ಮಹಿಳಾ ಮತದಾರರ ಮೇಲೆ ಬಿಜೆಪಿ ಕಣ್ಣು!

"ಕಮಲ ದೂತ' ಅಭಿಯಾನಕ್ಕೆ ಮುಂದಾದ ಪಕ್ಷ ; ಕರ್ನಾಟಕ ಸೇರಿ 9 ಚುನಾವಣೆಗಳೇ ಗುರಿ

Team Udayavani, Feb 8, 2023, 7:30 AM IST

ಮಹಿಳಾ ಮತದಾರರ ಮೇಲೆ ಬಿಜೆಪಿ ಕಣ್ಣು!

ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಮತ್ತು ದೇಶದ ಬೇರೆ ಬೇರೆ ಕಡೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳೂ ಮಹಿಳಾ ಮತದಾರರ ಓಲೈಕೆಗೆ ಮುಂದಾಗಿವೆ.

ಬಿಜೆಪಿ ಮಹಿಳಾ ಮೋರ್ಚಾ, ಪ್ರಸಕ್ತ ವರ್ಷದ ಕರ್ನಾಟಕ ಸಹಿತ 9 ವಿಧಾನಸಭೆ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಹಿಳಾ ಮತದಾರರನ್ನು ಸೆಳೆಯುವ ದೃಷ್ಟಿಯಿಂದ “ಕಮಲದೂತ’ ಅಭಿಯಾನ ನಡೆಸಲು ಮುಂದಾಗಿದೆ.

ಅದರಲ್ಲೂ ಬುಡಕಟ್ಟು ವರ್ಗದ ಮತ್ತು ಹಿಂದುಳಿದ ವರ್ಗಗಳ ಮಹಿಳೆಯರನ್ನೇ ಗುರಿಯಾಗಿಟ್ಟುಕೊಂಡು ಈ ಅಭಿಯಾನ ನಡೆಸಲಾಗುತ್ತಿದೆ. ಇದರಲ್ಲಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಹಿಳೆಯರನ್ನು ರಾಯಭಾರಿಗಳನ್ನಾಗಿ ಮಾಡಲಾಗುತ್ತದೆ. ಈ ಮೂಲಕ ಕೇಂದ್ರ ಮತ್ತು ಬಿಜೆಪಿ ಸರಕಾರಗಳ ಸಾಧನೆಗಳನ್ನು ಪ್ರಚುರ ಪಡಿಸಲು ಮುಂದಾಗಿದೆ. ಇವರಿಗೆ ತರಬೇತಿಯನ್ನೂ ನೀಡಲಾಗುತ್ತದೆ. ರಾಜ್ಯಾವಾರು ಅಭಿಯಾನ

ಈಗಾಗಲೇ ಈಶಾನ್ಯ ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗಿದ್ದು, ತಯಾರಿಯೂ ನಡೆಯುತ್ತಿದೆ. ಇದಕ್ಕೆ ಪೂರಕವಾಗಿ ಅಲ್ಲಿ ಮಹಿಳಾ ಮೋರ್ಚಾ ಕಡೆಯಿಂದ ಇಂಥದ್ದೇ ಅಭಿಯಾನ ನಡೆಸಲಾಗುತ್ತಿದೆ. ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್‌ಗಳಲ್ಲಿ ಬುಡಕಟ್ಟು ಜನಾಂಗದವರೇ ಹೆಚ್ಚಾಗಿದ್ದು, ಇವರಿಗೆ ಸರಕಾರಿ ಯೋಜನೆಗಳ ಬಗೆಗೆ   ಈ ಅಭಿಯಾನದ ಮೂಲಕ ತಿಳಿಸಿಕೊಡಲಾಗುತ್ತದೆ ಎಂದು ಮಹಿಳಾ ಮೋರ್ಚಾ ವಕ್ತಾರರು ಮತ್ತು ಮೇಘಾಲಯ ರಾಜ್ಯದ ಚುನಾವಣ ಸಹ ಉಸ್ತುವಾರಿ ನೀತು ದಬಾಸ್‌ ಹೇಳಿದ್ದಾರೆ. ಜತೆಗೆ ನಮ್ಮ ದೇಶದ ರಾಷ್ಟ್ರಪತಿ ಸಂಥಲ್‌ ಸಮುದಾಯಕ್ಕೆ ಸೇರಿದವರು ಎಂಬುದನ್ನೂ ನಾವು ಅರಿಯಬೇಕಿದೆ ಎಂದಿದ್ದಾರೆ.

ಹೀಗಾಗಿಯೇ ಬುಡಕಟ್ಟು ವರ್ಗದ ಮಹಿಳೆಯರನ್ನು ಗುರಿಯಾಗಿಸಿಕೊಂಡು, ಅವರನ್ನೂ ತಲುಪಲು ಬಿಜೆಪಿ ಮಹಿಳಾ ಮೋರ್ಚಾ ಮುಂದಾಗಿದೆ. ಬುಡಕಟ್ಟು ಜನಾಂಗದ ಕೆಲವು ಮಹಿಳೆಯರನ್ನು ಆರಿಸಿಕೊಂಡು ಇವರನ್ನು ಕಮಲ ದೂತರನ್ನಾಗಿ ಮಾಡಲಾಗುತ್ತದೆ. ಇವರ ಮೂಲಕವೇ ಸರಕಾರಿ ಕಾರ್ಯಕ್ರಮಗಳ ಪ್ರಚಾರ ನಡೆಸಲಾಗುತ್ತದೆ.

ಈ ತಿಂಗಳೇ ತರಬೇತಿ|
ಬಿಜೆಪಿ ಮಹಿಳಾ ಮೋರ್ಚಾ ಈ ತಿಂಗಳು ದೇಶಾದ್ಯಂತ ಮಹಿಳಾ ಕೇಡರ್‌ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಮೂಲಕ ಇವರಿಗೆಲ್ಲಾ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಇದಕ್ಕೆ ಕಾರಣವೂ ಇದೆ ಎಂದಿರುವ ಮಹಿಳಾ ಮೋರ್ಚಾ ಅಧ್ಯಕ್ಷೆ ವಾನತಿ ಶ್ರೀನಿವಾಸನ್‌, ನಮ್ಮ ಕಾರ್ಯಕರ್ತರಿಗೇ ಯೋಜನೆಗಳ ಬಗ್ಗೆ ಅರಿವು ಇರುವುದಿಲ್ಲ. ಹೀಗಾಗಿ ಅವರಿಗೆ ಮಾಹಿತಿ ನೀಡಬೇಕಾಗುತ್ತದೆ. ಆಗ ಈ ಕಾರ್ಯಕರ್ತರು ಜನಸಾಮಾನ್ಯರಿಗೆ ನಮ್ಮ ಯೋಜನೆಗಳ ಬಗ್ಗೆ ಚೆನ್ನಾಗಿ ತಿಳಿವಳಿಕೆ ನೀಡುತ್ತಾರೆ ಎಂದಿದ್ದಾರೆ. ನಮ್ಮ ತರಬೇತಿ ಕಾರ್ಯಕ್ರಮಗಳಿಂದಾಗಿ ಕಾರ್ಯಕರ್ತರಿಗೂ ಲಾಭವಿದೆ. ನಾವು ಹೆಚ್ಚೆಚ್ಚು ಮಂದಿಯನ್ನು ತಲುಪಬಹುದು ಎಂದು ವಾನತಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.