Bihar: ಕಣ್ಣುಗುಡ್ಡೆ ಕಿತ್ತು, ಮರ್ಮಾಂಗ ಕತ್ತರಿಸಿ, ಗುಂಡಿಕ್ಕಿ ಅರ್ಚಕನ ಹತ್ಯೆ
ರೊಚ್ಚಿಗೆದ್ದ ಜನ - ಪೊಲೀಸ್ ವಾಹನಗಳಿಗೆ ಬೆಂಕಿ
Team Udayavani, Dec 18, 2023, 12:48 AM IST
ಗೋಪಾಲ್ಗಂಜ್: ಬಿಹಾರದ ಗೋಪಾಲ್ಗಂಜ್ನಲ್ಲಿ ಕಳೆದ 5 ದಿನಗಳಿಂದ ನಾಪತ್ತೆಯಾಗಿದ್ದ ಶಿವದೇಗುಲದ ಅರ್ಚಕರೊಬ್ಬರ ಮೃತದೇಹ ರವಿವಾರ ಕಣ್ಣು ಗುಡ್ಡೆ ಕಿತ್ತುಹಾಕಿದ, ಮರ್ಮಾಂಗ ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ದಾನಾಪುರ ಗ್ರಾಮದ ದೇಗುಲದ ಅರ್ಚಕ ಮನೋಜ್ ಕುಮಾರ್ ಮೃತದೇಹ ಪತ್ತೆಯಾಗುತ್ತಿದ್ದಂತೆ, ಪೊಲೀಸರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಿ ಸ್ಥಳೀಯರು, ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಜತೆಗೆ ಪೊಲೀಸರ ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ಹಿಂಸೆಗೆ ತಿರುಗುತ್ತಿದ್ದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ.
ಮೃತ ಅರ್ಚಕನ ಸಹೋದರ ಸ್ಥಳೀಯ ಬಿಜೆಪಿ ಮುಖಂಡರಾಗಿದ್ದು, ಬಿಜೆಪಿಯು ನಿತೀಶ್ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದೆ.
ರಾಜ್ಯದಲ್ಲಿ ಜಂಗಲ್ರಾಜ್ ಮರಳಿದೆ. ಬಿಹಾರದಲ್ಲಿ ಪೂಜಾರಿಯೊಬ್ಬರನ್ನು ಐಸಿಸ್ ಮಾದರಿಯಲ್ಲಿ ಕೊಲ್ಲಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