ವೀಳ್ಯದೆಲೆಗೆ ಚಿನ್ನದ ಬೆಲೆ

ಒಂದು ಕಟ್ಟಿಗೆ 180-200 ರೂ. ವರೆಗೆ ಮಾರಾಟ | ಅತಿವೃಷ್ಟಿ-ಮೂಡಗಾಳಿಗೆ ಬೆಳೆ ಹಾನಿ

Team Udayavani, Feb 7, 2023, 11:57 AM IST

betel nut

ಹಾವೇರಿ: ಧಾರ್ಮಿಕ ಕಾರ್ಯಕ್ರಮಗಳು, ಪೂಜೆ, ಮದುವೆ, ಮತ್ತಿತರ ಶುಭ ಸಮಾರಂಭಗಳಲ್ಲಿ ಅಗ್ರಸ್ಥಾನ ಪಡೆದಿರುವ ವೀಳ್ಯದೆಲೆ, ಎಲೆ-ಅಡಕೆ ಪ್ರಿಯರಿಗಂತೂ ವೀಳ್ಯದೆಲೆ ಜತೆಗಿರಲೇಬೇಕು. ಆದರೆ, ಇದೀಗ ವೀಳ್ಯದೆಲೆಗೆ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ ಬಂದಿದ್ದು, ಗ್ರಾಹಕರ ಕೈ ಕಚ್ಚುತ್ತಿದೆ.

ಹೌದು, ಕಳೆದ 15 ದಿನದಿಂದ ಜಿಲ್ಲೆಯ ಮಾರುಕಟ್ಟೆಯಲ್ಲಿ ವೀಳ್ಯದೆಲೆಯ ಬೆಲೆ ಬರೋಬ್ಬರಿ ಮೂರು ಪಟ್ಟು ಹೆಚ್ಚಳ ಕಂಡಿದ್ದು, ಬಲೆ ಏರಿಕೆಯ ತಾಪ ಇದೀಗ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ. ಒಂದು ಕಟ್ಟಿನ ವೀಳ್ಯದೆಲೆ ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ 40-50 ರೂ.ಗೆ ಮಾರಾಟವಾಗುತ್ತದೆ. ಬೇಸಿಗೆ ಬಂದರೆ ಅಬ್ಟಾಬ್ಟಾ ಅಂದರೂ 60-80ರೂ. ಒಳಗೆ ಮಾರಾಟ ಆಗಿರುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಆದರೀಗ, ಮಾರುಟ್ಟೆಯಲ್ಲಿ ವೀಳ್ಯದೆಲೆಗೆ ಬಂಗಾರದ ಬೆಲೆ ಬಂದಿದ್ದು, ಗ್ರಾಹಕರು ವೀಳ್ಯದೆಲೆಯ ದರ ಕೇಳಿ ತಬ್ಬಿಬ್ಬುಗೊಳ್ಳುವಂತಾಗಿದೆ.

ಬೆಲೆ ಏರಿಕೆಗೆ ಕಂಗಾಲಾದ ಗ್ರಾಹಕ:

