ಬಿಜೆಪಿ ಈಗ ಕಲಬೆರಕೆ ಪಕ್ಷ: ಪ್ರಮೋದ ಮುತಾಲಿಕ

ಮತಾಂತರ ನಿಷೇಧ ಕಾಯ್ದೆಗಾಗಿ ಸಿಎಂ ಬಳಿ ನಿಯೋಗ

Team Udayavani, Nov 10, 2021, 5:46 PM IST

ಬಿಜೆಪಿ ಈಗ ಕಲಬೆರಕೆ ಪಕ್ಷ: ಪ್ರಮೋದ ಮುತಾಲಿಕ

ಬಾಗಲಕೋಟೆ: ಬಿಜೆಪಿ ಇಂದು ಕಲಬೆರಕೆ ಪಕ್ಷವಾಗಿದೆ. ಬಿಜೆಪಿಯಲ್ಲಿ ಇಂದು ಶೇ.60ರಿಂದ 70ರಷ್ಟು ಜನ ಕಾಂಗ್ರೆಸ್‌-ಜೆಡಿಎಸ್‌ನಿಂದ ಬಂದಿದ್ದಾರೆ. ಕಮ್ಯುನಿಸ್ಟರೂ ಬಂದಿದ್ದಾರೆ. ಶೇ.30ರಿಂದ 40 ಮಾತ್ರ ಮೂಲ ಬಿಜೆಪಿಯವರಿದ್ದಾರೆ. ಹೀಗಾಗಿ ಬಿಜೆಪಿ ಕಲಬೆರಕೆ ಪಕ್ಷವಾಗಿದೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರಿಗೆ ಹಿಂದುತ್ವ ಇಲ್ಲ. ಅವರಿಗೆ ಬರೀ ಲೂಟಿ ಮಾಡಬೇಕು ಎಂಬುದೇ ಚಿಂತೆ. ಕಾಂಗ್ರೆಸ್‌ ನವರು ಈವರೆಗೆ ಭಯೋತ್ಪಾದಕರನ್ನೇ ಬೆಳೆಸಿದ್ದಾರೆ. ಅಂಥವರು ಇಂದು ಬಿಜೆಪಿಯಲ್ಲಿದ್ದಾರೆ. ಅವರಿಗೆ ಹಿಂದುತ್ವ, ಧರ್ಮ, ದೇಶ, ಸಂಸ್ಕೃತಿ, ಮಾನ-ಮರ್ಯಾದೆ ಏನೂ ಇಲ್ಲ. ಬಿಜೆಪಿ ಇಂದು ಮೂಲ ಬಿಜೆಪಿಯಾಗಿ ಉಳಿದಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ ತಮ್ಮ ಕ್ಷೇತ್ರದಲ್ಲಿ 52 ಅಡಿ ಎತ್ತರದ ಏಸುಕ್ರಿಸ್ತನ ಪುತ್ಥಳಿ ಕೂರಿಸಲು ಹೊರಟಿದ್ದಾರೆ. ಸೋನಿಯಾ ಗಾಂಧಿ ಅವರನ್ನು ಸೆಳೆಯಲು ಇಂತಹ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಜೆ ಹಳ್ಳಿ, ಕೆ.ಜೆ. ಹಳ್ಳಿ ಗಲಾಟೆಯಾದಾಗ ಇದೇ ಡಿ.ಕೆ. ಶಿವಕುಮಾರ, ನಾವೆಲ್ಲ ಬ್ರದರ್ ಆ್ಯಂಡ್‌ ಸಿಸ್ಟರ್ಸ್‌ ಅಂದಿದ್ದರು. ಶಿವಕುಮಾರ ಅವರೇ ದೇಶ ಮೊದಲು. ದೇಶ ಉಳಿದರೆ ನೀವು ಕೆಪಿಸಿಸಿ ಅಧ್ಯಕ್ಷರಾಗಿ ಉಳಿಯುತ್ತೀರಿ. ಇಲ್ಲದೇ ಹೋದರೆ ನೀವು ಇಟಲಿಗೆ ಹೋಗಬೇಕಾಗುತ್ತದೆ ಎಂದು ಹೇಳಿದರು.

ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಪಕ್ಷದವರಿಂದಲೇ ದೇವಸ್ಥಾನ ಒಡೆಯಲಾಗುತ್ತಿದೆ. ಇದು ಬಹಳ ಬೇಸರ ತರಿಸಿದೆ. ನಾವು ಈ ವಿಷಯದಲ್ಲಿ ಹೋರಾಟ ಮಾಡುತ್ತೇವೆ. ನಾವೇನು ಕೈಕಟ್ಟಿ ಕುಳಿತಿಲ್ಲ ಎಂಬುದು ಅಧಿಕಾರದಲ್ಲಿರುವವರು ತಿಳಿದುಕೊಳ್ಳಲಿ. ಸುಪ್ರೀಂಕೋರ್ಟ್‌ ಆದೇಶವೆಂದು ಹಿಂದೂ ದೇವಸ್ಥಾನ ಒಡೆದರು. ಮಸೀದಿಯಲ್ಲಿನ ಮೈಕ್‌ ತೆರವುಗೊಳಿಸಬೇಕೆಂದು ಕೂಡ ಸುಪ್ರೀಂಕೋರ್ಟ್‌ ಆದೇಶಿಸಿದೆ. ರಾಜ್ಯದಲ್ಲಿ ಈ ಆದೇಶ ಏಕೆ ಪಾಲನೆ ಮಾಡುತ್ತಿಲ್ಲ?. ಮಸೀದಿ ತೆರವುಗೊಳಿಸುವಂತೆ ನಾವು ಹೋರಾಟ ಮಾಡುತ್ತಿದ್ದೇವೆ. ಮುಂದೆ ದೊಡ್ಡ ಪ್ರಮಾಣದಲ್ಲಿ ಧರಣಿ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮತಾಂತರ ಕಾಯ್ದೆ ಜಾರಿಗೆ ಸಿಎಂ ಭೇಟಿ: ರಾಜ್ಯದ ನೂರಕ್ಕೂ ಹೆಚ್ಚು ಜನ ಮಠಾಧೀಶರೊಂದಿಗೆ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಒತ್ತಾಯಿಸಿ ನ.12ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದೇವೆ. ರಾಜ್ಯದ ಹಲವು ಮಠಾಧೀಶರು ಸೇರಿ ನಿಯೋಗದ ಮೂಲಕ ಸಿಎಂ ಭೇಟಿ ಮಾಡಲಾಗುವುದು ಎಂದು ತಿಳಿಸಿದರು.

ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ ಮತಾಂತರ ವಿಷಯ ವಿಧಾನಸಭೆಯಲ್ಲಿ ಚರ್ಚೆಗೆ ತಂದಿದ್ದಾರೆ. ಅವರನ್ನು ನಾನು ಅಭಿನಂದಿಸುತ್ತೇನೆ. ಅವರ ತಾಯಿಯೇ ಮತಾಂತರ ಆಗಿದ್ದರ ಬಗ್ಗೆ ವಿವರಿಸಿದ್ದರು. ಮತಾಂತರ ಮಾಡುತ್ತಿಲ್ಲವಾದರೆ ಹೆದರುವುದೇಕೆ?. ನಮ್ಮ ದೇಶದ ಶೇ.99 ಕ್ರಿಶ್ಚಿಯನ್ನರು ಮತಾಂತರ ಆದವರಿದ್ದಾರೆ. ಒತ್ತಾಯ, ಆಸೆ, ಆಮಿಷಗಳಿಂದ ಮತಾಂತರ ಆಗಿದ್ದಾರೆ. ಮತಾಂತರದ ಹಾವಳಿ ವಿಪರೀತವಾಗಿದೆ. ಲಂಬಾಣಿ ತಾಂಡಾಗಳಿಗೆ ಫಾದ್ರಿಗಳು ನುಗ್ಗುತ್ತಿದ್ದಾರೆ. ಅವರನ್ನು ಗೋವಾಕ್ಕೆ ಕರೆದುಕೊಂಡು ಹೋಗಿ ಮತಾಂತರ ಮಾಡುತ್ತಿದ್ದಾರೆ. ಕ್ರಿಶ್ಚಿಯನ್‌, ಶಾಲೆ-ಸಂಘ ಸಂಸ್ಥೆಗಳು ಕೊನೆಗೆ ಮತಾಂತರದಲ್ಲೇ ಮುಕ್ತಾಯವಾಗುತ್ತವೆ. ಶಿಕ್ಷಣ, ಆರೋಗ್ಯ ಸೇವೆ ಎಲ್ಲವೂ ಬೂಟಾಟಿಕೆ ಎಂದು ಆರೋಪಿಸಿದರು.

ಪುನೀತ್‌ಗೆ ಪದ್ಮಶ್ರೀ ಕೊಡಿ
ಈಚೆಗೆ ಅಗಲಿದ ಯುವ ನಟ ಪುನೀತ್‌ ರಾಜಕುಮಾರ್‌ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು. ಅವರ ಸಾಮಾಜಿಕ ಸೇವೆ, ನಟನೆ ಅತ್ಯದ್ಭುತ. ರಾಜಕುಮಾರ್‌ ಅವರ ಮಗ ತದ್ರೂಪಿಯಾಗಿ ಯೋಗ್ಯವಾದ ನಟನೆ ಮಾಡುತ್ತಿದ್ದರು. ಅವರ ಪ್ರತಿಯೊಂದು ಸಿನೆಮಾದಲ್ಲಿ ಉತ್ತಮ ಸಂದೇಶ ಇರುತ್ತಿತ್ತು. ರಾಜ್ಯದಲ್ಲಿ ಗಣಿ ಲೂಟಿ ಆಗುತ್ತಿದ್ದಾಗ ಅದಕ್ಕೆ ಸಂಬಂಧಿಸಿದ ಸಿನೆಮಾ ತೆಗೆದಿದ್ದರು. ಯುವರತ್ನ ಮೂಲಕ ಕಾಲೇಜ್‌ನಲ್ಲಿ ಡ್ರಗ್ಸ್‌ ಮಾಫಿಯಾಗೆ ಸಂಬಂಧಿಸಿದ ಸಂದೇಶ ಇತ್ತು. ಹೀಗಾಗಿ ಪ್ರಶಸ್ತಿ ಕೊಡುವುದರಲ್ಲಿ ತಪ್ಪಿಲ್ಲ. ನ.12ರಂದು ಅಪ್ಪು ಮನೆ ಮತ್ತು ಸಮಾಧಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸುತ್ತೇನೆ.
ಪ್ರಮೋದ ಮುತಾಲಿಕ, ರಾಷ್ಟ್ರೀಯ ಅಧ್ಯಕ್ಷ, ಶ್ರೀರಾಮ ಸೇನೆ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.