ಭದ್ರಾವತಿ: ವಿಐಎಸ್‌ಎಲ್‌ ಕಾರ್ಖಾನೆಗೆ ಕೊನೆ ಮೊಳೆ


Team Udayavani, Feb 18, 2023, 7:32 AM IST

ಭದ್ರಾವತಿ: ವಿಐಎಸ್‌ಎಲ್‌ ಕಾರ್ಖಾನೆಗೆ ಕೊನೆ ಮೊಳೆ

ಶಿವಮೊಗ್ಗ: ವಿಐಎಸ್‌ಎಲ್‌ ಮುಚ್ಚುವುದಿಲ್ಲ, ಉಳಿಸಿಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಇತ್ತ ಭರವಸೆ ನೀಡುತ್ತಿದ್ದರೆ; ಅತ್ತ ಕೇಂದ್ರ ಸರಕಾರ ಕಾರ್ಖಾನೆ ಮುಚ್ಚುವುದು ಶತಸ್ಸಿದ್ಧ ಎಂದು ರಾಜ್ಯಸಭೆಯಲ್ಲೇ ಸ್ಪಷ್ಟ ಪಡಿಸುವ ಮೂಲಕ ಶತ ಮಾ ನಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ರಾಜ್ಯದ ಏಕೈಕ ಸಾರ್ವಜನಿಕ ಉಕ್ಕಿನ ಕಾರ್ಖಾನೆ ವಿಐಎಸ್‌ಎಲ್‌ಗೆ ಚರಮ ಗೀತೆ ಬರೆದಿದೆ. ಇಲ್ಲಿಗೆ ಕೈಗಾರಿಕಾ ನಗರದ ಇತಿಹಾಸವೂ ಕೊನೆಯಾಗಲಿದೆ.

ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ಸರ್‌ ಎಂ. ವಿಶ್ವೇಶ್ವರಯ್ಯ ದೂರದೃಷ್ಟಿ ಫಲವಾಗಿ 1923ರ ಜ. 18ರಂದು ಆರಂಭಗೊಂಡ ಭದ್ರಾವತಿಯ ವಿಐಎಸ್‌ಎಲ್‌ ಕಾರ್ಖಾನೆಯು ಇಲ್ಲಿನ ಸಾವಿರಾರು ಜನರಿಗೆ ಉದ್ಯೋಗ ನೀಡಿತ್ತಲ್ಲದೆ ರಾಜ್ಯದ ಲಕ್ಷಾಂತರ ಮಂದಿಗೆ ಪ್ರತ್ಯಕ್ಷ, ಪರೋಕ್ಷವಾಗಿ ಜೀವನ ನೀಡಿತ್ತು.

ಕಾರ್ಖಾನೆಗೆ 1952ರಲ್ಲಿ ವಿದ್ಯುತ್‌ ಯಂತ್ರಗಳು ಆಗಮಿಸಿದವು. 1960ರಲ್ಲಿ ಜರ್ಮನ್‌ ತಂತ್ರಜ್ಞಾನದ ಹೊಸ ಯಂತ್ರೋ ಪಕರಣಗಳನ್ನು ಬಳಸಿ ಉತ್ಪಾದನೆ ಆರಂಭಿಸಲಾಯಿತು. ಈ ಯಂತ್ರ
ಗಳು 20 ವರ್ಷಗಳ ಕಾಲ ಕಂಪೆನಿಯನ್ನು ಲಾಭದಲ್ಲಿ ಇಟ್ಟಿದ್ದವು. ಬಳಿಕ ಅಧಃಪತನ ಆರಂಭವಾಯಿತು. ಹೊಸ ತಂತ್ರಜ್ಞಾನ, ಯಂತ್ರಗಳನ್ನು ಅಳವಡಿಸಿಕೊಳ್ಳದೆ ಕಾರ್ಖಾನೆ ಹಿಂದುಳಿಯಿತು.