ಸದ್ಯ ಮಾರುಕಟ್ಟೆಯಲ್ಲಿ ವೀಳ್ಯದೆಲೆಗೆ ಚಿನ್ನದ ಬೆಲೆ ಬಂದಿದ್ದು, ಒಂದು ಕಟ್ಟಿಗೆ (100 ಎಲೆ) ಬರೋಬ್ಬರಿ 180-200 ರೂ.ವರೆಗೂ ಮಾರಾಟವಾಗುತ್ತಿದೆ. ಈ ಬೆಲೆ ಏರಿಕೆಗೆ ಗ್ರಾಹಕರು ಕಂಗಾಲಾಗಿ ಹೋಗಿದ್ದಾರೆ. ಔಷಧ ಗುಣವುಳ್ಳ ವೀಳ್ಯದೆಲೆಯನ್ನು ಹೆಚ್ಚಾಗಿ ಬಳಕೆ ಮಾಡುವುದನ್ನು ನಾವು ನೋಡಿದ್ದೇವೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಮಹಿಳೆಯರು ಅಡಕೆಯೊಂದಿಗೆ ವೀಳ್ಯದೆಲೆ ಬೆರೆಸಿಕೊಂಡು ಜಗಿದರೆ, ಅತ್ತ ನಗರ ಪ್ರದೇಶದಲ್ಲಿ ಪಾನ್‌ ಮಸಾಲಾ ಪ್ರಿಯರು ತಂಬಾಕು ಉತ್ಪನ್ನಗಳ ಜೊತೆಗೆ ವೀಳ್ಯದೆಲೆ ಬಳಸಿಕೊಂಡು ಜಗಿಯುತ್ತಾರೆ. ಧಾರ್ಮಿಕ ಪೂಜಾ ಕಾರ್ಯಕ್ರಮಗಳಿಂದ ಹಿಡಿದು ದೊಡ್ಡದೊಡ್ಡ ಹಬ್ಬ ಹರಿದಿನಗಳು ಬಂದರೆ ಅಥವಾ ಮದುವೆ, ನಾಮಕರಣ, ಆರತಕ್ಷತೆ ಸೇರಿದಂತೆ ಶುಭ ಸಮಾರಂಭಗಳಲ್ಲಿ ವೀಳ್ಯದೆಲೆ ಖಾಯಂ ಸ್ಥಾನ ಪಡೆದಿದೆ. ಇಂತಹ ವೀಳ್ಯದೆಲೆಗೆ ಈಗ ಬಂಗಾರದ ಬೆಲೆ ಬಂದಿದ್ದು, ಬೆಲೆ ಏರಿಕೆ ಪರಿ ನೋಡಿ ಗ್ರಾಹಕರು ಗಾಬರಿಗೊಳ್ಳುವಂತಾಗಿದೆ. ಈಗಾಗಲೇ ಮಾರುಟ್ಟೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರ ನಡುವೆ ಈಗ ಬೆಲೆ ಏರಿಕೆ ಸರದಿ ವೀಳ್ಯದೆಲೆಯದ್ದಾಗಿದ್ದು, ಎಲೆ-ಅಡಕೆ ಹಾಕಿಕೊಳ್ಳುವವರ ಬಾಯಿ ಸುಡುವಂತೆ ಬೆಲೆ ದುಪ್ಪಟ್ಟಾಗಿದೆ.

ಮಾರುಕಟ್ಟೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ವೀಳ್ಯದೆಲೆ ಪೂರೈಕೆಯಾಗುತ್ತಿಲ್ಲ. ಮಳೆಗಾಲದಲ್ಲಿ 10-12 ಬಂಡಲ್‌ ವೀಳ್ಯದೆಲೆ ಪೂರೈಕೆಯಾಗುತ್ತಿತ್ತು. ಆದರೆ ಈಗ, 2-3 ಬಂಡಲ್‌ ಅಷ್ಟೇ ಪೂರೈಕೆಯಾಗುತ್ತಿದೆ. ಮೂಢಗಾಳಿ ಹಿನ್ನೆಲೆಯಲ್ಲಿ ಎಲೆಬಳ್ಳಿ ತೋಟಗಳಲ್ಲೂ ಇಳುವರಿ ಕುಂಠಿತಗೊಂಡಿದ್ದು, ಸದ್ಯ ಒಂದು ಕಟ್ಟಿಗೆ (100 ಎಲೆ) 180-200ರೂ. ಮಾರಾಟ ಮಾಡಲಾಗುತ್ತಿದೆ.
-ಶಫೀಕ್‌ ಅಹ್ಮದ್‌ ಮುಲ್ಲಾ, ವೀಳ್ಯದೆಲೆ ವ್ಯಾಪಾರಸ್ಥರು

ಕಳೆದ ವರ್ಷ ಸುರಿದ ಅಕಾಲಿಕ ಮಳೆ ಹಾಗೂ ಅತಿವೃಷ್ಟಿಯಿಂದಾಗಿ ಎಲೆಬಳ್ಳಿ ತೋಟಗಳು ನೆಲಕಚ್ಚಿವೆ. ಅಲ್ಲದೇ, ಅಧಿ ಕ ತೇವಾಂಶದಿಂದಾಗಿ ಎಲೆಬಳ್ಳಿ ವಿವಿಧ ರೋಗಕ್ಕೆ ತುತ್ತಾಗಿ ನಿರೀಕ್ಷಿತ ಮಟ್ಟದಲ್ಲಿ ಇಳುವರಿ ಬರುತ್ತಿಲ್ಲ. ಸದ್ಯ ಬೀಸುತ್ತಿರುವ ಮೂಢಗಾಳಿಗೆ ಮತ್ತಷ್ಟು ಎಲೆಬಳ್ಳಿಗಳು ಒಣಗುತ್ತಿದ್ದು, ಅವುಗಳನ್ನು ಉಳಿಸಿಕೊಳ್ಳಲು ಹರಸಾಹಸಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. –ಮಂಜಪ್ಪ ಹಾವನೂರು, ಎಲೆಬಳ್ಳಿ ಬೆಳೆಗಾರ

