A.P: ಆಂಧ್ರದಲ್ಲಿ ಬಿಜೆಪಿ ಜೊತೆ ಚಂದ್ರಬಾಬು, ಪವನ್ ಕಲ್ಯಾಣ್ ಮೈತ್ರಿ?
ಬಿಜೆಪಿ, ಟಿಡಿಪಿ, ಜನಸೇನೆ ಒಂದಾಗಿ ಸ್ಪರ್ಧೆ? -ಮುಂದಿನವಾರ ಬಿಜೆಪಿ-ಪವನ್ ಮಾತುಕತೆ?
Team Udayavani, Feb 8, 2024, 9:47 PM IST
ನವದೆಹಲಿ: ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷ (ಟಿಡಿಪಿ)ದ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಬುಧವಾರ ರಾತ್ರಿ ಬಿಜೆಪಿ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿದ್ದರು. ಅದರ ಬೆನ್ನಲ್ಲೇ ಆಂಧ್ರದಲ್ಲಿ ಟಿಡಿಪಿ, ಬಿಜೆಪಿ, ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನೆ ಪಕ್ಷಗಳು ಒಗ್ಗೂಡಿ ಲೋಕಸಭಾ ಚುನಾವಣೆ ಎದುರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.
ಮೂಲಗಳ ಪ್ರಕಾರ, ಮುಂದಿನ ಗುರುವಾರ ಪವನ್ ಕಲ್ಯಾಣ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಬಿಜೆಪಿ ವರಿಷ್ಠರ ಜತೆಗೂ ಮಾತುಕತೆ ನಡೆಸಲಿದ್ದಾರೆ. ಆ ಬಳಿಕ ಟಿಡಿಪಿ ಜತೆಗಿನ ಜನಸೇನೆ ಮೈತ್ರಿ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ ಎನ್ನಲಾಗಿದೆ. ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರದ ಕಟು ಟೀಕಾಕಾರರಾಗಿರುವ ಪವನ್, ಜಗನ್ ಸರ್ಕಾರವನ್ನು ಕೆಳಗಿಳಿಸುವ ಯಾವ ಪಕ್ಷದೊಂದಿಗಾದರೂ ಮೈತ್ರಿ ಮಾಡಿಕೊಳ್ಳಬಲ್ಲೆ ಎಂದು ಘೋಷಿಸಿದ್ದರು .
ಅಸ್ಸಾಂನಲ್ಲಿ “ಕೈ’ ಬಿಟ್ಟ ಆಪ್: ಇಂಡಿಯಾ ಒಕ್ಕೂಟದಿಂದೇ ಒಂದೊಂದೇ ಪಕ್ಷಗಳು ಕಳಚಿಕೊಳ್ಳುತ್ತಿವೆ. ಇದೀಗ ಅಸ್ಸಾಂನಲ್ಲಿ 3 ಲೋಕಸಭೆ ಸ್ಥಾನಗಳಿಗೆ ಆಪ್ ಏಕಪಕ್ಷೀಯವಾಗಿ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್ನೊಂದಿಗೆ ಮಾತುಕತೆ ನಡೆಸಿ ಸುಸ್ತಾಗಿ ಈ ನಿರ್ಧಾರ ಮಾಡಲಾಗಿದೆ ಎಂದು ಆಪ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