ಕೇಂದ್ರ ಸರಕಾರ 3 ವರ್ಷಗಳ ಹಿಂದೆ ಖಾಸಗಿಗೆ ಕೊಡಲು ಗ್ಲೋಬಲ್‌ ಟೆಂಡರ್‌ ಕರೆದಿತ್ತು. ಆದರೆ ಯಾವುದೇ ಕಂಪೆನಿಗಳು ಬಿಡ್‌ ಮಾಡಲು ಮುಂದೆ ಬರಲಿಲ್ಲ. ಕೇಂದ್ರ ಸರಕಾರದ ಕೈಗಾರಿಕಾ ನೀತಿ ಅನುಸಾರ ಖಾಸಗೀಕರಣಕ್ಕೂ ವಿಫಲವಾಗಿರುವುದ ರಿಂದ ಮುಚ್ಚಲು ಪ್ರಕ್ರಿಯೆ ಆರಂಭವಾಗಿದೆ.

ಕಾರ್ಮಿಕರ ಭವಿಷ್ಯ ಅತಂತ್ರ
ಒಂದು ಕಾಲದಲ್ಲಿ 13 ಸಾವಿರ ಖಾಯಂ ನೌಕರರು, 5 ಸಾವಿರ ಗುತ್ತಿಗೆ ಕಾರ್ಮಿಕರು ಇದ್ದರು. ಈಗ ಉಳಿದಿರುವುದು 211 ಖಾಯಂ ನೌಕರರು, 1,300 ಗುತ್ತಿಗೆ ಕಾರ್ಮಿಕರು. ಕಂಪೆನಿ ಮುಚ್ಚಿದರೆ ಈ ನೌಕರರ ಭವಿಷ್ಯ, ಇವರನ್ನೇ ನಂಬಿರುವ ಕುಟುಂಬಗಳು, ಭದ್ರಾವತಿಯ ಆರ್ಥಿಕತೆಗೆ ಬಹು ದೊಡ್ಡ ಪೆಟ್ಟು ಬೀಳಲಿದೆ.

ನಾವು ಹೋರಾಟದ ಮುಂದಾಳತ್ವ ವಹಿಸಿಕೊಂಡಿಲ್ಲ. ನಾವು 10 ವರ್ಷಗಳಿಂದ ಖಾಸಗೀಕರಣ ಬೇಡ, ಬಂಡವಾಳ ಹಾಕಿ, ಗಣಿ ಕೊಡಿ ಎಂದು ಹೋರಾಟ ಮಾಡುತ್ತ ಬಂದಿದ್ದೇವೆ. ಕೇಂದ್ರ ಸರಕಾರದ ನೀತಿಯಲ್ಲಿ ಖಾಸಗಿಗೆ ಕೊಡುವ ಅಥವಾ ಮುಚ್ಚುವ ಎಂಬ ನಿಯಮ ಇದೆ. ನೀತಿಯಲ್ಲಿ ಬದಲಾವಣೆ ತಂದು ಸಚಿವ ಸಂಪುಟದಲ್ಲಿ ಮುಚ್ಚುವ ಆದೇಶ ಹಿಂಪಡೆದು ಪುನರುಜ್ಜೀವನಕ್ಕೆ ಅವಕಾಶ ಕೊಟ್ಟರೆ ಕಾರ್ಖಾನೆ ಉಳಿಯುವ ಅವಕಾಶ ಇದೆ.
– ಜಗದೀಶ್‌, ಅಧ್ಯಕ್ಷ, ವಿಐಎಸ್‌ಎಲ್‌ ಕಾರ್ಮಿಕರ ಸಂಘ

ಕಾರ್ಖಾನೆಗೆ ನೂರು ವರ್ಷ ತುಂಬಿದೆ. ಸಂಭ್ರಮಾಚರಣೆ ಮಾಡುವ ಬದಲು ಶೋಕಾಚರಣೆ ಮಾಡುವಂತಾಗಿದೆ. ಸಾವಿರಾರು ಕುಟುಂಬಗಳು ಇದನ್ನೇ ನಂಬಿವೆ. ಸರಕಾರ ಬಂಡವಾಳ ಹೂಡಲಿ.
– ಸುರೇಶ್‌, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.