ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್‌, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ


Team Udayavani, Dec 8, 2023, 1:05 AM IST

vijayendra R Ashok

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕಲಾಪ ನಡೆಯುತ್ತಿರುವ ವೇಳೆ ಧರಣಿ ನಡೆಸುವುದೋ, ಸಭಾತ್ಯಾಗ ಮಾಡುವುದೋ ಎಂಬ ಗೊಂದಲ ಗುರುವಾರ ಬಿಜೆಪಿಯನ್ನು ಕಾಡಿತು. ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್‌ ಮೇಲಿನ ಹಲ್ಲೆ ಪ್ರಕರಣ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯ ಅಭಿಜಿತ್‌ ಧವಳಕರ್‌ ಅಕ್ರಮ ಬಂಧನ ವಿಚಾರದಲ್ಲಿ ಯಾವ ಕ್ರಮ ಅನುಸರಿಸುವುದು ಎಂಬ ಬಗ್ಗೆ ವಿಪಕ್ಷ ಬಿಜೆಪಿಯ ಹಿಂದಿನ ಸಾಲು ಹಾಗೂ ಮುಂದಿನ ಸಾಲಿನ ಸದಸ್ಯರ ಮಧ್ಯೆ ಗೊಂದಲ ಉಂಟಾದ ಪ್ರಸಂಗ ನಡೆಯಿತು.

ಸರಕಾರಕ್ಕೆ ಬಿಸಿ ಮುಟ್ಟಿಸುವಂತೆ ಹೋರಾಟ ನಡೆಸಿಲ್ಲವೆಂದು ಸ್ವಪಕ್ಷೀಯರ ವಿರುದ್ಧವೇ ಶಾಸಕರಾದ ಎಸ್‌.ಆರ್‌. ವಿಶ್ವನಾಥ್‌ ಹಾಗೂ ಬೆಳಗಾವಿ ದಕ್ಷಿಣ ಶಾಸಕ ಅಭಯ್‌ ಪಾಟೀಲ್‌ ಬಹಿರಂಗವಾಗಿ ಮುನಿಸು ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಅಧಿವೇಶನ ಪ್ರಾರಂಭವಾದ ದಿನದಿಂದಲೂ ಬಿಜೆಪಿ ನಾಯಕರ ಮಧ್ಯೆ ಹುಟ್ಟಿಕೊಂಡಿದ್ದ ಅಂತರ ಹಾಗೂ ವೈರುಧ್ಯ ಗುರುವಾರ ಸ್ಫೋಟಗೊಂಡಿತು. ವಿಪಕ್ಷ ನಾಯಕ ಆರ್‌. ಅಶೋಕ್‌ ಸಭಾತ್ಯಾಗದ ನಿರ್ಧಾರ ತೆಗೆದುಕೊಂಡದ್ದು ರಾಜ್ಯಾಧ್ಯಕ್ಷ ವಿಜಯೇಂದ್ರ ಸಹಿತ ಹಲವರ ಬೇಸರಕ್ಕೆ ಕಾರಣವಾಗಿದೆ. ನಾಯಕರು ಸಭಾತ್ಯಾಗ ನಡೆಸಿದರೂ ಅಭಯ ಪಾಟೀಲ್‌ ಮಾತ್ರ ಧರಣಿ ನಡೆಸಿದರು. ಆದರೆ ಎಸ್‌.ಆರ್‌. ವಿಶ್ವನಾಥ್‌ ಮಾತ್ರ ಅಶೋಕ್‌ ಬಳಿಗೆ ತೆರಳಿ ವಿರೋಧ ವ್ಯಕ್ತಪಡಿಸಿದರು.

ನಡೆದದ್ದೇನು?
ಪೃಥ್ವಿ ಸಿಂಗ್‌ ನೀಡಿದ ದೂರು ಆಧರಿಸಿ ಪೊಲೀಸರು ಎಂಎಲ್‌ಸಿ ಚನ್ನರಾಜ್‌ ಹಟ್ಟಿಹೊಳಿ ಹಾಗೂ ಬೆಂಬಲಿಗರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿಲ್ಲ, ಮಹಾನಾಗರ ಪಾಲಿಕೆ ಸದಸ್ಯರನ್ನು ಅಕ್ರಮವಾಗಿ ಬಂಧಿಸಿದ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ ಎಂದು ಬಿಜೆಪಿ ಶಾಸಕರು ವಿಜಯೇಂದ್ರ ನೇತೃತ್ವದಲ್ಲಿ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಸುನಿಲ್‌ ಕುಮಾರ್‌, ಅಭಯ್‌ ಪಾಟೀಲ್‌, ಸುರೇಶ್‌ ಕುಮಾರ್‌, ಆರಗ ಜ್ಞಾನೇಂದ್ರ ಮೊದಲಾದವರು ಬೆಂಬಲ ನೀಡಿದರು.

