ಭಟ್ಕಳ : ಕಂಟೈನರ್ ಗೆ ಹಿಂಬದಿಯಿಂದ ಢಿಕ್ಕಿಯಾದ ಅಂಬುಲೆನ್ಸ್ ;ರೋಗಿ ಪಾರು
Team Udayavani, Jan 21, 2022, 8:37 PM IST
ಭಟ್ಕಳ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಜಾಲಿ ಕ್ರಾಸ್ ಬಳಿಯಲ್ಲಿ ಕಾರವಾರದಿಂದ ಮಣಿಪಾಲದ ಕಡೆಗೆ ಹೋಗುತ್ತಿದ್ದ ಅಂಬುಲೆನ್ಸ್ ಹಾಗೂ ಕಂಟೈನರ್ ಲಾರಿಯ ನಡುವೆ ಢಿಕ್ಕಿ ಸಂಭವಿಸಿದ್ದು ಅಂಬುಲೆನ್ಸ್ ವಾಹನದ ಎದುರು ಭಾಗ ಸಂಪೂರ್ಣ ಜಖಂ ಗೊಂಡಿದೆ.
ಅದ್ರಷ್ಟವಷಾತ್ ಅಂಬುಲೆನ್ಸ್ ಚಾಲಕ, ಅಂಬುಲೆನ್ಸ್ ನಲ್ಲಿದ್ದ ರೋಗಿ ಹಾಗೂ ಅವರ ಸಂಬಂಧಿಗಳು ಕೂಡಾ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.
ಕಾರವಾರದಿಂದ ಹೃದಯ ಸಂಬಂಧಿ ರೋಗಿಯೋರ್ವರನ್ನು ಕರೆದುಕೊಂಡು ಮಣಿಪಾಲದ ಕಡೆಗೆ ಹೋಗುತ್ತಿದ್ದ ಅಂಬುಲೆನ್ಸ್ ಜಾಲಿ ಕ್ರಾಸ್ ಹತ್ತಿರ ತಲುಪುತ್ತಿದ್ದಂತೆಯೇ ಎದುರುಗಡೆ ಹೋಗುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಂಟೈನರ್ ಲಾರಿಯು ಜಾಲಿ ಕ್ರಾಸ್ ಹತ್ತಿರ ಬರುತ್ತಿದ್ದಂತೆಯೇ ಲಾರಿಯ ಎದುರುಗಡೆಯಲ್ಲಿ ಕಾರೊಂದು ಎದುರುಗಡೆಯಲ್ಲಿ ಬಂದು ತಿರುವು ಪಡೆದುಕೊಂಡು ಹೋಗಿದ್ದರಿಂದ ಲಾರಿ ಚಾಲಕ ಬ್ರೇಕ್ ಹಾಕಿದ್ದು ಹಿಂಬದಿಯಿಂದ ಬರುತ್ತಿದ್ದ ಅಂಬುಲೆನ್ಸ್ ವಾಹನ ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಢಿಕ್ಕಿಯ ರಭಸಕ್ಕೆ ಅಂಬುಲೆನ್ಸ್ನ ಎದುರುಗಡೆಯಿರುವ ಮಡ್ಗಾರ್ಡ್ ಲಾರಿಯ ಒಳಕ್ಕೆ ಹೊಕ್ಕು ಲಾರಿಗೆ ಹಿಂಭಾಗಕ್ಕೆ ಸಿಕ್ಕಿ ಹಾಕಿ ಕೊಂಡಿತ್ತು.
ತತ್ ಕ್ಷಣ ಅಂಬುಲೆನ್ಸ್ ನಲ್ಲಿದ್ದ ರೋಗಿಯನ್ನು ಇನ್ನೊಂದು ಅಂಬುಲೆನ್ಸ್ ಮೂಲಕ ಮಣಿಪಾಲಕ್ಕೆ ಕಳುಹಿಸಲಾಯಿತು. ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