ಸಮಸ್ಯೆಗಳ ನಡುವೆ ಶೇ. 50ರಷ್ಟು ಕಾರ್ಡ್‌ಗಳು ಸಿದ್ಧ

ಪ್ರಾಪರ್ಟಿ ಕಾರ್ಡ್‌ ಕಡ್ಡಾಯ ಆದೇಶ ಮುಂದೂಡಿಕೆಯಾಗಿ ಎರಡು ವರ್ಷ

Team Udayavani, Oct 5, 2021, 6:28 AM IST

ಸಮಸ್ಯೆಗಳ ನಡುವೆ ಶೇ. 50ರಷ್ಟು ಕಾರ್ಡ್‌ಗಳು ಸಿದ್ಧ

ಮಹಾನಗರ: ಮಂಗಳೂರು ಮಹಾನಗರದಲ್ಲಿ ಆಸ್ತಿ ನೋಂದಣಿಗೆ ಪ್ರಾಪರ್ಟಿ ಕಾರ್ಡ್‌ ಕಡ್ಡಾಯ ನಿಯಮ ಮುಂದೂಡಿಕೆಯಾಗಿ ಎರಡು ವರ್ಷ ಸಮೀಪಿಸುತ್ತಿದೆ. ಆದರೆ ಹಲವು ಸಮಸ್ಯೆ, ಅನಿಶ್ಚಿತತೆ ನಡುವೆಯೂ ಶೇ. 50ರಷ್ಟು ಕಾರ್ಡ್‌ಗಳು ಇದೀಗ ಸಿದ್ಧಗೊಂಡಿವೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾಲಿಕೆಯ 32 ಕಂದಾಯ ಗ್ರಾಮಗಳನ್ನು ಆರು ವಲಯಗಳಾಗಿ ಮತ್ತು 30 ಸೆಕ್ಟರ್‌ಗಳಾಗಿ ವಿಂಗಡಿಸಿದ್ದು, ಅಳತೆಗೆ ಒಳಪಟ್ಟ 1,50,428 ಆಸ್ತಿಗಳಿವೆ. ಪ್ರಸ್ತುತ ಸುಮಾರು 70,000 ಪ್ರಾಪರ್ಟಿ ಕಾರ್ಡ್‌ಗಳು ಸಿದ್ಧಗೊಂಡಿದ್ದು, ಈಗಾಗಲೇ 51,000 ಕಾರ್ಡ್‌ಗಳು ವಿತರಣೆಯಾಗಿವೆ. ಇದೀಗ ಹೊಸದಾಗಿ ಆಸ್ತಿಗಳು ಸೇರ್ಪಡೆಯಾಗಿ ಒಟ್ಟು ಆಸ್ತಿಗಳ ಸಂಖ್ಯೆ ಸುಮಾರು 1,84,000ರಷ್ಟು ಇದೆ.

