ಅತೃಪ್ತರ ನಿಲುವಿನ ಮೇಲೆ ಬಿಜೆಪಿ ಸರ್ಕಾರ ರಚನೆ ಪ್ರಯತ್ನ


Team Udayavani, Jul 26, 2019, 5:00 AM IST

BJP-545

ಬೆಂಗಳೂರು: ಬಿಜೆಪಿಗೆ ಬೆಂಬಲ ಘೋಷಿಸಿದ್ದ ಪಕ್ಷೇತರ ಶಾಸಕ ಆರ್‌.ಶಂಕರ್‌ ಹಾಗೂ ಕಾಂಗ್ರೆಸ್‌ನ ರಮೇಶ್‌ ಜಾರಕಿಹೊಳಿ, ಮಹೇಶ್‌ ಕುಮಟಳ್ಳಿ ಅನರ್ಹಗೊಂಡ ಬಳಿಕ ಉಳಿದ ಅತೃಪ್ತ ಶಾಸಕರು ತಮ್ಮ ರಾಜೀನಾಮೆ ನಿಲುವಿಗೆ ಎಷ್ಟರ ಮಟ್ಟಿಗೆ ಬದ್ಧರಾಗಿರಲಿದ್ದಾರೆ ಎಂಬುದರ ಮೇಲೆ ಬಿಜೆಪಿಯ ಸರ್ಕಾರ ರಚನೆ ಸಾಧ್ಯಾಸಾಧ್ಯತೆ ನಿರ್ಧಾರವಾಗಲಿದೆ.

ಕೆಲ ದಿನಗಳಲ್ಲಿ ಸ್ಪೀಕರ್‌ ಉಳಿದ ಶಾಸಕರ ರಾಜೀನಾಮೆ ಪ್ರಕರಣಗಳನ್ನು ಇತ್ಯರ್ಥಪಡಿಸುವುದಾಗಿ ಹೇಳಿರುವುದರಿಂದ ಸ್ಪೀಕರ್‌ ಕ್ರಮ ಕೈಗೊಳ್ಳುವವರೆಗೆ ನಿರೀಕ್ಷಿಸಬೇಕೋ ಅಥವಾ ಸರ್ಕಾರ ರಚನೆಗೆ ಅವಕಾಶ ಕೋರಿ ರಾಜ್ಯಪಾಲರ ಬಳಿ ಪ್ರಸ್ತಾವ ಮಂಡಿಸಬೇಕೋ ಎಂಬ ಜಿಜ್ಞಾಸೆ ಬಿಜೆಪಿಯಲ್ಲಿ ಮೂಡಿದೆ. ಜತೆಗೆ ಮಾಸಾಂತ್ಯದೊಳಗೆ ಹಣಕಾಸು ವಿಧೇಯಕಕ್ಕೂ ಅಂಗೀಕಾರ ಪಡೆಯಬೇಕಿರುವುದರಿಂದ ಒತ್ತಡದ ಸ್ಥಿತಿ ನಿರ್ಮಾಣವಾದಂತಾಗಿದೆ.

ಮಂಗಳವಾರ ವಿಶ್ವಾಸಮತ ಸಾಬೀತುಪಡಿಸಲಾಗದೆ ಮೈತ್ರಿ ಸರ್ಕಾರ ಪತನಗೊಂಡ ಮರುಕ್ಷಣದಿಂದಲೇ ರಾಜ್ಯ ಬಿಜೆಪಿ, ಸರ್ಕಾರ ರಚನೆಯ ಸಂಭ್ರಮದಲ್ಲಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಪ್ರಸ್ತಾವ ಮಂಡಿಸುವ ತವಕದಲ್ಲಿದ್ದರು. ಆದರೆ, ವರಿಷ್ಠರಿಂದ ಯಾವುದೇ ಸೂಚನೆ ಬಾರದ ಹಿನ್ನೆಲೆಯಲ್ಲಿ ರಾಜ್ಯ ನಿಯೋಗ ದೆಹಲಿಗೆ ತೆರಳಿದೆ. ಈ ನಡುವೆ ಸ್ಪೀಕರ್‌ ಕ್ರಮ ಬಿಜೆಪಿಯ ಸರ್ಕಾರ ರಚನೆ ಲೆಕ್ಕಾಚಾರದ ಮೇಲೆ ತುಸು ಪರಿಣಾಮ ಬೀರಿದಂತಿದೆ.

ಬಿಜೆಪಿ ಬಲ ಇಳಿಕೆ: ಮೈತ್ರಿ ಸರ್ಕಾರ ಸಂಖ್ಯಾಬಲ ಇಳಿಕೆ ಮಾಡುವ ಕಸರತ್ತಿನ ನಡುವೆಯೇ ಶಂಕರ್‌ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಬೆಂಬಲಿಸುವುದಾಗಿ ಪ್ರಕಟಿಸಿದ್ದರಿಂದ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಬಲ ಒಂದು ಹೆಚ್ಚಾಗಿತ್ತು. ಇದೀಗ ಆರ್‌.ಶಂಕರ್‌ ಅವರನ್ನು ಸ್ಪೀಕರ್‌ ಅನರ್ಹಗೊಳಿಸಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಸಂಖ್ಯಾಬಲ ಒಂದು ಇಳಿಕೆಯಾದಂತಾಗಿದ್ದು, ಬಿಜೆಪಿಯಲ್ಲಿ ತುಸು ಆತಂಕ ಸೃಷ್ಟಿಸಿದಂತಿದೆ.

