BJP ರಾಜಕಾರಣದಿಂದ ಭಾರತಮಾತೆ ಹತ್ಯೆ: ಕೇಂದ್ರದ ವಿರುದ್ಧ ಮುಗಿಬಿದ್ದ ರಾಹುಲ್‌ ಗಾಂಧಿ

ಮಣಿಪುರ ದೇಶದ ಭಾಗ ಎಂದು ಪರಿಗಣಿಸದ ಪ್ರಧಾನಿ

Team Udayavani, Aug 10, 2023, 5:51 AM IST

rahul gandhi

ನವದೆಹಲಿ: ಬಿಜೆಪಿಯ ರಾಜಕೀಯದಿಂದಾಗಿ ಮಣಿಪುರದಲ್ಲಿ ಭಾರತ ಮಾತೆಯ ಹತ್ಯೆಯಾಗಿದೆ. ಈಶಾನ್ಯ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಸೂಕ್ತಯಾಗಿ ನಿಭಾಯಿಸಲೇ ಇಲ್ಲ ಎಂದು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ, ವಯನಾಡ್‌ ಸಂಸದ ರಾಹುಲ್‌ ಗಾಂಧಿ ಉಗ್ರವಾಗಿ ಟೀಕಿಸಿದ್ದಾರೆ.

ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಮಂಡಿಸಿದ ಅವಿಶ್ವಾಸ ಗೊತ್ತುವಳಿಯ ಬಗೆಗಿನ ಎರಡನೇ ದಿನ ಬುಧವಾರದ ಚರ್ಚೆಯನ್ನು ಆರಂಭಿಸಿ ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿಯವರು ಹಿಂಸೆಯಿಂದ ತತ್ತರಿಸಿದ ಈಶಾನ್ಯ ರಾಜ್ಯಕ್ಕೆ ಭೇಟಿ ನೀಡಲೇ ಇಲ್ಲ. ಏಕೆಂದರೆ ಆ ರಾಜ್ಯವನ್ನು ಮೋದಿಯವರು ದೇಶದ ಒಂದು ಭಾಗ ಎಂದು ಪರಿಗಣಿಸಿಯೇ ಇಲ್ಲ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮೋದಿ ಕುಲನಾಮ ಪ್ರಕರಣದಲ್ಲಿ ವಿಧಿಸಲಾಗಿದ್ದ ಅನರ್ಹತೆ ಶಿಕ್ಷೆಗೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿ, ಮತ್ತೆ ಸಂಸತ್‌ ಸದಸ್ಯತ್ವವನ್ನು ಪಡೆದ ಬಳಿಕ ಲೋಕಸಭೆಯಲ್ಲಿ ರಾಹುಲ್‌ ಅವರ ಮೊದಲ ಭಾಷಣ ಇದಾಗಿದೆ.

