ಭದ್ರಾವತಿ: ವಿಐಎಸ್ಎಲ್ ಕಾರ್ಖಾನೆಗೆ ಕೊನೆ ಮೊಳೆ
Team Udayavani, Feb 18, 2023, 7:32 AM IST
ಶಿವಮೊಗ್ಗ: ವಿಐಎಸ್ಎಲ್ ಮುಚ್ಚುವುದಿಲ್ಲ, ಉಳಿಸಿಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಇತ್ತ ಭರವಸೆ ನೀಡುತ್ತಿದ್ದರೆ; ಅತ್ತ ಕೇಂದ್ರ ಸರಕಾರ ಕಾರ್ಖಾನೆ ಮುಚ್ಚುವುದು ಶತಸ್ಸಿದ್ಧ ಎಂದು ರಾಜ್ಯಸಭೆಯಲ್ಲೇ ಸ್ಪಷ್ಟ ಪಡಿಸುವ ಮೂಲಕ ಶತ ಮಾ ನಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ರಾಜ್ಯದ ಏಕೈಕ ಸಾರ್ವಜನಿಕ ಉಕ್ಕಿನ ಕಾರ್ಖಾನೆ ವಿಐಎಸ್ಎಲ್ಗೆ ಚರಮ ಗೀತೆ ಬರೆದಿದೆ. ಇಲ್ಲಿಗೆ ಕೈಗಾರಿಕಾ ನಗರದ ಇತಿಹಾಸವೂ ಕೊನೆಯಾಗಲಿದೆ.
ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ದೂರದೃಷ್ಟಿ ಫಲವಾಗಿ 1923ರ ಜ. 18ರಂದು ಆರಂಭಗೊಂಡ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯು ಇಲ್ಲಿನ ಸಾವಿರಾರು ಜನರಿಗೆ ಉದ್ಯೋಗ ನೀಡಿತ್ತಲ್ಲದೆ ರಾಜ್ಯದ ಲಕ್ಷಾಂತರ ಮಂದಿಗೆ ಪ್ರತ್ಯಕ್ಷ, ಪರೋಕ್ಷವಾಗಿ ಜೀವನ ನೀಡಿತ್ತು.
ಕಾರ್ಖಾನೆಗೆ 1952ರಲ್ಲಿ ವಿದ್ಯುತ್ ಯಂತ್ರಗಳು ಆಗಮಿಸಿದವು. 1960ರಲ್ಲಿ ಜರ್ಮನ್ ತಂತ್ರಜ್ಞಾನದ ಹೊಸ ಯಂತ್ರೋ ಪಕರಣಗಳನ್ನು ಬಳಸಿ ಉತ್ಪಾದನೆ ಆರಂಭಿಸಲಾಯಿತು. ಈ ಯಂತ್ರ
ಗಳು 20 ವರ್ಷಗಳ ಕಾಲ ಕಂಪೆನಿಯನ್ನು ಲಾಭದಲ್ಲಿ ಇಟ್ಟಿದ್ದವು. ಬಳಿಕ ಅಧಃಪತನ ಆರಂಭವಾಯಿತು. ಹೊಸ ತಂತ್ರಜ್ಞಾನ, ಯಂತ್ರಗಳನ್ನು ಅಳವಡಿಸಿಕೊಳ್ಳದೆ ಕಾರ್ಖಾನೆ ಹಿಂದುಳಿಯಿತು.
ಕೇಂದ್ರ ಸರಕಾರ 3 ವರ್ಷಗಳ ಹಿಂದೆ ಖಾಸಗಿಗೆ ಕೊಡಲು ಗ್ಲೋಬಲ್ ಟೆಂಡರ್ ಕರೆದಿತ್ತು. ಆದರೆ ಯಾವುದೇ ಕಂಪೆನಿಗಳು ಬಿಡ್ ಮಾಡಲು ಮುಂದೆ ಬರಲಿಲ್ಲ. ಕೇಂದ್ರ ಸರಕಾರದ ಕೈಗಾರಿಕಾ ನೀತಿ ಅನುಸಾರ ಖಾಸಗೀಕರಣಕ್ಕೂ ವಿಫಲವಾಗಿರುವುದ ರಿಂದ ಮುಚ್ಚಲು ಪ್ರಕ್ರಿಯೆ ಆರಂಭವಾಗಿದೆ.
ಕಾರ್ಮಿಕರ ಭವಿಷ್ಯ ಅತಂತ್ರ
ಒಂದು ಕಾಲದಲ್ಲಿ 13 ಸಾವಿರ ಖಾಯಂ ನೌಕರರು, 5 ಸಾವಿರ ಗುತ್ತಿಗೆ ಕಾರ್ಮಿಕರು ಇದ್ದರು. ಈಗ ಉಳಿದಿರುವುದು 211 ಖಾಯಂ ನೌಕರರು, 1,300 ಗುತ್ತಿಗೆ ಕಾರ್ಮಿಕರು. ಕಂಪೆನಿ ಮುಚ್ಚಿದರೆ ಈ ನೌಕರರ ಭವಿಷ್ಯ, ಇವರನ್ನೇ ನಂಬಿರುವ ಕುಟುಂಬಗಳು, ಭದ್ರಾವತಿಯ ಆರ್ಥಿಕತೆಗೆ ಬಹು ದೊಡ್ಡ ಪೆಟ್ಟು ಬೀಳಲಿದೆ.
ನಾವು ಹೋರಾಟದ ಮುಂದಾಳತ್ವ ವಹಿಸಿಕೊಂಡಿಲ್ಲ. ನಾವು 10 ವರ್ಷಗಳಿಂದ ಖಾಸಗೀಕರಣ ಬೇಡ, ಬಂಡವಾಳ ಹಾಕಿ, ಗಣಿ ಕೊಡಿ ಎಂದು ಹೋರಾಟ ಮಾಡುತ್ತ ಬಂದಿದ್ದೇವೆ. ಕೇಂದ್ರ ಸರಕಾರದ ನೀತಿಯಲ್ಲಿ ಖಾಸಗಿಗೆ ಕೊಡುವ ಅಥವಾ ಮುಚ್ಚುವ ಎಂಬ ನಿಯಮ ಇದೆ. ನೀತಿಯಲ್ಲಿ ಬದಲಾವಣೆ ತಂದು ಸಚಿವ ಸಂಪುಟದಲ್ಲಿ ಮುಚ್ಚುವ ಆದೇಶ ಹಿಂಪಡೆದು ಪುನರುಜ್ಜೀವನಕ್ಕೆ ಅವಕಾಶ ಕೊಟ್ಟರೆ ಕಾರ್ಖಾನೆ ಉಳಿಯುವ ಅವಕಾಶ ಇದೆ.
– ಜಗದೀಶ್, ಅಧ್ಯಕ್ಷ, ವಿಐಎಸ್ಎಲ್ ಕಾರ್ಮಿಕರ ಸಂಘ
ಕಾರ್ಖಾನೆಗೆ ನೂರು ವರ್ಷ ತುಂಬಿದೆ. ಸಂಭ್ರಮಾಚರಣೆ ಮಾಡುವ ಬದಲು ಶೋಕಾಚರಣೆ ಮಾಡುವಂತಾಗಿದೆ. ಸಾವಿರಾರು ಕುಟುಂಬಗಳು ಇದನ್ನೇ ನಂಬಿವೆ. ಸರಕಾರ ಬಂಡವಾಳ ಹೂಡಲಿ.
– ಸುರೇಶ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