ಇಂದು ಬೃಹತ್‌ ಜನಸ್ಪಂದನ- 10 ಸಾವಿರ ಜನರಿಗೆ ವ್ಯವಸ್ಥೆ , ಇಡೀ ದಿನ ಅಹವಾಲು ಆಲಿಸಲಿರುವ ಸಿಎಂ


Team Udayavani, Feb 8, 2024, 12:44 AM IST

cm jana

ಬೆಂಗಳೂರು: ಪ್ರತಿ ಮೂರು ತಿಂಗಳಿಗೊಮ್ಮೆ ಜನಸ್ಪಂದನ ನಡೆಸುವುದಾಗಿ ಘೋಷಿಸಿದ್ದ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಗುರುವಾರ ವಿಧಾನಸೌಧದ ಮೆಟ್ಟಿಲುಗಳ ಬಳಿ ರಾಜ್ಯಮಟ್ಟದ ಬೃಹತ್‌ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಇದು ವಿಧಾನಸೌಧದ ಆವರಣದಲ್ಲಿ ನಡೆಯಲಿರುವ ಮೊದಲ ಜನಸ್ಪಂದನ.

ನ. 27ರಂದು ಗೃಹಕಚೇರಿ “ಕೃಷ್ಣಾ’ದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದ ಸಿಎಂ, ಐಪಿಜಿಆರ್‌ಎಸ್‌ ತಂತ್ರಾಂಶದ ಮೂಲಕ 2,862, ನೇರ ವಾಗಿ 950 ಸಹಿತ ಒಟ್ಟು 4,030 ಅರ್ಜಿಗಳನ್ನು ಸ್ವೀಕರಿಸಿದ್ದರು. ಈ ಪೈಕಿ 3,738 ಅರ್ಜಿಗಳು ವಿಲೇವಾರಿ ಆಗಿವೆ. ಈ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಮಸ್ಯೆಗಳನ್ನು ಹೊತ್ತು ಬಂದಿದ್ದರಿಂದ ಗೃಹ ಕಚೇರಿ ಆವರಣದಲ್ಲಿ ಸ್ಥಳಾಭಾವ ಎದುರಾಗಿತ್ತು. ಆದ್ದರಿಂದ ಈ ಬಾರಿ ವಿಧಾನಸೌಧದ ಆವರಣದಲ್ಲಿ ನಡೆಸಲಾಗುತ್ತಿದೆ.

ಇಲಾಖಾವಾರು ಕೌಂಟರ್‌ ಆರಂಭ
ಫೆ. 8ರ ಬೆಳಗ್ಗೆ 10.30ರಿಂದ ಸಂಜೆ 5ರ ವರೆಗೂ ಜನಸ್ಪಂದನ ನಡೆಯಲಿದೆ. ಅದಕ್ಕಾಗಿ ವಿಧಾನಸೌಧ ಆವರಣದಲ್ಲಿ ಟೆಂಟ್‌ಗಳನ್ನು ನಿರ್ಮಿಸಲಾಗಿದ್ದು, ಇಲಾಖಾವಾರು ಕೌಂಟರ್‌ಗಳನ್ನು ತೆರೆಯಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರ ಮನವಿ ಸ್ವೀಕರಿಸಲಾಗುತ್ತದೆ. ಅದಕ್ಕಾಗಿ ಇಲಾಖಾವಾರು ಅಧಿಕಾರಿಗಳನ್ನೂ ನಿಯೋಜಿಸ ಲಾಗಿದೆ. ಜನರು ಹೆಚ್ಚಿದ್ದರೆ ರಾತ್ರಿಯವರೆಗೂ ಜನ ಸ್ಪಂದನ ಮುಂದುವರಿಯುವ ಸಾಧ್ಯತೆಗಳಿವೆ.

ಸಾರ್ವಜನಿಕರಿಗೆ ಮಾಹಿತಿ ಕೇಂದ್ರ

ಜನಸ್ಪಂದನ ಸ್ಥಳದಲ್ಲಿ ಎಲ್ಲ ಇಲಾಖೆಗಳ ಸ್ಟಾಲ್‌ಗ‌ಳನ್ನು ತೆರೆಯಲಾಗಿದೆ. ಪ್ರತಿ ಸ್ಟಾಲ್‌ಗ‌ಳಿಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾ ದರ್ಶನಕ್ಕಾಗಿ ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮ ಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್‌ಗೆಂದು ನಿರ್ದೇಶಿಸಿ ಕಳಿಸಬೇಕು. ಸಾರ್ವಜನಿಕರ ದೂರುಗಳನ್ನು ಹೀಗೆ ವಿಂಗಡಿಸಲು ಅನುಭವಿ ಅಧಿಕಾರಿ-ಸಿಬಂದಿಯ ವಿಚಾರಣ ಕೌಂಟರ್‌ ತೆರೆಯಲಾಗಿದೆ. ಅಲ್ಲಿ ನಾಗರಿಕರ ಮೊಬೈಲ್‌ ನಂಬರ್‌ ಸಹಿತ ಪ್ರಾಥಮಿಕ ವಿವರ, ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್‌ ನಂಬರ್‌ ನಮೂದಿಸಲಾಗುವುದು.

ಬಿಎಂಟಿಸಿಯಿಂದ ಉಚಿತ ಸೇವೆ
ಜನಸ್ಪಂದನ ಕಾರ್ಯಕ್ರಮಕ್ಕಾಗಿ ಮೆಜೆಸ್ಟಿಕ್‌ನಿಂದ ವಿಧಾನಸೌಧಕ್ಕೆ ಬರುವ ಸಾರ್ವಜನಿಕರಿಗೆ ಬಿಎಂಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ. ಜನತಾದರ್ಶನದ ಸ್ಥಳದಲ್ಲಿ 5-10 ಸಾವಿರ ಜನರಿಗೆ ಆಹಾರ, ಕುಡಿಯುವ ನೀರು, ಶೌಚಾಲಯದ ಸೌಕರ್ಯವನ್ನೂ ಒದಗಿಸಲಾಗಿದೆ. ವೃದ್ಧರು, ಅಂಗವಿಕಲರು, ಗರ್ಭಿಣಿಯರು, ಮಕ್ಕಳೊಂದಿಗೆ ಬಂದ ತಾಯಂದಿರಿಗೆ ಬ್ಯಾಟರಿ ಚಾಲಿತ ವಾಹನ ಹಾಗೂ ವೀಲ್‌ಚೇರ್‌ ವ್ಯವಸ್ಥೆ ಇರಲಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.