Bidar: ಭೀಮಣ್ಣ ಖಂಡ್ರೆ ಹೋರಾಟದ ಬದುಕು ಸ್ಫೂರ್ತಿದಾಯಕ- ಸಿಎಂ ಬಣ್ಣನೆ

ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಕಾರ್ಯಕ್ರಮ

Team Udayavani, Dec 2, 2023, 11:18 PM IST

SIDDARAMAYYA CM

ಬೀದರ್‌: ಸಮಾಜಮುಖೀ ಕೆಲಸಗಳ ಮೂಲಕ ತುಂಬು ಮತ್ತು ಸಾರ್ಥಕ ಜೀವನ ನಡೆಸಿದ ಡಾ| ಭೀಮಣ್ಣ ಖಂಡ್ರೆಯವರು ನಮಗೆಲ್ಲ ರಿಗೂ ಪ್ರೇರಣೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾಲ್ಕಿಯಲ್ಲಿ ಶನಿವಾರ ಹಮ್ಮಿ ಕೊಂಡ ಮಾಜಿ ಸಚಿವ ಭೀಮಣ್ಣ ಖಂಡ್ರೆಯವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ “ಲೋಕನಾಯಕ’ ಅಭಿನಂದನ ಗ್ರಂಥ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಪ್ರತಿ ವ್ಯಕ್ತಿ ಹುಟ್ಟಿದ ಮೇಲೆ ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು. ಹುಟ್ಟು-ಸಾವಿನ ಮಧ್ಯೆ ಸಮಾಜದ ಪರ ಕೆಲಸ ಮಾಡುವವರನ್ನು ಜನ ಸ್ಮರಿಸುತ್ತಾರೆ. ಅಂಥ ಸಾರ್ಥಕ ಬದುಕು ಖಂಡ್ರೆ ಅವರದ್ದಾಗಿದೆ ಎಂದು ಬಣ್ಣಿಸಿದರು.

ಡಾ| ಭೀಮಣ್ಣ ಹುಟ್ಟು ಹೋರಾಟ ಗಾರರು. ಸಹಕಾರ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಕೆಲಸ ಮಾಡಿದ್ದಾರೆ. ಗಡಿ ಭಾಗ ಬೀದರ ಜಿಲ್ಲೆ ಇಂದು ಕರ್ನಾಟಕದಲ್ಲಿ ಉಳಿಯುವಲ್ಲಿ ಅವರ ಪರಿಶ್ರಮವೂ ಹೆಚ್ಚಿದೆ. ಜತೆಗೆ ಇಂದಿನ ಕಲ್ಯಾಣ ಕರ್ನಾಟಕ ಭಾಗದ ವಿಮೋಚನ ಚಳವಳಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಖಂಡ್ರೆಯವರ ಹೋರಾಟ ನಮ್ಮೆಲ್ಲರಿಗೂ ಸ್ಫೂರ್ತಿದಾಯಕ ಎಂದರು.

