಾರಿಂದ ಸಾಧ್ಯವಿಲ್ಲ, ಪ್ರಥಮ ಬಾರಿಗೆ ಸಹಕಾರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಇದು ಇತಿಹಾಸ ಪುಟಗಳಲ್ಲಿ ಸೇರಲಿದೆ. ಮುಂದಿನ ದಿನಗಳಲ್ಲಿಯೂ ಸಹ ಬಿಜೆಪಿ ಹಿಡಿತ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್-ಬಿಜೆಪಿಗೆ ಮುಖಭಂಗ: ವೈ.ಸಂಪಂಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಸೋಲಿಸಲು ಬಿ.ಟೀಂ ಬಿಜೆಪಿ ಪಕ್ಷದ ಅಧ್ಯಕ್ಷರು, ಕೆಲವು ಮುಖಂಡರು, ಕಾಂಗ್ರೆಸ್ ಶಾಸಕಿ ಎಂ.ರೂಪಕಲಾ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಗೋವಿಂದಗೌಡ ಪಣತೊಟ್ಟಿದ್ದರು ಆದರೆ ಮತದಾರ ಪ್ರಭುಗಳು ತಕ್ಕ ಶಾಸ್ತಿ ಮಾಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಾಗಲಿದೆ ಎಂದರು. ಕಾಂಗ್ರೆಸ್ ಮುಲುಗುವ ದೋಣಿಯಾಗಿದೆ. ಬಿಜೆಪಿ ಬಲಿಷ್ಠವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಗಂಗಾವತಿ ಪೊಲೀಸರ ಭರ್ಜರಿ ಬೇಟೆ : 6 ತಿಂಗಳಲ್ಲಿ 33 ಬೈಕ್ ಕದ್ದ ಆರೋಪಿಯ ಬಂಧನ

ಹೈಕೆಮಾಂಡ್ ಸೂಚನೆಯಂತೆ ವೈ.ಸಂಪಂಗಿ ನಡೆದುಕೊಂಡಿಲ್ಲ:ಜಯಪ್ರಕಾಶ್
ಟಿಎಪಿಎಂಸಿಎಸ್ ನಿರ್ದೇಶಕರ 10 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ತಲಾ 5 ಸ್ಥಾನಗಳನ್ನು ಹಂಚಿಕೊಳ್ಳಲು ಹೈಕೆಮಾಂಡ್ ತಮಗೆ ಹಾಗೂ ವೈ.ಸಂಪಂಗಿ ಅವರಿಗೆ ಸೂಚನೆ ನೀಡಿತ್ತು ಆದರೆ ವೈ.ಸಂಪಂಗಿ ಹೈಕೆಮಾಂಡ್ ಆದೇಶಕ್ಕೆ ಕ್ಯಾರೆ ಅನ್ನದೆ 10 ಮಂದಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದರು. ಇದರಿಂದ ನಿಷ್ಠಾವಂತ ಕಾರ್ಯಕರ್ತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಈ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದೆ ಎಂದು ಕೆಜಿಎಫ್ ಗ್ರಾಮಾಂತರ ಮಂಡಲ ಅಧ್ಯಕ್ಷ ಜಯಪ್ರಕಾಶ್ ನಾಯ್ಡು ಉದಯವಾಣಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಪಿ.ಎನ್ ಪುರುಷೋತ್ತಮ್, ಮಂಜುನಾಥ, ಪ್ರವೀಣ್, ಗ್ರಾಪಂ ಅಧ್ಯಕ್ಷ ಸುನೀಲ್, ಮಾಜಿ ಅಧ್ಯಕ್ಷ ಹುಲ್ಕೂರು ಶ್ರೀನಿವಾಸ್, ಮುರಳಿ ಮೋಹನ್, ಹಿರಿಯ ಮುಖಂಡರಾದ ಡೇರಿ ವೆಂಕಟೇಶ್, ವಿಜಿ ಕುಮಾರ್, ಗ್ರಾಪಂ ಸದಸ್ಯ ಪ್ರಸಾದ್, ನಾರಾಯಣಸ್ವಾಮಿ, ಮಾರಸಂದ್ರ ಬಾಬು, ಧನುಷ್ ನಾಯ್ಡು, ವಿಜಯ್ ಭಾಸ್ಕರ್, ಶ್ರೀಪತಿ ಹಾಗೂ ಪಕ್ಷದ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.