ಈ ಹಂತದಲ್ಲಿ ಅಶೋಕ ಅವರ ಬಳಿ ಬಂದ ಬಿ.ವೈ. ವಿಜಯೇಂದ್ರ ಮುಂದಿನ ನಡೆಯ ಬಗ್ಗೆ ಪ್ರಶ್ನಿಸಿದರು. ವಿಜಯೇಂದ್ರ ತಮ್ಮ ಸ್ಥಾನಕ್ಕೆ ತೆರಳುವಷ್ಟರಲ್ಲಿ ಬಹುತೇಕ ಶಾಸಕರು ಸಭಾಧ್ಯಕ್ಷರ ಪೀಠದ ಎದುರು ತೆರಳಿ ಧರಣಿಗೆ ಸಿದ್ಧರಾಗಿದ್ದರು. ವಿಜಯೇಂದ್ರ ಅವರ ಆಂಗಿಕ ಸೂಚನೆಯೂ ಅದೇ ರೀತಿ ಇತ್ತು. ಆದರೆ ಧರಣಿಗೆ ಹೊರಟಿದ್ದ ಶಾಸಕರಿಗೆ ತಮ್ಮ ಸ್ಥಾನಕ್ಕೆ ತೆರಳುವಂತೆ ಸೂಚಿಸಿದ ವಿಪಕ್ಷ ನಾಯಕ ಅಶೋಕ್‌, ಸರಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿ ಸಭಾತ್ಯಾಗ ಮಾಡಿದರು. ಮೊದಲ ಹಾಗೂ ಎರಡನೇ ಸಾಲಿನ ಸದಸ್ಯರು ಹೊರನಡೆದರೆ ಯಾವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬುದು ಅರ್ಥವಾಗದೆ ಹಿಂದಿನ ಸಾಲಿನ ಶಾಸಕರು ಗೊಂದಲಕ್ಕೆ ಮುಳುಗಿದರು. ಸಭಾತ್ಯಾಗದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬುದು ತಿಳಿಯುತ್ತಿದ್ದಂತೆ ವಿಶ್ವನಾಥ್‌ ಅವರು ಅಶೋಕ್‌ ಎದುರು ತೆರಳಿ ಬೇಸರ ವ್ಯಕ್ತಪಡಿಸಿ ಹೊರನಡೆದರು. ಅಭಯ್‌ ಪಾಟೀಲ್‌ ಮಾತ್ರ ಧರಣಿ ನಡೆಸಿದರು.

ಒಟ್ಟಾರೆಯಾಗಿ ಗೊಂದಲ ವಾತಾವರಣ ನಿರ್ಮಾಣವಾದದ್ದರಿಂದ ವಿಪಕ್ಷ ಸದಸ್ಯರ ಕೋಣೆಗೆ ತೆರಳಿ ಅಶೋಕ್‌ ಜತೆ ವಿಜಯೇಂದ್ರ ಹಾಗೂ ಹಿರಿಯ ಸದಸ್ಯರು ಸಭೆ ನಡೆಸಿದರು. ಈ ಎರಡು ವಿಚಾರಗಳ ಬಗ್ಗೆ ಬುಧವಾರವೂ ಹೋರಾಟ ನಡೆಸಿದ್ದೇವೆ. ಈಗ ಮತ್ತೆ ಧರಣಿ ನಡೆಸಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬ ಕಾರಣಕ್ಕೆ ಸಭಾತ್ಯಾಗ ಮಾಡಲಾಗಿದೆ ಎಂದು ಅಶೋಕ್‌, ಯತ್ನಾಳ್‌, ಆರಗ ಜ್ಞಾನೇಂದ್ರ, ಸಿ.ಸಿ.ಪಾಟೀಲ್‌ ಉಳಿದವರ ಮನವೊಲಿಸಿದ ಬಳಿಕ ವಾತಾವರಣ ತಿಳಿಯಾಯಿತು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.