ನಗರದಲ್ಲಿ ಆಸ್ತಿಗಳ ನೋಂದಣಿಗೆ ಪ್ರಾಪರ್ಟಿ ಕಾರ್ಡ್‌ ಕಡ್ಡಾಯ ಎನ್ನುವ ಆದೇಶವನ್ನು 2019ರ ಅಕ್ಟೋಬರ್‌ 11ರಿಂದ ಮುಂದಿನ ಆದೇಶದವರೆಗೆ ಮುಂದೂಡಲಾಗಿತ್ತು. ಇದರೊಂದಿಗೆ ನಗರದಲ್ಲಿ ಆಸ್ತಿ ನೋಂದಣಿಗೆ ಪ್ರಾಪರ್ಟಿ ಕಾರ್ಡ್‌ ಕಡ್ಡಾಯವಾದ ಬಳಿಕ ಒಟ್ಟು 4 ಬಾರಿ ಮುಂದೂಡಿಕೆಯಾಗಿದೆ. ಆಸ್ತಿ ನೋಂದಣಿ ಹೊರತುಪಡಿಸಿ ಕೃಷಿಭೂಮಿ ಪರಿವರ್ತನೆ ಸಹಿತ ಕೆಲವು ಪ್ರಕ್ರಿಯೆಗಳಿಗೆ ಪ್ರಾಪರ್ಟಿ ಕಾರ್ಡ್‌ ಕಡ್ಡಾಯವಾಗಿದೆ. ಕರಾವಳಿ ಕರ್ನಾಟಕದಲ್ಲೇ ಪ್ರಥಮವಾಗಿ ಮಂಗಳೂರಿನಲ್ಲಿ ಅರ್ಬನ್‌ ಪ್ರಾಪರ್ಟಿ ಓನರ್‌ಶಿಪ್‌ ರೆಕಾರ್ಡ್ಸ್‌ (ಯುಪಿಓಆರ್‌) ಪ್ರಾಪರ್ಟಿ ಕಾರ್ಡ್‌ (ಆಸ್ತಿ ಮಾಲಕತ್ವದ ದಾಖಲೆ) ವ್ಯವಸ್ಥೆ ಜಾರಿಗೆ ಬಂದಿದ್ದು, ಮಂಗಳೂರಿನಲ್ಲಿ 2012ರ ಎಪ್ರಿಲ್‌ನಲ್ಲಿ ಈ ಯೋಜನೆ ಜಾರಿ ಪ್ರಕ್ರಿಯೆ ಪ್ರಾರಂಭವಾಗಿತ್ತು.

ಸಿಬಂದಿ ಕೊರತೆ
ಪ್ರಸ್ತುತ 8 ಮಂದಿ ಸರ್ವರ್‌ಗಳಿದ್ದಾರೆ. ಆದರೆ ಕಡತಗಳ ವಿಲೇವಾರಿ ದೃಷ್ಟಿಯಿಂದ ಇದು ಸಾಕಾಗುವುದಿಲ್ಲ. ಆಸ್ತಿಗಳ ಅಳತೆ ಕಾರ್ಯ ವಿಳಂಭ ವಾಗುತ್ತಿದೆ. ಇದು ಬಾಕಿ ಇರುವ ಕಡತಗಳ ವಿಲೇವಾರಿಯ ಮೇಲೂ ಪರಿಣಾಮ ಬೀರುತ್ತಿದೆ. ಪ್ರಾಪರ್ಟಿ ಕಾರ್ಡ್‌ ಸರ್ವರ್‌ ಬೆಂಗಳೂರಿನಲ್ಲಿರುತ್ತದೆ. ಕಾರ್ಡ್‌ನ ತಾಂತ್ರಿಕ ಸಮಸ್ಯೆ ಗಳನ್ನು ಸರಿಪಡಿಸಲು ಬೆಂಗಳೂರಿಗೆ ಕಳುಹಿಸಲಾಗುತ್ತದೆ. ಆದರೆ ಅಲ್ಲಿ ಈ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಇದ ರಿಂದ ಸಾರ್ವಜನಿಕರು ಕಚೇರಿಗೆ ಅಲೆದಾಡ ಬೇಕಾದ ಸಂದರ್ಭಗಳು ಬರುತ್ತವೆ.

