BJP: ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಸಿದ್ಧತೆ- ಹೊಸ ಮುಖಗಳಿಗೆ ಆದ್ಯತೆ ನಿರೀಕ್ಷೆ

ಈ ಬಾರಿ ಅ.ದೇವೇಗೌಡಗೆ ಟಿಕೆಟ್‌ ಸಂಶಯ- 6 ಕ್ಷೇತ್ರಗಳಿಗೆ ಉಸ್ತುವಾರಿಗಳ ನೇಮಕ

Team Udayavani, Oct 14, 2023, 6:03 PM IST

BJP FLAG 1

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಸಿದ್ಧತೆ ಪ್ರಾರಂಭಿಸಿದೆ. ಮಾಜಿ ಸಚಿವ ಆರ್‌.ಅಶೋಕ್‌ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು, ಹಾಲಿ ಸದಸ್ಯ ಅ.ದೇವೇಗೌಡ ಅವರಿಗೆ ಮೂರನೇ ಅವಧಿಗೆ ಟಿಕೆಟ್‌ ಲಭ್ಯವಾಗಲಿದೆಯೇ ಎಂಬ ಕುತೂಹಲ ಸೃಷ್ಟಿಯಾಗಿದೆ.

ಬೆಂಗಳೂರು ಪದವಿಧರ, ಬೆಂಗಳೂರು ಶಿಕ್ಷಕ, ನೈಋತ್ಯ ಪದವೀಧರ, ದಕ್ಷಿಣ ಶಿಕ್ಷಕ ಕ್ಷೇತ್ರ ಸಹಿತ ವಿಧಾನ ಪರಿಷತ್‌ಗೆ ಚುನಾವಣೆಗೆ ಬಿಜೆಪಿ ಈಗಾಗಲೇ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಜನವರಿ ಮೊದಲ ವಾರದಲ್ಲಿ ಟಿಕೆಟ್‌ ಘೋಷಣೆಯಾಗುವ ನಿರೀಕ್ಷೆ ಇದೆ. ಒಟ್ಟು ಏಳು ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳಿದ್ದು, 2024ರ ಜೂನ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರವಾರು ಸಿದ್ಧತೆಗಳು ಪ್ರಾರಂಭವಾಗಿದೆ.

ಸದಸ್ಯರ ನೋಂದಣಿಗೆ ಟಾರ್ಗೆಟ್‌
ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣ ಉಸ್ತುವಾರಿ ಆರ್‌.ಅಶೋಕ್‌, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಹಾಗೂ ಆಕಾಂಕ್ಷಿಗಳ ಜತೆಗೆ ಸಭೆ ನಡೆದಿದ್ದು, ಸದಸ್ಯರ ನೋಂದಣಿಗೆ “ಟಾರ್ಗೆಟ್‌’ ನಿಗದಿ ಮಾಡಲಾಗಿದೆ.

ಹೊಸ ಮುಖಗಳಿಗೆ ಆದ್ಯತೆ
ಬೆಂಗಳೂರು ಪದವೀಧರ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎಂದೇ ವ್ಯಾಖ್ಯಾನಿಸಲಾಗುತ್ತಿದ್ದು, ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳಿಗೆ ಕೆಲವು ದಶಕಗಳಿಂದ ಮಣೆ ಹಾಕಲಾಗುತ್ತಿದೆ. ಕಳೆದ ಎರಡು ಅವಧಿಗೆ ಅ.ದೇವೇಗೌಡ ಸ್ಪರ್ಧಿಸಿ ಗೆಲುವು ಸಾಧಿಸುತ್ತಿದ್ದಾರೆ. ಕಾಂಗ್ರೆಸ್‌ನಿಂದ ಕಳೆದ ಬಾರಿ ರಾಮೋಜಿ ಗೌಡರನ್ನು ಕಣಕ್ಕಿಳಿಸಲಾಗಿತ್ತು. ಈ ಬಾರಿ ಬಿಜೆಪಿಯಿಂದ ಹೊಸ ಮುಖಕ್ಕೆ ಆದ್ಯತೆ ನೀಡಬೇಕೆಂಬ ಮಾತುಗಳು ಕೇಳಿ ಬರುತ್ತಿದೆ.