ಅತೃಪ್ತರ ಬದ್ಧತೆ ಮುಖ್ಯ: ಕಾಂಗ್ರೆಸ್‌ನ ರಮೇಶ್‌ ಜಾರಕಿಹೊಳಿ, ಮಹೇಶ್‌ ಕುಮಟಳ್ಳಿ ಅವರನ್ನು ಅನರ್ಹ ಗೊಳಿಸಿರುವ ಸ್ಪೀಕರ್‌, ಉಳಿದ ಶಾಸಕರ ರಾಜೀನಾಮೆ ಪ್ರಕರಣವನ್ನು ಶೀಘ್ರವೇ ಇತ್ಯರ್ಥಪಡಿಸುವುದಾಗಿ ಪ್ರಕಟಿ ಸಿದ್ದಾರೆ. ಸದ್ಯ ಅನರ್ಹರಾದವರು 15ನೇ ವಿಧಾನಸಭೆಯ ಅವಧಿ ಮುಕ್ತಾಯವಾಗುವವರೆಗೆ ಚುನಾವಣೆಗೆ ಸ್ಪಧಿಸು ವಂತಿಲ್ಲ ಹಾಗೂ ರಾಜಕೀಯ ಹುದ್ದೆ ಪಡೆಯುವಂತಿಲ್ಲ. ಇದು ಉಳಿದ ಅತೃಪ್ತ ಶಾಸಕರ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದು ಮುಖ್ಯ.

ಏಕೆಂದರೆ ಸಚಿವ ಸ್ಥಾನ ಸಿಕ್ಕಿಲ್ಲ. ಹಿರಿತನ, ಅನುಭವವನ್ನು ಬಳಸಿಕೊಂಡಿಲ್ಲ ಎಂಬ ಕಾರಣಕ್ಕೆ ಹಲವು ಶಾಸಕರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಮುಂದೆ ಬಿಜೆಪಿ ಸರ್ಕಾರ ರಚನೆಯಾದರೆ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನೂ ನೀಡಲಾಗಿದೆ ಎಂಬ ಮಾತುಗಳಿವೆ. ಹೀಗಿರುವಾಗ ಒಂದೊಮ್ಮೆ ಅನರ್ಹಗೊಂಡರೆ ಸಚಿವರಾಗುವುದಿರಲಿ, ಉಪಚುನಾವಣೆಗೂ ಸ್ಪರ್ಧಿಸಲು ಅವಕಾಶವಿರುವುದಿಲ್ಲ. ಆ ಹಿನ್ನೆಲೆಯಲ್ಲಿ ಅತೃಪ್ತರು ಈವರೆಗಿನ ರಾಜೀನಾಮೆ ನಿರ್ಧಾರಕ್ಕೆ ಎಷ್ಟರ ಮಟ್ಟಿಗೆ ಬದ್ಧವಾಗಿರಲಿದ್ದಾರೆ ಎಂಬುದರ ಮೇಲೆ ಬಿಜೆಪಿಯ ಸರ್ಕಾರ ರಚನೆ ಲೆಕ್ಕಾಚಾರ ನಿರ್ಧಾರವಾಗಲಿದೆ.

ಒತ್ತಡದಲ್ಲಿ ಕಮಲ ಪಾಳಯ

ಮೈತ್ರಿ ಸರ್ಕಾರ ಪತನವಾಗುತ್ತಿದ್ದಂತೆ ಸರ್ಕಾರ ರಚನೆಗೆ ಉತ್ಸಾಹ ತೋರಿದ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್‌ ಹಸಿರು ನಿಶಾನೆ ತೋರಲಿಲ್ಲ. ಇದೀಗ ಪಕ್ಷೇತರ ಆರ್‌.ಶಂಕರ್‌ ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ ಸಂಖ್ಯಾಬಲ ಕುಸಿದಿದೆ. ಇನ್ನೂ 13 ಶಾಸಕರ ರಾಜೀನಾಮೆ ಪ್ರಕರಣ ಇನ್ನೂ ಇತ್ಯರ್ಥವಾಗಿಲ್ಲ. ಒಂದೊಮ್ಮೆ ಉಳಿದ ಶಾಸಕರ ರಾಜೀನಾಮೆ ಇತ್ಯರ್ಥವಾಗುವವರೆಗೆ ಸರ್ಕಾರ ರಚನೆ ಪ್ರಯತ್ನ ಬೇಡ ಎಂದು ವರಿಷ್ಠರು ಸೂಚಿಸಿದರೆ ಇತ್ತ ಅತೃಪ್ತ ಶಾಸಕರನ್ನು ಒಗ್ಗಟ್ಟಾಗಿ ಇನ್ನೂ ಸ್ವಲ್ಪ ಕಾಲ ಹಿಡಿದಿಟ್ಟುಕೊಳ್ಳುವ ಸವಾಲು ಎದುರಾಗಲಿದೆ. ಒಂದೊಮ್ಮೆ ಸರ್ಕಾರ ರಚನೆಗೆ ಪ್ರಸ್ತಾವ ಮಂಡಿಸಿದರೆ ತಕ್ಷಣವೇ ಪ್ರಮಾಣ ವಚನ ಸ್ವೀಕರಿಸಿ ಬಳಿಕ ವಿಧಾನಸಭೆ ಯಲ್ಲಿ ಬಹುಮತ ಸಾಬೀತುಪಡಿಸಿ ಹಣಕಾಸು ವಿಧೇಯಕಕ್ಕೆ ಅನುಮೋದನೆ ಪಡೆಯಬೇಕಾಗುತ್ತದೆ. ಈ ಎಲ್ಲ ಲೆಕ್ಕಾಚಾರದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯು ಒತ್ತಡಕ್ಕೆ ಸಿಲುಕಿದಂತಿದೆ. ಎಲ್ಲವೂ ಬಿಜೆಪಿ ವರಿಷ್ಠರ ನಿರ್ಧಾರದ ಮೇಲೆ ನಿಂತಿದೆ.
-ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.