ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ವಿರೋಧ ಪಕ್ಷಗಳಿಂದ ಫಂಡಿಂಗ್
Team Udayavani, Dec 27, 2019, 12:55 PM IST
ಬೀದರ್: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಿಂದ ಮುಸ್ಲಿಂ ಬಾಂಧವರಿಗೆ ಯಾವುದೇ ರೀತಿಯ ತೊಂದರೆ ಇಲ್ಲ. ಈಗ ಬಗ್ಗೆ ಚರ್ಚಿಸಲು ಬೇಕಾದರೆ ವೇದಿಕೆಯನ್ನು ಸಿದ್ದಪಡಿಸುತ್ತೇನೆ ಎಂದು ಸಂಸದ ಭಗವಂತ ಖೂಬಾ ಸವಾಲು ಹಾಕಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷ ಪ್ರತಿಭಟನೆಗೆ ಪ್ರಚೋದಿಸುತ್ತಿದೆ. ಅಷ್ಟೇ ಅಲ್ಲ ಫಂಡಿಂಗ್ ಸಹ ಮಾಡುತ್ತಿದೆ ಎಂದು ಗಂಭಿರ ಆರೋಪ ಮಾಡಿದರು.
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಕನಕಪುರದಲ್ಲಿ ವಿಶ್ವದ ಎತ್ತರದ ಏಸು ಕ್ರಿಸ್ತನ ಮೂರ್ತಿ ನಿರ್ಮಾಣ ಮಾಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷಗಿರಿಗಾಗಿ ವರಿಷ್ಟೆ ಸೋನಿಯಾ ಗಾಂಧಿ ಅವರಿಂದ ಶಹಬ್ಬಾಶ್ ಗಿರಿ ಪಡೆಯಲು ಈ ಕೆಲಸ ಮಾಡುತ್ತಿದ್ದಾರೆ ಎಂದರು.