ವಿದ್ಯಾರ್ಥಿಗಳಿಗೆ ಶಾಲು, ಪೇಟ ಕೊಟ್ಟವರು ಬಿಜೆಪಿಗರು: ಎಚ್. ಆಂಜನೇಯ


Team Udayavani, Feb 9, 2022, 6:56 PM IST

1-fas

ಕೊಪ್ಪಳ: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಬಿಜೆಪಿಗರೇ ಪ್ರಚೋದನೆ ನೀಡಿ ಕೇಸರಿ ಶಾಲು, ಪೇಟ ಕೊಟ್ಟು ಗಲಾಟೆ ಮಾಡಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಅವರು ಹೇಳಿದರು.

ನಗರದ ಮೀಡಿಯಾ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ೩ ದಶಕದಲ್ಲಿ ವಿದ್ಯಾರ್ಥಿಗಳು ಬೀದಿಗೆ ಇಳಿದು ಗಲಾಟೆ ಮಾಡಿಲ್ಲ. ಈ ಹಿಂದೆ ಕಾಲೇಜು ಚುನಾವಣೆಗಳು ನಡೆದಾಗ ಗಲಾಟೆ ನಡೆಯುತ್ತಿದ್ದವು. ಅದನ್ನು ರದ್ದು ಮಾಡಿದಾಗಿನಿಂದ ಗಲಾಟೆ ನಡೆದಿಲ್ಲ. ಬಿಜೆಪಿಗರೇ ಪ್ರಚೋದನೆ ನೀಡಿ ಹಿಜಾಬ್ ವಿಚಾರ ಮುನ್ನೆಲೆಗೆ ತಂದಿದ್ದಾರೆ. ಗಲಾಟೆಯಲ್ಲಿ ಕಾಂಗ್ರೆಸ್ ಕುಮ್ಮಕ್ಕಿದೆ ಎಂದು ಅವರು ಆರೋಪಿಸಿದ್ದಾರೆ. ಆದರೆ ಅದೆಲ್ಲವೂ ಸುಳ್ಳು ಎಂದರು.

ಎರಡು ವರ್ಷದಿಂದ ಕೊರೊನಾದಿಂದ ಜನರು ಪ್ರಾಣ ಬಿಟ್ಟಿದ್ದಾರೆ. ರಾಜ್ಯ, ಕೇಂದ್ರ ಸರ್ಕಾರವು ಜನ ವಿರೋಧಿ ನೀತಿ ಅನುಸರಿಸಿವೆ. ಕೊರೊನಾ ಬಂಡವಾಳ ಆಗಿಬಿಟ್ಟಿದೆ. ಯಾರೂ ಪ್ರತಿಭಟನೆ, ಅಕ್ರಮ ಬಯಲಿಗೆಳೆಯದಂತೆ ವ್ಯವಸ್ಥಿತವಾಗಿ ಬಂದ್ ಮಾಡಿಸಿದ್ದಾರೆ. ಕೇಂದ್ರದ ಬಗ್ಗೆ ಮಾತನಾಡಿದರೆ, ಅವರನ್ನ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಇನ್ಕಮ್ ಟ್ಯಾಕ್ಸ್, ಇಡಿ, ಸಿಬಿಐ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅಘೋಷಿತ ತುರ್ತು ಪರಿಸ್ಥಿತಿ ಹೇರಿದ್ದಾರೆ ಎಂದರು.

ಇದನ್ನೂ ಓದಿ : ನಾನು ಎಷ್ಟು ಬೇಕಾದರೂ ಕೇಸರಿ ಶಾಲು ಹಂಚ್ತೇನೆ: ಡಿಕೆಶಿಗೆ ಈಶ್ವರಪ್ಪ ತಿರುಗೇಟು

ರಾಜ್ಯದಲ್ಲಿ ಲಂಚಗುಳಿತನ ಹೆಚ್ಚಿದೆ. ನಮ್ಮ ಸರ್ಕಾರ ಟೆನ್ ಪರ್ಸೆಂಟ್ ಸರ್ಕಾರ ಎಂದು ಟೀಕೆ ಮಾಡಿದ್ರು. ಯಾವ ಆಧಾರದ ಮೇಲೆ ಹೇಳಿದರು. ತನಿಖಾ ತಂಡದ ಮೂಲಕ ಹಗರಣ ಬಯಲಿಗೆಳೆದು ಹೇಳಿದ್ದರೆ ಒಪ್ಪಬಹುದಿತ್ತು. ಇಂದು ಗುತ್ತಿಗೆದಾರರು ರೋಸಿ ಹೋಗಿದ್ದಾರೆ. ಗುತ್ತಿಗೆ ಅರ್ಜಿ ಸಲ್ಲಿಸುವ ಮೊದಲು ಪರ್ಸೆಂಟೇಜ್ ಮಾತಾಡ್ತಿದ್ದಾರೆ ಎಂದರು.