“ನೀವು ದೇಶದ್ರೋಹಿಗಳು’ ಎಂದು ಬಿಜೆಪಿಯವರನ್ನು ಜರೆದ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ “ಭಾರತ ಎಂದರೆ ಧ್ವನಿ, ಅದು ಹೃದಯದ ಧ್ವನಿ. ಅದನ್ನು ನೀವು ಮಣಿಪುರದಲ್ಲಿ ಕೊಂದು ಹಾಕಿದ್ದೀರಿ. ಈಶಾನ್ಯ ರಾಜ್ಯ ಮಣಿಪುರದಲ್ಲಿ ನೀವು ಭಾರತ ಮಾತೆಯನ್ನು ಹತ್ಯೆ ಮಾಡಿದ್ದೀರಿ. ನನ್ನ ತಾಯಿ ಇಲ್ಲಿ ಕುಳಿತಿದ್ದಾರೆ. ಆದರೆ, ಮಣಿಪುರದಲ್ಲಿ ನನ್ನ ಮತ್ತೂಬ್ಬ ತಾಯಿ ಭಾರತ ಮಾತೆಯನ್ನು ಕೊಂದಿದ್ದೀರಿ. ಇದೇ ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಣಿಪುರಕ್ಕೆ ಭೇಟಿ ನೀಡುತ್ತಿಲ್ಲ, ನೀವು ಭಾರತ ಮಾತೆಯ ರಕ್ಷಕರೇ ಅಲ್ಲ, ಹತ್ಯೆ ಮಾಡುವವರು’ ಎಂದು ಕಠೊರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯಿಂದ ವಿಭಜನೆ:
ಈಶಾನ್ಯ ರಾಜ್ಯವನ್ನು ಬಿಜೆಪಿ ವಿಭಜಿಸಿದೆ ಎಂದು ಆರೋಪಿಸಿದ ರಾಹುಲ್‌, ಆ ರಾಜ್ಯವನ್ನು ಭಾರತದ ಭಾಗ ಎಂದು ಪ್ರಧಾನಿ ಪರಿಗಣಿಸುತ್ತಿಲ್ಲ. ಹೀಗಾಗಿಯೇ ಅಲ್ಲಿನ ಪರಿಸ್ಥಿತಿ ಅವಲೋಕಿಸಲು ಹೋಗಲೇ ಇಲ್ಲ ಎಂದು ಹೇಳಿದ್ದಾರೆ. ಸೇನೆಯನ್ನು ಆ ರಾಜ್ಯಕ್ಕೆ ಕಳುಹಿಸುವ ಮೂಲಕ ತೆಷಮಯ ಪರಿಸ್ಥಿತಿಯನ್ನು ನಿಯಂತ್ರಿಸಲು ಕೇಂದ್ರಕ್ಕೆ ಸಾಧ್ಯವಿದೆ.

ಕೇಂದ್ರ ಸರ್ಕಾರಕ್ಕೆ ಆ ರೀತಿ ಮಾಡಲು ಮನಸ್ಸೇ ಇಲ್ಲ ಎಂದರು. ಆ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ ಈಶಾನ್ಯ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನಿರಾಶ್ರಿತರ ಶಿಬಿರದಲ್ಲಿ ಮಹಿಳೆಯರು, ಮಕ್ಕಳನ್ನು ಭೇಟಿ ಮಾಡಿ ಅವರ ನೋವು ಆಲಿಸಿದ್ದೆ. ಆ ಕೆಲಸವನ್ನು ಪ್ರಧಾನಿ ಮೋದಿಯವರು ಮಾಡಬೇಕಿತ್ತು ಎಂದರು ರಾಹುಲ್‌ ಗಾಂಧಿ.

ರಾಮಾಯಣವನ್ನು ಉಲ್ಲೇಖೀಸಿದ ರಾಹುಲ್‌, “ರಾಮ ರಾವಣನನ್ನು ಕೊಲ್ಲಲಿಲ್ಲ. ಹನುಮಂತ ಲಂಕೆಯನ್ನು ಸುಡಲಿಲ್ಲ. ಎರಡೂ ಘಟನೆಗಳು ಉಂಟಾದದ್ದು ಆತನ ಅಹಂಕಾರದಿಂದ’ ಎಂದರು. “ನೀವು ಎಲ್ಲೆಡೆ ಸೀಮೆ ಎಣ್ಣೆ ಸುರಿದಿದ್ದೀರಿ, ಮಣಿಪುರದಲ್ಲಿ ಬೆಂಕಿ ಹಚ್ಚಿದ್ದೀರಿ. ಅದನ್ನೇ ಹರ್ಯಾಣದಲ್ಲಿ ಪುನರಾವರ್ತಿಸಲು ಮುಂದಾಗಿದ್ದೀರಿ’ ಎಂದು ಆಕ್ರೋಶಭರಿತರಾಗಿ ಮಾತನಾಡಿದರು. ಅವರ ಈ ಮಾತುಗಳಿಗೆ ಬಿಜೆಪಿ ಸದಸ್ಯರು ಪ್ರಬಲ ಆಕ್ಷೇಪ ಮಾಡಿ, ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದಾರೆ.