ಅಭಿನಂದನಾ ಗ್ರಂಥ ಎಂಬುದು ನಾವು ಜೀವನದಲ್ಲಿ ಮಾಡಿರುವ ಸತ್ಕಾರ್ಯಗಳಿಗೆ ಪ್ರತಿಬಿಂಬವಾಗಿದೆ. “ಲೋಕನಾಯಕ’ ಗ್ರಂಥದಲ್ಲಿ ಡಾ| ಭೀಮಣ್ಣ ಅವರ ವ್ಯಕ್ತಿತ್ವ ಹಿಡಿದಿಡ
ಲಾಗಿದೆ. ಖಂಡ್ರೆಯವರ ಒಡನಾಡಿಗಳು, ಅವರ ಸಮಾಜ ಸೇವೆ, ಸಾಧನೆಗಳು ಮತ್ತು ಬಸವತತ್ವ ಪ್ರಚಾರ ಹೀಗೆ ಹಲವು ವಿಷಯಗಳನ್ನು ಲೇಖನಗಳ ಮೂಲಕ ಪರಿಚಯಿಸಿದ್ದಾರೆ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸಿದರು. ಸುತ್ತೂರು ಶ್ರೀಗಳು, ಸಿರಿಗೆರೆ ಶ್ರೀಗಳು, ತುಮಕೂರು ಶ್ರೀಗಳು, ಶ್ರೀಶೈಲ ಜಗದ್ಗುರುಗಳು, ಭಾಲ್ಕಿಯ ಡಾ| ಬಸವಲಿಂಗ ಪಟ್ಟದ್ದೇವರು, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್‌, ವೀರಪ್ಪ ಮೊಯ್ಲಿ, ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಗೋರು ಚನ್ನಬಸಪ್ಪ, ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್‌, ಸಚಿವರಾದ ಎಚ್‌.ಕೆ ಪಾಟೀಲ, ಕೆ.ಎಚ್‌ ಮುನಿಯಪ್ಪ, ಎಂ.ಬಿ. ಪಾಟೀಲ, ಕೆ.ಜೆ. ಜಾರ್ಜ್‌, ಎಚ್‌.ಸಿ ಮಹಾದೇವಪ್ಪ, ಎಸ್‌.ಎಸ್‌. ಮಲ್ಲಿಕಾರ್ಜುನ, ಕೆ.ಎನ್‌. ರಾಜಣ್ಣ, ಶರಣಬಸಪ್ಪ ದರ್ಶನಾಪುರ, ಡಾ| ಶರಣಪ್ರಕಾಶ ಪಾಟೀಲ, ಜಮೀರ್‌ ಅಹ್ಮದ್‌ ಖಾನ್‌, ರಹೀಮ್‌ ಖಾನ್‌, ಆರ್‌.ಬಿ.ತಿಮ್ಮಾಪುರ, ಎನ್‌.ಎಸ್‌.
ಭೋಸರಾಜು ಇನ್ನಿತರರು ಪಾಲ್ಗೊಂಡಿದ್ದರು.

ಖಂಡ್ರೆ ಮಹಾನ್‌ ವ್ಯಕ್ತಿ: ಖರ್ಗೆ
ರಾಜಕಾರಣಿಗಳು ಅರವತ್ತು-ಎಪ್ಪತ್ತು ವರ್ಷ ಬದುಕುವುದೇ ಕಷ್ಟ. ಆದರೆ ಹೋರಾಟಮಯ ಜೀವನದ ಮೂಲಕ ಶತಾಯುಷಿಗಳಾಗಿ ರಾಜಕೀಯದ ಗುರಿ ಸಾ ಧಿಸಿದ ಡಾ| ಭೀಮಣ್ಣ ಖಂಡ್ರೆ ಅವರು ಮಹಾನ್‌ ವ್ಯಕ್ತಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಣ್ಣಿಸಿದರು.

ಹಲವು ಸಾಮಾಜಿಕ ಕಾರ್ಯಕ್ರಮ ಮತ್ತು ರಾಜಕೀಯ ಕೆಲಸಗಳ ಮೂಲಕ ಖಂಡ್ರೆಯವರು ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಸಮಾಜದವರನ್ನು ಒಗ್ಗೂಡಿಸುವ ಮಹತ್ವದ ಕಾರ್ಯ ಮಾಡಿದ್ದಾರೆ. ಯಾವುದೇ ಕೆಲಸವನ್ನು ಕೈಗೆತ್ತಿಕೊಂಡರೆ ಅದನ್ನು ಪೂರ್ಣಗೊಳಿಸುವವರೆಗೆ ಸುಮ್ಮನೆ ಕೂಡದಂತಹ ಛಲವಾದಿ ವ್ಯಕ್ತಿತ್ವ ಅವರದ್ದು ಎಂದರು.
ಖಂಡ್ರೆಯವರು ಇನ್ನೂ ಸು ದೀರ್ಘ‌ ಕಾಲ ಆರೋಗ್ಯವಂತರಾಗಿ ಬದುಕಲಿ, ಅವರಿಂದ ಮತ್ತಷ್ಟು ಸಮಾಜ ಸೇವಾ ಕಾರ್ಯಗಳು ಮುಂದುವರಿಯಲಿ ಎಂದು ಶುಭ ಹಾರೈಸಿದರು.

ಟಾಪ್ ನ್ಯೂಸ್

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.