ರಾಜ್ಯದಲ್ಲಿ ವಾಮಾ ಮಾರ್ಗದಲ್ಲಿ ಸರ್ಕಾರ ರಚನೆಯಾಗಿದೆ. ಯಾವು ನೀತಿ, ನಿಯಮಗಳಿಲ್ಲ. ಜನಪ್ರತಿನಿಧಿಗಳನ್ನು ಖರೀದಿಸಿ ಸರ್ಕಾರ ಮಾಡಿದರು. ಬಿಎಸ್ವೈ ಕಷ್ಟಪಟ್ಟು ಸರ್ಕಾರ ತಂದರು. ಆದರೆ, ಅವರನ್ನೇ ಸಿಎಂ ಸ್ಥಾನದಿಂದ ಇಳಿಸಿದರು. ಇದು ಆಂತರಿಕ ಪ್ರಜಾಪ್ರಭುತ್ವನಾ ? ಆದರೆ, ನಮ್ಮ ಪಕ್ಷದ ಆಂತರಿಕ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡ್ತಾರೆ. ಅವರು ದೇಶ ಮಾರಾಟಕ್ಕಿಟ್ಟಿದ್ದಾರೆ. ಯಾವುದನ್ನು ಅವರು ಕಟ್ಟಿಲ್ಲ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಘೋಷಣೆ ಹೈಕಮಾಂಡ್‌ಗೆ ಬಿಟ್ಟಿದ್ದು. ಪಕ್ಷ ಬಿಟ್ಟು ಹೋದವರನ್ನ ಸೇರಿಸಿಕೊಳ್ಳುವುದಿಲ್ಲ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ ಎಂದರಲ್ಲದೇ, ತೆಲಂಗಾಣ ಸಿಎಂ ಸಂವಿಧಾನ ಬದಲಾವಣೆ ಹೇಳಿಕೆ ಖಂಡಿಸುತ್ತೇವೆ. ಸಂವಿಧಾನ ಬದಲಾದರೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ರಕ್ತದ ಕೋಡಿ ಹರಿಯುತ್ತದೆ ಎಂದರು.

ಕಾಂಗ್ರೆಸ್ ಸದಸ್ಯತ್ವ ಅಭಿಯಾನ
ಸದಸ್ಯತ್ವ ಅಭಿಯಾನ ಆರಂಭಿಸಿದ್ದೇವೆ. ಡಿಜಿಟಲ್ ಮಾದರಿಯಲ್ಲಿ ಆಪ್ ಮೂಲಕ ಅಭಿಯಾನ ಆರಂಭಿಸಿದ್ದೇವೆ. ಮಾ.31  ವರೆಗೆ ಪ್ರತಿ ಮತಗಟ್ಟೆಯಲ್ಲಿ ಕನಿಷ್ಠ100  ಸದಸ್ಯರನ್ನ ಮಾಡಬೇಕು ಎಂದು ಗುರಿಯಿದೆ. ಮನೆ ಮನೆ ಭೇಟಿ ನೀಡಿ ಸದಸ್ಯತ್ವ ಮಾಡುತ್ತೇವೆ. ಜಿಲ್ಲೆಯಲ್ಲಿ ಪಾರ್ಟಿ ಗಟ್ಟಿಯಾಗಿದೆ. ನಮ್ಮೆಲ್ಲ ನಾಯಕರು ತಮ್ಮ ಕ್ಷೇತ್ರದಲ್ಲಿ ಸದಸ್ಯತ್ವ ಮಾಡಲಿದ್ದಾರೆ. ಪ್ರತಿಯೊಬ್ಬರಿಂದ 5 ರೂ. ಪಡೆದು ಸದಸ್ಯತ್ವ ಪಡೆಯಬೇಕು. ಬೂತ್ ಗೆ ಒಬ್ಬ ಕಾಯಂ ಅಧ್ಯಕ್ಷ, ಕಾರ್ಯದರ್ಶಿ, ಏಜೆಂಟ್ ಮಾಡುತ್ತೇವೆ ಎಂದು ಎಚ್.ಆಂಜಿನೇಯ ಅವರು ತಿಳಿಸಿದರು.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.