ಇದನ್ನೂ ಓದಿ:ಶೀಘ್ರದಲ್ಲೇ ಕೆಂಪೇಗೌಡ ಬಡಾವಣೆ ರೈತರ ಸಮಸ್ಯೆಗೆ ಪರಿಹಾರ: ಎಸ್.ಆರ್.ವಿಶ್ವನಾಥ್

ಸೌಲಭ್ಯಗಳ ಕೊರತೆ, ಸಮಸ್ಯೆಗಳು
ಪ್ರಸ್ತುತ-ಯುಪಿಓಆರ್‌ಗೆ ಸ್ಮಾರ್ಟ್‌ ಸಿಟಿ ಯೋಜನೆಯಡಿ ಹೊಸದಾಗಿ ಕಟ್ಟಡ ಸಿದ್ಧಗೊಳ್ಳುತ್ತಿದ್ದು, ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಪ್ರಾಪರ್ಟಿ ಕಾರ್ಡ್‌ಗಾಗಿ ಬರುವ ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯ ಮುಂತಾದ ಮೂಲ ಸೌಕರ್ಯಗಳಿಲ್ಲ. ಕಚೇರಿಗೆ ದೂರವಾಣಿ ಸಂಪರ್ಕ ಇಲ್ಲದ ಕಾರಣ ಸಾರ್ವಜನಿಕರು ಸಿಬಂದಿ ವೈಯುಕ್ತಿಕ ಮೊಬೈಲ್‌ಗ‌ಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬೇಕಾದ ಸ್ಥಿತಿ ಇದ್ದು, ಇದರಿಂದ ಸಾರ್ವಜನಿಕರು, ಸಿಬಂದಿ ಕಿರಿಕಿರಿ ಅನುಭವಿಸುವಂತಾಗಿದೆ. ಸಮರ್ಪಕ ಸಾರ್ವಜನಿಕ ಮಾಹಿತಿ ಕೇಂದ್ರ ವ್ಯವಸ್ಥೆ ಇಲ್ಲದಿರುವ ಕಾರಣದಿಂ¨ ಸಾರ್ವಜನಿಕರು ಕಾರ್ಡ್‌ ಬಗ್ಗೆ ಮಾಹಿತಿ, ವಿಚಾರಣೆ ಬಗ್ಗೆ ಸಮಸ್ಯೆ ಎದುರಿಸುವಂತಾಗಿದೆ. ರೆಕಾರ್ಡ್‌ ರೂಂ ಸಮಸ್ಯೆ ತಕ್ಕಮಟ್ಟಿಗೆ ಬಗೆಹರಿದಿದ್ದು, ಇದೀಗ ಹೊಸದಾಗಿ ಸಿದ್ಧಗೊಳ್ಳುವ ಕಟ್ಟಡದಲ್ಲಿ ಒಂದು ಅಂತಸ್ತು ಅನ್ನು ರೆಕಾರ್ಡ್‌ ರೂಂಗಾಗಿಯೇ ಮೀಸಲಿರಿಸಲಾಗುತ್ತಿದೆ.

ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿ
ಆಸ್ತಿ ನೋಂದಣಿಗೆ ಪ್ರಾಪರ್ಟಿ ಕಾರ್ಡ್‌ ಕಡ್ಡಾಯಕ್ಕೆ ವಿನಾಯತಿ ಹೊರತುಪಡಿಸಿ ಉಳಿದಂತೆ ಇತರ ಪ್ರಕ್ರಿಯೆಗಳಿಗೆ ಬಳಕೆಯಲ್ಲಿದೆ. ಕಾರ್ಡ್‌ ಸಿದ್ಧಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಸಾರ್ವಜನಿಕರಿಂದ ಪ್ರಾಪರ್ಟಿ ಕಾರ್ಡ್‌ಗಳನ್ನು ಅರ್ಜಿಗಳು ಬರುತ್ತಿದ್ದು, ತಿಂಗಳಿಗೆ ಸರಾಸರಿ 600 ಕಾರ್ಡ್‌ಗಳನ್ನು ಮಾಡಲಾಗುತ್ತಿದೆ. ಹೊಸದಾಗಿ 25,000ಕ್ಕಿಂತಲೂ ಅಧಿಕ ಆಸ್ತಿಗಳು ಸೇರ್ಪಡೆಯಾಗಿವೆ.
-ನಿರಂಜನ್‌,
ಭೂಮಾಪನ ಇಲಾಖೆಯ ಉಪ ನಿರ್ದೇಶಕರು

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.