ಸದ್ಯದ ಮಾರುಕಟ್ಟೆಯಲ್ಲಿ ವೀಳ್ಯದೆಲೆ ದರ ಗಗನಕ್ಕೇರಿದ್ದು, ಧಾರ್ಮಿಕ ಪೂಜೆ, ಶುಭ ಸಮಾರಂಭಗಳಲ್ಲಿ ವೀಳ್ಯದೆಲೆ ಬಳಕೆ ಸಾಧ್ಯವಾದಷ್ಟು ಕಡಿಮೆ ಮಾಡುವಂತಾಗಿದೆ. ಶುಭ ಸಮಾರಂಭಗಳಿಗೆ ಆಗಮಿಸಿದ್ದ ಅತಿಥಿಗಳಿಗೆ ಊಟದ ನಂತರ ಅಡಕೆ, ಎಲೆ ನೀಡಲಾಗುತ್ತಿತ್ತು. ಆದರೆ, ಈಗ ಅತಿಥಿಗಳಿಗೆ ಕೇವಲ ಸಿಹಿಮಿಶ್ರಿತ ಅಡಕೆ ಪುಡಿ ನೀಡಿ ಸತ್ಕರಿಸುವ ಸ್ಥಿತಿ ಎದುರಾಗಿದೆ.
-ಶಾರದಾ ಪೂಜಾರ, ಹಾವೇರಿ

ಅತಿವೃಷ್ಟಿ-ಮೂಢಗಾಳಿಗೆ ಬೆಳೆ ಹಾನಿ:

ಅದರೆ ಮಲೆನಾಡು ಪ್ರದೇಶವಾದ ಜಿಲ್ಲೆಯ ಸವಣೂರು ತಾಲೂಕು, ಹಾವೇರಿ ತಾಲೂಕಿನ ಗುತ್ತಲ, ನೆಗಳೂರು, ಹಾವನೂರ, ಕನವಳ್ಳಿ ಗ್ರಾಮ ಹಾಗೂ ಹಾನಗಲ್ಲ ತಾಲೂಕಿನ ಪ್ರದೇಶಗಳಲ್ಲಿ ವೀಳ್ಯದೆಲೆ  ತೋಟಗಳು ಕಂಡು ಬರುತ್ತವೆ. ಆದರೆ, ಈಗ ಜಿಲ್ಲೆಯಲ್ಲಿ ಬೀಸುತ್ತಿರುವ ಮೂಢಗಾಳಿಗೆ ಅರ್ಧಕ್ಕೆ ಅರ್ಧದಷ್ಟು ವೀಳ್ಯದೆಲೆ ಇಳುವರಿ ಕುಂಠಿತಗೊಂಡಿದೆ. ಅಲ್ಲದೇ, ಕಳೆದ ವರ್ಷದ ಅತಿವೃಷ್ಟಿಯಿಂದ ಜಿಲ್ಲೆಯ ಕೆಲವು ಭಾಗದಲ್ಲಿನ ಎಲೆ ಬಳ್ಳಿ ತೋಟಗಳು ಸಂಪೂರ್ಣ ನಾಶವಾಗಿವೆ. ಹೀಗಾಗಿ, ನಿರೀಕ್ಷಿತ ಪ್ರಮಾಣದಲ್ಲಿ ವೀಳ್ಯದೆಲೆ ಮಾರುಕಟ್ಟೆಗೆ ಆಗಮಿಸದ ಪರಿಣಾಮ ಬೆಲೆ ಹೆಚ್ಚಳ ಕಂಡಿದೆ ಎನ್ನುವ ಮಾತುಗಳು ವ್ಯಾಪಾರಸ್ಥರಿಂದ ಕೇಳಿ ಬರುತ್ತಿದೆ

„ವೀರೇಶ ಮಡ್ಲೂರ

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.