ಮಹಾನಾಯಕ ಆಗಲು ಹೊರಟವರು ಖಳನಾಯಕನಾಗಿದ್ದು ಕಾಂಗ್ರೆಸ್ ನ ನೈತಿಕ ದಿವಾಳಿತನ: ಬಿಜೆಪಿ
Team Udayavani, Mar 29, 2021, 4:33 PM IST
ಬೆಂಗಳೂರು: ಒಬ್ಬ ಅಮಾಯಕ ಹೆಣ್ಣು ಮಗಳನ್ನು ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಬಳಸಿಕೊಂಡು ರಾಜ್ಯದ “ಮಹಾ ನಾಯಕ” ಆಗಲು ಹೊರಟ “ಜೈಲು ಹಕ್ಕಿ” ಇಂದು “ಖಳನಾಯಕ” ಆಗಿರುವುದು ಕಾಂಗ್ರೆಸ್ ಪಕ್ಷದ ನೈತಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಬಿಜೆಪಿ ಟೀಕೆ ಮಾಡಿದೆ.
ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿಯು ಟ್ವೀಟ್ ವಾರ್ ಮುಂದುವರಿಸಿದೆ.
ಇದನ್ನೂ ಓದಿ:ಸಿದ್ದರಾಮಯ್ಯ ಕೂಡಲೇ ಜನರ ಕ್ಷಮೆಯಾಚಿಸಬೇಕು: ಶ್ರೀರಾಮುಲು ವಾಗ್ದಾಳಿ
ಸೆಕ್ಷನ್ ಸಿದ್ದರಾಮಯ್ಯನವರೇ ನಿಮ್ಮ ನೇತೃತ್ವದಲ್ಲಿ ಸತ್ಯ ಶೋಧನಾ ಸಮಿತಿ ರಚನೆಯಾದರೆ ಒಂದೇ ಕಲ್ಲಿನಲ್ಲಿ ಎರಡು ಹಣ್ಣು ಕೆಡವಲು ಸಾಧ್ಯವಿದೆ. ಒಂದು, ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುತ್ತದೆ. ಇನ್ನೊಂದು, ಡಿಕೆ ಶಿವಕಮಾರ್ ನಡೆಸಿದ ಷಡ್ಯಂತ್ರವನ್ನು ಸಾಬೀತುಪಡಿಸಬಹುದು. ಒಬ್ಬ ಪ್ರತಿಸ್ಪರ್ಧಿಯನ್ನು ಕೆಡವಿದ ಸಾಧನೆ ನಿಮ್ಮದಾಗಲಿದೆ. ಏನಂತೀರಿ ಎಂದು ಟೀಕಿಸಿದೆ.
ಸೆಕ್ಷನ್ ಸ್ಪೆಷಲಿಸ್ಟ್ ಸಿದ್ದರಾಮಯ್ಯನವರೇ ಸಂತ್ರಸ್ಥ ಯುವತಿಯ ಪೋಷಕರು ನೇರವಾಗಿ ನಿಮ್ಮ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮೇಲೆ ಬೊಟ್ಟು ಮಾಡಿ, ಸಂತ್ರಸ್ಥೆಯನ್ನು ಒತ್ತೆಯಾಗಿರಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಿರುವಾಗ ಯುವತಿಗೆ ಅಪಾಯ ಎದುರಾದರೆ ಕಾನೂನಿನ ಪ್ರಕಾರ ಡಿಕೆಶಿ ಅವರು ಹೊಣೆ ಅಲ್ಲವೇ? ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಇದನ್ನೂ ಓದಿ: ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿ: ಮಾಜಿ ಸಚಿವ ಡಾ.ಶರಣಪ್ರಕಾಶ ಆಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್