ಅದಾನಿ ಜತೆ…:
“ಪ್ರಧಾನಿ ಮೋದಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಶಾ ಮತ್ತು ಉದ್ಯಮಿ ಗೌತಮ್‌ ಅದಾನಿ ಅವರ ಮಾತುಗಳನ್ನು ಮಾತ್ರ ಕೇಳುತ್ತಾರೆ’ ಎಂದು ಹೇಳಿದ ರಾಹುಲ್‌, ಇಬ್ಬರು ವಿಮಾನದಲ್ಲಿ ಕುಳಿತಿದ್ದ ಹಳೆಯ ಫೋಟೋ ಪ್ರದರ್ಶಿಸಿದರು. ಆ ಸಂದರ್ಭದಲ್ಲಿ ಕೂಡ ಬಿಜೆಪಿ ಸದಸ್ಯರು ಗದ್ದಲ ಎಬ್ಬಿಸಿದರು. ಈ ಸಂದರ್ಭದಲ್ಲಿ ಸ್ಪೀಕರ್‌ ಓಂ ಬಿರ್ಲಾ ಸದನ ನಿಯಮಗಳನ್ನು ಉಲ್ಲೇಖೀಸಿ ಸಂಯಮ ಕಾಯ್ದುಕೊಂಡು ಮಾತನಾಡುವಂತೆ ಸೂಚಿಸಿದರು.

ಯಾತ್ರೆ ಇನ್ನೂ ನಿಂತಿಲ್ಲ:
ಭಾರತ್‌ ಜೋಡೋ ಯಾತ್ರೆ ಮುಕ್ತಾಯವಾಗಿಲ್ಲ ಎಂದು ಹೇಳಿದ ರಾಹುಲ್‌ ಗಾಂಧಿ, “ನಾನು ಯಾವ ಕಾರಣಕ್ಕಾಗಿ ಯಾತ್ರೆ ಶುರು ಮಾಡಿದ್ದೆ ಎನ್ನುವುದು ಆರಂಭದಲ್ಲಿ ಗೊತ್ತಾಗಲಿಲ್ಲ. ದೇಶವನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಅದನ್ನು ಆರಂಭಿಸಿದೆ” ಎಂದರು. ತಮ್ಮ ಲೋಕಸಭಾ ಸದಸ್ಯತ್ವವನ್ನು ಪುನಸ್ಥಾಪಿಸಿದ್ದಕ್ಕೆ ಸ್ಪೀಕರ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

“ಹಿಂದಿನ ಬಾರಿ ಮಾತನಾಡಿದ್ದ ವೇಳೆ ನಿಮಗೆ (ಸ್ಪೀಕರ್‌) ನೋವು ಉಂಟಾಗುವಂತೆ ಮಾತನಾಡಿದ್ದೆ. ಅದಾನಿಯವರನ್ನು ಕೇಂದ್ರೀಕರಿಸಿ ಮಾತನಾಡಿದ್ದೆ. ಹಿರಿಯ ನಾಯಕರಾಗಿರುವ ನಿಮಗೆ ಅದರಿಂದ ನೋವಾಗಿದೆ. ಅದಕ್ಕಾಗಿ ಕ್ಷಮೆ ಯಾಚಿಸುತ್ತೇನೆ’ ಎಂದರು. “ನಾನು ಯಾವತ್ತೂ ಸತ್ಯವನ್ನೇ ಮಾತನಾಡುತ್ತೇನೆ. ಇವತ್ತಿನ ನನ್ನ ಭಾಷಣದಿಂದ ಬಿಜೆಪಿಯ ಸ್ನೇಹಿತರು ಭಯಪಡಬೇಕಾಗಿಲ್ಲ. ಕರಾವಳಿಯಿಂದ ಕಾಶ್ಮೀರದ ಹಿಮಾಚ್ಛಾದಿತ ಪರ್ವತದ ವರೆಗೆ ನಾನು ನಡೆದಿದ್ದೇನೆ. ಆ ಸಂದರ್ಭದಲ್ಲಿ ನನ್ನ ಗುರಿ ಏನು ಎಂದು ಪ್ರಶ್ನಿಸಿದ್ದರು. ಅಂದ ಹಾಗೆ ಯಾತ್ರೆ ಇನ್ನೂ ಪೂರ್ತಿಯಾಗಿಲ್ಲ’ ಎಂದರು.