ವಿನೋದ್‌ ಕೆ.ಗೌಡ, ಆನಂದ್‌ ಹೆಸರು ಪ್ರಸ್ತಾವ
ಆದಾಗಿಯೂ ದೇವೇಗೌಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಗುರುವಾರ ನಡೆದ ಸಭೆಗೆ ಅ.ದೇವೇಗೌಡ ಸಹಿತ ಐವರು ಆಕಾಂಕ್ಷಿಗಳು ಹಾಜರಾಗಿದ್ದರು. ಈ ಪೈಕಿ ಬಿಜೆಪಿ ಸಾಮಾಜಿಕ ಜಾಲ ತಾಣ ಪ್ರಕೋಷ್ಠದ ಮಾಜಿ ಸಂಚಾಲಕ ಹಾಗೂ ಚುನಾವಣ ಸಮಿತಿ ಸದಸ್ಯ ವಿನೋದ್‌ ಕೆ.ಗೌಡ ಹಾಗೂ ಬಿಜೆಪಿ ಮಾಜಿ ಸಹ ವಕ್ತಾರ ಎ.ಎಚ್‌.ಆನಂದ್‌ ಹೆಸರು ಬಲವಾಗಿ ಕೇಳಿ ಬರುತ್ತಿದೆ.

ಹೊಸಬರ ನೋಂದಣಿ
ಬೆಂಗಳೂರಿನಲ್ಲಿ ಪದವೀಧರರ ಸಂಖ್ಯೆಗೂ ಸದಸ್ಯತ್ವ ನೋಂದಣಿ ಮಾಡಿಕೊಳ್ಳುವವರ ಸಂಖ್ಯೆಗೂ ಅಜಗಜಾಂತರವಿದೆ. ಶಿಕ್ಷಕರು, ವಕೀಲರು, ಪತ್ರಕರ್ತರು, ಸರಕಾರಿ ನೌಕರರು ಸಹಿತ ಸಾಂಪ್ರದಾಯಿಕ ಮತದಾರರನ್ನು ಮಾತ್ರ ನಂಬಿಕೊಂಡು ಚುನಾವಣೆ ಎದುರಿಸಲಾಗುತ್ತಿದ್ದು, ಹೊಸ ಮತದಾರರನ್ನು ನೋಂದಣಿ ಮಾಡಿಸುವ ಪ್ರಯತ್ನವನ್ನು ವಿನೋದ್‌ ಕೆ.ಗೌಡ ಪ್ರಾರಂಭಿಸಿದ್ದಾರೆ.

ದೇವೇಗೌಡ ಪಟ್ಟು
ಸಾಮಾಜಿಕ ಜಾಲ ತಾಣ ಹಾಗೂ ನವಮಾಧ್ಯಮವನ್ನು ಬಳಸಿಕೊಂಡು ನೋಂದಣಿ ಕಾರ್ಯ ಆರಂಭಿಸಿದ್ದಾರೆ. ಆದರೆ ಈ ಬಾರಿ ತಮಗೆ ಕೊನೆಯ ಅವಕಾಶವಾಗಿ ಟಿಕೆಟ್‌ ನೀಡಲೇಬೇಕು ಎಂದು ಅ.ದೇವೇಗೌಡ ಪಟ್ಟು ಹಿಡಿದಿದ್ದು, ಹೊಸಬರಿಗೆ ಅವಕಾಶ ನೀಡಬೇಕೋ, ಬೇಡವೋ ಎಂಬುದನ್ನು ನೋಂದಣಿಯಲ್ಲಿ ಸಾಧಿಸುವ ಪ್ರಾಬಲ್ಯ ಆಧರಿಸಿ ನಿರ್ಧರಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಚುನಾವಣ ಉಸ್ತುವಾರಿಗಳ ನೇಮಕ
ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಬಿ.ಶ್ರೀರಾಮುಲು, ನೈಋತ್ಯ ಪದವೀಧರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಿ.ಟಿ.ರವಿ, ಆಗ್ನೇಯ ಶಿಕ್ಷಕ ಕ್ಷೇತ್ರಕ್ಕೆ ಡಿ.ವಿ.ಸದಾನಂದ ಗೌಡ, ದಕ್ಷಿಣ ಶಿಕ್ಷಕ ಕ್ಷೇತ್ರಕ್ಕೆ ಕೆ.ಎಸ್‌.ಈಶ್ವರಪ್ಪ ಹಾಗೂ ಬೆಂಗಳೂರು ಶಿಕ್ಷಕ ಕ್ಷೇತ್ರಕ್ಕೆ ಡಾ| ಸಿ.ಎನ್‌.ಅಶ್ವತ್ಥನಾರಾಯಣ ಅವರನ್ನು ಚುನಾವಣ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.