ರಾಹುಲ್‌ ಕೋಟ್‌ಗಳು
ಮಣಿಪುರದಲ್ಲಿ ಭಾರತ ಮಾತೆಯನ್ನು ನೀವು ಸಾಯಿಸಿದ್ದೀರಿ. ನಿಮ್ಮ ರಾಜಕೀಯ ಮಣಿಪುರವನ್ನು ಮಾತ್ರ ಕೊಂದಿಲ್ಲ, ಅದು ಭಾರತವನ್ನೇ ಆ ರಾಜ್ಯದಲ್ಲಿ ಬಲಿ ಪಡೆದಿದೆ. ನೀವು ಭಾರತ ಮಾತೆಯ ರಕ್ಷಕರಲ್ಲ. ನೀವು ಆಕೆಯ ಹಂತಕರು.

ರಾವಣ ಮೇಘನಾದ ಮತ್ತು ಕುಂಭಕರ್ಣನ ಮಾತುಗಳನ್ನು ಮಾತ್ರ ಕೇಳುತ್ತಿದ್ದ. ಅದೇ ರೀತಿ. ಮೋದಿಯವರು ಅದಾನಿ ಮತ್ತು ಅಮಿತ್‌ ಶಾ ಅವರ ಮಾತುಗಳನ್ನು ಮಾತ್ರ ಕೇಳುತ್ತಾರೆ.

ರಾಮ ರಾವಣನನ್ನು ಕೊಲ್ಲಲಿಲ್ಲ. ಹನುಮಂತ ಲಂಕೆಯನ್ನು ಸುಡಲಿಲ್ಲ. ಎರಡೂ ಘಟನೆಗಳು ಉಂಟಾದದ್ದು ಆತನ ಅಹಂಕಾರದಿಂದ.

ನೀವು ದೇಶವನ್ನು ಬೆಂಕಿಗೆ ಒಡ್ಡಲು ಮುಂದಾಗಿದ್ದೀರಿ. ಮಣಿಪುರದಲ್ಲಿ ಮೊದಲ ಬಾರಿಗೆ ಕಿಚ್ಚು ಹಚ್ಚಲು ಶುರು ಮಾಡಿದ್ದೀರಿ. ನಂತರ ಹರ್ಯಾಣದಲ್ಲಿ ಮುಂದುವರಿಸಿದ್ದೀರಿ. ಈಗ ದೇಶಕ್ಕೇ ಕಿಚ್ಚು ಹಚ್ಚಲು ಸಿದ್ಧತೆ ನಡೆಸಿದ್ದೀರಿ.

ನನ್ನ ತಾಯಿಯೊಬ್ಬರು ಇಲ್ಲಿ ಕುಳಿತಿದ್ದಾರೆ. ಆದರೆ, ನನ್ನ ಮತ್ತೂಬ್ಬ ತಾಯಿಯನ್ನು ಮಣಿಪುರದಲ್ಲಿ ಕೊಂದಿದ್ದೀರಿ. ಈ ದೇಶದ ಸೇನೆಗೆ ಮಾತ್ರ ಅಲ್ಲಿ ಶಾಂತಿ ಸ್ಥಾಪಿಸಲು ಸಾಧ್ಯವಾಗಿದೆ. ನೀವು ಈ ಪ್ರಯತ್ನದಲ್ಲಿ ಇಲ್ಲ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.